
ಮಂಜುನಾಥ್ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಗಳನ್ನು ಬಂಧಿಸಿದ ತರೀಕೆರೆಯ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ತಂಡ
ತರೀಕೆರೆ ಪೊಲೀಸರ ಕಾರ್ಯಾಚರಣೆ. ಪರಾರಿಯಾಗಿದ್ದ ಕೊಲೆ ಆರೋಪಿಗಳ ಬಂಧನ. ದಿನಾಂಕ 1 26ರಂದು ರಾತ್ರಿ ಎರಡು ಗಂಟೆಯ ಸಮಯದಲ್ಲಿ ಕೋಟೇಶ್ ಎಂ ಬಿನ್ ಲೇಟ್ ಮೈಲಾರಪ್ಪ ರವರು ತರೀಕೆರೆ ತಾಲೂಕು ಲಿಂಗದಹಳ್ಳಿ ಹೋಬಳಿ ಹೊಡೆಯುವ ಗ್ರಾಮದವರು. ನೀಡಿದ ದೂರಿನ ಆಧಾರದ ಮೇಲೆ ದಿನಾಂಕ 31 12/2025 ರಂದು ಹುಡುಗಿಯ ಹುಟ್ಟುಹಬ್ಬಕ್ಕೆ ಸಾಮಾಜಿಕ ಜಾಲತಾಣದಲ್ಲಿ ವಿಶ್ ಮಾಡಿದ ವಿಚಾರಕ್ಕೆ ರಾತ್ರಿ ಸರಿಸುಮಾರು 10.45 ರ ಸಮಯದಲ್ಲಿ ಆರೋಪಿಗಳಾದ ಕಿರಣ್ ಮತ್ತು ಮನು ಹಾಗೂ ಇತರರು ಸೇರಿ ಅತ್ತಿಗನಾಳು ಕಡೆಗೆ ಹೋಗುವ ಬೈಪಾಸ್ ಹತ್ತಿರ ಮಂಜುನಾಥ್ 21 ವರ್ಷ ರವರಿಗೆ ಏಕಾಏಕಿ ಕೊಲೆ ಮಾಡುವ ಉದ್ದೇಶದಿಂದ ಕೈಯಲ್ಲಿದ್ದ ಚಾಕುವಿನಿಂದ ಹೊಟ್ಟೆಗೆ ಚುಚ್ಚಿ ಪರಾರಿ ಯಾಗಿದ್ದರು. ಗಾಯಾಳುವಾಗಿದ್ದ ಮಂಜುನಾಥನು ಶಿವಮೊಗ್ಗದ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುತ್ತಾನೆ. ಈ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳನ್ನು ಪತ್ತೆ ಹಚ್ಚುವಂತೆ ಮಾನ್ಯ ಪೋಲಿಸ್ ಅಧೀಕ್ಷಕರು ಚಿಕ್ಕಮಗಳೂರು ಹಾಗೂ ತರೀಕೆರೆ ಪೊಲೀಸ್ ಠಾಣಾ ಅಧಿಕಾರಿ ಮತ್ತು ಸಿಬ್ಬಂದಿಗಳ ವಿಶೇಷ ತಂಡವನ್ನು ರಚಿಸಿ ಅದರಂತೆ ತಂಡವು ಆರೋಪಿಗಳಾದ ಕಿರಣ್ 19 ವರ್ಷ ಮತ್ತು ಮನು 21 ವರ್ಷ ಇವರನ್ನು ತರೀಕೆರೆ ಟೌನ್ ಪೋಲಿಸರು ಬಂಧಿಸಿರುತ್ತಾರೆ. ಈ ಕಾರ್ಯಾಚರಣೆಯು ಶ್ರೀ ಜಿತೇಂದ್ರ ಕುಮಾರ್ ದಯಾಮ ಪೊಲೀಸ್ ಅಧಿಕಾರಿ ಚಿಕ್ಕಮಗಳೂರು ಹಾಗೂ ಶ್ರೀ ಸಿಟಿ ಜಯಕುಮಾರ್ ಹೆಚ್ಚುವರಿ ಪೋಲಿಸ್ ಅಧ್ಯಕ್ಷರು ಚಿಕ್ಕಮಗಳೂರು ಹಾಗೂ ಶ್ರೀ ಪರಶುರಾಮಪ್ಪ ಮಾನ್ಯ ಪೋಲಿಸು ಉಪ ದೀಕ್ಷಕರು ತರೀಕೆರೆ ರವರುಗಳ ಮಾರ್ಗದರ್ಶನದಲ್ಲಿ ತರೀಕೆರೆಯ ಪೊಲೀಸ್ ಠಾಣೆಯ ನಿರೀಕ್ಷಕರಾದ ರಾಮಚಂದ್ರ ನಾಯಕ್ ಪಿಎಸ್ಐ ಗಳಾದ ನಾಗೇಂದ್ರ ನಾಯಕ್, ಆನಂದ ಪಾವಸ್ಕರ್, ಮಂಜುನಾಥ್ ಮನ್ನಂಗಿ, ದೇವೇಂದ್ರ ರಾಥೋಡ್, ಮತ್ತು ಏ ಎಸ್ ಐ ರವಿ ಹಾಗೂ ಸಿಬ್ಬಂದಿಗಳಾದ ರಫೀಕ್, ವೇಣುಗೋಪಾಲ್, ರಿಯಾಜ್, ಕಿರಣ್ ಕುಮಾರ್, ರಾಜೇಶ ಪಿ, ಮೋಹನ್, ಶಿವಕುಮಾರ್, ವಿಶೇಷ ತಂಡವನ್ನು ರಚಿಸಿ ಆರೋಪಿಗಳನ್ನು ಬಂಧಿಸಿದ ತರೀಕೆರೆಯ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳು ಶ್ರೀನಿವಾಸ್, ಹಾಗೂ ಜಿಲ್ಲಾ ಕಛೇರಿ ತಾಂತ್ರಿಕ ಸಿಬ್ಬಂದಿ ರಬ್ಬಾನಿ ರವರುಗಳು ವಿವಿಧ ಆಯಾಮದಿಂದ ಮಾಹಿತಿಯನ್ನು ಸಂಗ್ರಹಿಸಿಕೊಂಡು ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಸಂಪೂರ್ಣ ಯಶಸ್ವಿಯಾಗಿದ್ದಾರೆ. ಇವರುಗಳನ್ನು ಮಾನ್ಯ ಪೊಲೀಸ್ ಅಧಿಕರು ಚಿಕ್ಕಮಗಳೂರು ರವರು ಈ ತಂಡದ ಕಾರ್ಯವನ್ನು ಸ್ಲಾಗಿಸಿದ್ದಾರೆ.

ನೂತನ ಜಿಲ್ಲಾಧಿಕಾರಿಗಳಿಗೆ ಸ್ವಾಗತಿಸಿದ ಸರ್ಕಾರಿ ಹೊರಗುತ್ತಿಗೆ ನೌಕರರ ಸಂಘ
ಸರ್ಕಾರಿ ಹೊರಗುತ್ತಿಗೆ ನೌಕರರ ಸಂಘದವತಿಯಿಂದ ನೂತನ ಜಿಲ್ಲಾಧಿಕಾರಿಗಳಿಗೆ ಸ್ವಾಗತಿಸಿ,
ಶುಭಕೋರಿ ಹಾಗೂ ಸಹಕಾರಿ ಸಂಘದ ಅಧ್ಯಕ್ಷರಾದ ಜಿಲ್ಲಾಧಿಕಾರಿ ಅವರಿಗೆ ಬೀದರ್ ಮಾದರಿ
ಸಹಕಾರಿ ಸಂಘದ ನಿಯಮಾವಳಿಗಳು ನೌಕರರ ಹಿತವಾಗಿದ್ದು,ಆದರೆ ಉಪಸಮಿತಿ ರಚನೆ
ಮಾಡಿರುವ ಸಹಕಾರಿ ಸಂಘದ ನಿಯಮಾವಳಿಗಳು ನೌಕರರ ವಿರುದ್ಧ ವಾಗಿದ್ದು ಜಿಲ್ಲಾಧಿಕಾರಿ
ಅವರಿಗೆ ಮನವಿ ನೀಡಿ ಮಾನ್ಯ ಮುಖ್ಯಮಂತ್ರಿ ಅವರಿಗೆ ಸಲ್ಲಿಸುವಂತೆ ಮನವಿ ನೀಡಲಾಯಿತು.
ಜಿಲ್ಲಾಧ್ಯಕ್ಷರಾದ ಮಂಜು ತರಿಕೆರೆ, ಸಂಘಟನ ಸಂಚಾಲಕರು ಪ್ರದೀಪ್, ನಿರ್ದೇಶಕರುಗಳಾದ ದಶರ್ನ, ರಾಕೇಶ್,ನಾಗರಾಜು ಇದ್ದರು.

3ನೇ ರಾಷ್ಟ್ರೀಯ ಮಟ್ಟದ ಓಪನ್ ಕರಾಟೆ ಚಾಂಪಿಯನ್ಶಿಪ್ ಪಂದ್ಯಾವಳಿಯ ಯಶಸ್ವಿಯಾಗಿ ನಡೆದ ಬಗ್ಗೆ,
ಕರಾಟೆ ಕ್ರೀಡೆಯ, ಆತ್ಮವಿಶ್ವಾಸ, ಶಿಸ್ತು ಮತ್ತು ಕ್ರೀಡಾತ್ಮಕತೆಯನ್ನು ಬೆಳೆಸುವ ಉದ್ದೇಶದಿಂದ ಆಯೋಜಿಸಲಾದ - 3ನೇ ರಾಷ್ಟ್ರೀಯ ಮಟ್ಟದ ಓಪನ್ ಕರಾಟೆ ಪಂದ್ಯಾವಳಿಯು –2026 ಜನವರಿ 11 ರಂದು ,ಶಿವಮೊಗ್ಗ ಜಿಲ್ಲೆಯ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ಅತ್ಯಂತ ಯಶಸ್ವಿಯಾಗಿ ನಡೆಯಿತು.
ಸಹ್ಯಾದ್ರಿ ಶಿವಮೊಗ್ಗ ಡಿಸ್ಟ್ರಿಕ್ಟ್ ಸ್ಪೋರ್ಟ್ಸ್ ಕರಾಟೆ ಅಸೋಸಿಯೇಷನ್ ನ *ಪ್ರಧಾನ ಕಾರ್ಯದರ್ಶಿಯಾದ ಶ್ರೀಯುತ ಸನ್ ಸೈ ನವೀನ್, ಉಪಾಧ್ಯಕ್ಷರಾದ ಶ್ರೀಯುತ ಸನ್ ಸೈ ಸಾಧಿಕ್, ಶ್ರೀಯುತ ಸನ್ ಸೈ ಮಂಜುನಾಥ್ ,* ರವರು ಆಯೋಜಿಸಲಾದ ಈ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ 1,000 ಕ್ಕೂ ಹೆಚ್ಚು ಕರಾಟೆ ಕ್ರೀಡಾಪಟುಗಳು ಭಾಗವಹಿಸಿದ್ದರು. ತಮಿಳುನಾಡು, ತೆಲಂಗಾಣ, ಕರ್ನಾಟಕ, ಆಂಧ್ರಪ್ರದೇಶ ಸೇರಿದಂತೆ ದೇಶದ ವಿವಿಧ ರಾಜ್ಯಗಳಿಂದ ಆಗಮಿಸಿದ ಸ್ಪರ್ಧಾಳುಗಳು ಕಟಾ ಮತ್ತು ಕುಮಿಟೆ ವಿಭಾಗಗಳಲ್ಲಿ ಭಾಗವಹಿಸಿ ತಮ್ಮ ಅತ್ಯುತ್ತಮ ಕೌಶಲ್ಯ, ಶಿಸ್ತು ಮತ್ತು ಕ್ರೀಡಾಸ್ಫೂರ್ತಿಯನ್ನು ಪ್ರದರ್ಶಿಸಿದರು. ಹಾಗೂ ವಿಜೇತರಾದಂತಹ ಕ್ರೀಡಾಪಟುಗಳಿಗೆ ಟ್ರೋಫಿ ಮತ್ತು ಪ್ರಶಸ್ತಿ ಪತ್ರವನ್ನು ನೀಡಲಾಯಿತು.
ಈ ಕಾರ್ಯಕ್ರಮವನ್ನು ಶಿವಮೊಗ್ಗ ಜಿಲ್ಲೆಯ ವಿಧಾನ ಪರಿಷತ್ ಶಾಸಕರಾದ ಶ್ರೀಯುತ.ಡಿ.ಎಸ್.ಅರುಣ್ ಅವರು ಅಧಿಕೃತವಾಗಿ ಉದ್ಘಾಟಿಸಿ ತಮ್ಮ ಹಿತ ನುಡಿಗಳನ್ನು ನುಡಿದರು ಮಾತು ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಅಧ್ಯಕ್ಷರಾದ ಶ್ರೀಯುತ ಕಲಗೋಡು ರತ್ನಾಕರ್, DSP ರಾಚಪ್ಪ, ನ್ಯೂಸ್ ವಾರಿಯರ್ಸ್ ಸಂಪಾದಕರಾದ ಶ್ರೀಯುತ ರಘುರಾಜ್ , ಮಮಕೋಸ್ ನಿರ್ದೇಶಕರಾದ ವಿರೂಪಾಕ್ಷಪ್ಪ , ರಾಷ್ಟ್ರೀಯ ವಸತಿ ಶಾಲೆಯ ಪ್ರಾಂಶುಪಾಲರಾದ ಶ್ರೀಯುತ ವಾಸುದೇವ್, ಶ್ರೀಯುತ ಡಾ. ಶಿಹಾನ್ ಎ .ಝೆಡ್ ಮುಹಿಬ್ ರವರು, ಅಖಿಲ ಕರ್ನಾಟಕ ಸ್ಪೋರ್ಟ್ಸ್ ಕರಾಟೆ ಅಸೋಸಿಯೇಷನ್ ನ ರೆಫ್ರೀ ಕಮಿಷನರ್ ಸನ್ ಸೈ .ಕೆ.ಪಿ.ಜೊಸ್, ಬೆಳಗಾವಿ ಜಿಲ್ಲೆಯ ಪ್ರಧಾನ ಕಾರ್ಯದರ್ಶಿಯಾದ ಶ್ರೀಯುತ ಸನ್ ಸೈ ಜಿತೇಂದ್ರ ಕಾಕಟೇಕರ್, ಹಾವೇರಿ ಜಿಲ್ಲೆಯ ಅಧ್ಯಕ್ಷರಾದ ಶ್ರೀಯುತ ಶಿಹಾನ್ ನಾರಾಯಣ್ ಪೂಜಾರ್ , ಶಿವಮೊಗ್ಗ ಜಿಲ್ಲಾ ಅಧ್ಯಕ್ಷರಾದ ಶ್ರೀಯುತ ಎನ್ ಮಾಲತೇಶ್, ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ, ಮತ್ತು ಅನೇಕ ಗಣ್ಯರು ಉಪಸ್ಥಿತರಿದು ,ಅತಿಥಿಗಳಾಗಿ ಭಾಗವಹಿಸಿ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸಿ- ಉತ್ತೇಜನ ನೀಡಿ ಗೌರವವನ್ನು ತಂದರು.
ಸ್ಪರ್ಧೆಯು ಅತ್ಯಂತ ಶಿಸ್ತುಬದ್ಧವಾಗಿ, ನ್ಯಾಯಸಮ್ಮತವಾಗಿ ಹಾಗೂ ಉತ್ಸಾಹಭರಿತವಾಗಿ ನಡೆಯಿತು. ಕ್ರೀಡಾಪಟುಗಳ ಪ್ರದರ್ಶನ ಪ್ರೇಕ್ಷಕರನ್ನು ಆಕರ್ಷಿಸಿದ್ದು, ಕರಾಟೆ ಕ್ರೀಡೆಯ ಮಹತ್ವವನ್ನು ಮತ್ತಷ್ಟು ಬೆಳಗಿಸಿತು. ಈ ಚಾಂಪಿಯನ್ಶಿಪ್ ಕೇವಲ ಸ್ಪರ್ಧೆಯಷ್ಟೇ ಅಲ್ಲದೆ, ಏಕತೆ, ಶ್ರೇಷ್ಠತೆ ಮತ್ತು ಕ್ರೀಡಾತ್ಮಕ ಮನೋಭಾವವನ್ನು ಉತ್ತೇಜಿಸುವ ಹಬ್ಬವಾಗಿ ಮೂಡಿಬಂದಿತು.
ಈ ಕ್ರೀಡಾಕೂಟಕ್ಕೆ ಮೈಸೂರು ಜಿಲ್ಲೆಯಿಂದ ಆಗಮಿಸಿದಂತಹ ಸನ್ ಸೈ ಸೌಜನ್ಯ ಮತ್ತು ಸನ್ ಸೈ ಮನೋಜ್ ಹಾವೇರಿ ಜಿಲ್ಲೆಯ ಸನ್ ಸೈ ಮೋನಿಷಾ ,ದಾವಣಗೆರೆ ಜಿಲ್ಲೆಯ ಸನ್ ಸೈ ಗೌತಮ್, ಹಾವೇರಿ ಜಿಲ್ಲೆಯ ಸನ್ ಸೈ ಮಂಜುನಾಥ್,ಮೈಸೂರು ಜಿಲ್ಲೆಯಿಂದ ಸನ್ ಸೈ ನವೀನ್ , ದಾವಣಗೆರೆ ಜಿಲ್ಲೆಯ ಸನ್ ಸೈ ವೆಂಕಟೇಶ್ ಮತ್ತು ಸನ್ ಸೈ ಅನಿಲ್, ಬಿಜಾಪುರ್ ಜಿಲ್ಲೆಯ ಪ್ರೇಮ್, ಶಿವಮೊಗ್ಗ ಜಿಲ್ಲೆಯ ಸನ್ ಸೈ ಚಂದ್ರಕಾಂತ, ಸನ್ ಸೈ ಮಹಾಬಲೇಶ್ ಜ್ಯೋಯಿಶ್, ಸನ್ ಸೈ ಸತೀಶ್ ಮತ್ತು ಇನ್ನೂ ಹಲವು ಜಿಲ್ಲೆಯವರ ಕರಾಟೆ ಶಿಕ್ಷಕರು ಕ್ರೀಡಾಪಟುಗಳೊಂದಿಗೆ ಸಹಕಾರವನ್ನು ನೀಡಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿರುತ್ತಾರೆ.
ಈ ಯಶಸ್ವಿ ಆಯೋಜನೆಗೆ ಸಹಕಾರ ನೀಡಿದ ಎಲ್ಲಾ ಕ್ರೀಡಾಪಟುಗಳು, ತರಬೇತುದಾರರು, ತೀರ್ಪುಗಾರರು, ಸ್ವಯಂಸೇವಕರು, ಆಡಳಿತ ಮಂಡಳಿ ಸದಸ್ಯರು ಹಾಗೂ ಕ್ರೀಡಾಭಿಮಾನಿಗಳಿಗೆ.
ಈ ಪಂದಾವಳಿಯನ್ನು ಆಯೋಜಿಸಿದ ಸಹ್ಯಾದ್ರಿ ಶಿವಮೊಗ್ಗ ಜಿಲ್ಲೆಯ ಸ್ಪೋರ್ಟ್ಸ್ ಕರಾಟೆ ಅಸೋಸಿಯೇಷನ್ ನ *ಪ್ರಧಾನ ಕಾರ್ಯದರ್ಶಿಯಾದ ಶ್ರೀಯುತ ಸನ್ ಸೈ ನವೀನ್, ಉಪಾಧ್ಯಕ್ಷರಾದ ಶ್ರೀಯುತ ಸನ್ ಸೈ ಸಾಧಿಕ್, ಶ್ರೀಯುತ ಸನ್ ಸೈ ಮಂಜುನಾಥ್ ,* ಸನ್ ಸೈ ಕಿರಣ್, ಸನ್ ಸೈ ಸತೀಶ್, ನವೀನ್ ಪ್ರಕಾಶ್, ಅಪೂರ್ವ, ದೀಕ್ಷಾ, ಮೊಹಮ್ಮದ್ ಗೌಸ್, ಆಶಿಕ್ , ಪೃಥ್ವಿ ,ರಕ್ಷಿತ್ ಹೊಳ್ಳ , ಮೋನಿಕಾ, ಮಧು, ಗಿರೀಶ್ ರವರು ಹೃತ್ಪೂರ್ವಕ ಧನ್ಯವಾದಗಳು ಸಲ್ಲಿಸಿರುತ್ತಾರೆ .

ಗಣರಾಜ್ಯೋತ್ಸವ ವಿಜೃಂಭಣೆಯಿಂದ ಆಚರಿಸಬೇಕು --ಜಿ ಎಚ್ ಶ್ರೀನಿವಾಸ್......................
ತರೀಕೆರೆ, ಜ,13 -- ತಾಲೂಕು ಮಟ್ಟದ ಎಲ್ಲಾ ಇಲಾಖೆ ಅಧಿಕಾರಿಗಳು ಮತ್ತು ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಪ್ರತಿವರ್ಷದಂತೆ ಈ ಬಾರಿಯೂ ವಿಜೃಂಭಣೆಯಿಂದ ಗಣರಾಜ್ಯೋತ್ಸವ
ಆಚರಿಸಬೇಕು ಎಂದು ಶಾಸಕ ಜಿಎಚ್ ಶ್ರೀನಿವಾಸ್ ಹೇಳಿದರು. ಅವರು ಇಂದು ಪಟ್ಟಣದ
ಆಡಳಿತ ಸೌಧ ದ ತಹಶೀಲ್ದಾರ್ ರವರ ಸಭಾಂಗಣದಲ್ಲಿ ದಿನಾಂಕ 26-01-2026 ರಂದು
ಗಣರಾಜ್ಯೋತ್ಸವ ಆಚರಿಸಲು ನಡೆದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಮಾತನಾಡಿದರು.
ಕಾರ್ಯಕ್ರಮ ನಡೆಯುವ ಬಯಲು ರಂಗ ಮಂದಿರದಲ್ಲಿ ಧ್ವಜಾರೋಹಣ,ಆರಕ್ಷಕ ಇಲಾಖೆ
, ಹೋಮ್ ಗಾರ್ಡ್ಸ್, ಅರಣ್ಯ ಇಲಾಖೆ ಸಿಬ್ಬಂದಿಗಳು,ಅಬಕಾರಿ ಇಲಾಖೆ ಸಿಬ್ಬಂದಿಗಳು, ಪೌರಕಾರ್ಮಿಕರು,
ಶಾಲಾ ಮಕ್ಕಳಿಂದ ಪತಸಂಚಲನ ನಡೆಸುವಂತೆ ಸ್ತಬ್ಧ ಚಿತ್ರಗಳು, ನೃತ್ಯ ರೂಪಕಗಳು, ಜೊತೆಗೆ
ಸಾಧಕರಿಗೆ ಸನ್ಮಾನ ಏರ್ಪಡಿಸಬೇಕು ಎಂದರು. ಸಭೆಯ ಅಧ್ಯಕ್ಷತೆಯನ್ನು ನಾಡಹಬ್ಬಗಳ ಸಮಿತಿ
ಅಧ್ಯಕ್ಷರಾದ ತಹಸಿಲ್ದಾರ್ ವಿಶ್ವಜಿತ್ ಮೆಹತ ವಹಿಸಿದ್ದರು ಮುಖ್ಯ ಅತಿಥಿಗಳಾಗಿ ಉಪವಿಭಾಗಾಧಿ
-ಕಾರಿಗಳಾದ ಎನ್ ವಿ ನಟೇಶ್ ಹಾಗೂ ಡಿ ಎಸ್ ಪಿ, ಎಚ್ ಪರಶುರಾಮಪ್ಪ ರವರು ಹಾಗೂ ನೌಕರರ
ಸಂಘದ ಅಧ್ಯಕ್ಷರಾದ ಅನಂತಪ್ಪ ರವರು ಉಪಸಿತರಿದ್ದು ಮಿಲ್ಟ್ರಿ ಶ್ರೀನಿವಾಸ್ ಪತ್ರಕರ್ತರಾದ ಎಸ್ ಕೆ
ಸ್ವಾಮಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕರಾದ ತರೀಕೆರೆ ಎನ್ ವೆಂಕಟೇಶ್ ಮತ್ತು ಕಾರ್ಯನಿರ್ವಹಣಾಧಿಕಾರಿ ಡಾ. ದೇವೇಂದ್ರಪ್ಪ ತೋಟಗಾರಿಕಾ ಇಲಾಖೆ ಅಧಿಕಾರಿ, ಕೃಷಿ ಇಲಾಖೆ ಅಧಿಕಾರಿ
,ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪುರಸಭೆಯ ಅಧಿಕಾರಿಗಳು, ಎಲ್ಲಾ ಇಲಾಖೆಯ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ಬೇಸಿಗೆಯಲ್ಲಿ ಸಮರ್ಪಕ ವಿದ್ಯುತ್ ಪೂರೈಕೆ ಹಾಗೂ ಕೃಷಿ ಪಂಪ್ ಸೆಟ್ಗಳಿಗೆ ಹಗಲು ವೇಳೆ 7 ಗಂಟೆ ವಿದ್ಯುತ್ ಪೂರೈಕೆ ಇಂಧನ ಸಚಿವರಾದ ಕೆ.ಜೆ.ಜಾರ್ಜ್ ಇಂಧನ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು
*ಬೆಂಗಳೂರು, ಜನವರಿ 9, 2026*: ಮುಂಬರುವ ಬೇಸಿಗೆಯಲ್ಲಿ ಬೇಡಿಕೆಗೆ ಅನುಸಾರವಾಗಿ ಸಮರ್ಪಕ ವಿದ್ಯುತ್ ಸರಬರಾಜಿಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡು ಯಾವುದೇ ಕಾರಣಕ್ಕೂ ಲೋಡ್ ಶೆಡ್ಡಿಂಗ್ಗೆ ಅವಕಾಶವಾಗದಂತೆ ನೋಡಿಕೊಳ್ಳಬೇಕು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಇಂಧನ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಬೇಸಿಗೆಯಲ್ಲಿ ಸಮರ್ಪಕ ವಿದ್ಯುತ್ ಪೂರೈಕೆಗೆ ಸಂಬಂಧಿಸಿದಂತೆ ಬೆಸ್ಕಾಂನ ಬೆಳಕು ಭವನದಲ್ಲಿ ಶುಕ್ರವಾರ ಇಲಾಖೆ ಹಿರಿಯ ಅಧಿಕಾರಿಗಳ ಜತೆ ಸಭೆ ನಡೆಸಿದ ಸಚಿವರು, ಇಲಾಖೆ ಕೈಗೊಂಡಿರುವ ಪೂರ್ವ ಸಿದ್ಧತೆಗಳ ಬಗ್ಗೆ ಮಾಹಿತಿ ಪಡೆದರಲ್ಲದೆ, "ಬೇಡಿಕೆ ಮತ್ತು ಪೂರೈಕೆಯಲ್ಲಿ ಸಮನ್ವಯತೆ ಸಾಧಿಸಲು ಅಗತ್ಯವಿರುವ ವಿದ್ಯುತ್ ಉತ್ಪಾದನೆ ಮತ್ತು ಖರೀದಿಗೆ ಕ್ರಮ ಕೈಗೊಳ್ಳಬೇಕು," ಎಂದು ತಿಳಿಸಿದರು.
"ಬೇಸಿಗೆಯಲ್ಲಿ ಅದರಲ್ಲೂ ಮುಖ್ಯವಾಗಿ ಮಾರ್ಚ್ನಿಂದ ಮೇ ಅಂತ್ಯದವರೆಗೆ ಮೂರು ತಿಂಗಳಲ್ಲಿ ವಿದ್ಯುತ್ ಬೇಡಿಕೆ ಎಷ್ಟಾಗಬಹುದು ಎಂಬುದನ್ನು ಈಗಲೇ ಲೆಕ್ಕಾಚಾರ ಮಾಡಿ ಅದಕ್ಕೆ ತಕ್ಕಂತೆ ಪೂರೈಸಲು ವಿದ್ಯುತ್ ಬ್ಯಾಂಕಿಂಗ್ ವ್ಯವಸ್ಥೆ ಮಾಡಿಕೊಳ್ಳಬೇಕು. ಹಗಲು ವೇಳೆ ಸೌರ ವಿದ್ಯುತ್ ಹೇರಳವಾಗಿ ಲಭ್ಯವಿರುವುದರಿಂದ ಅದನ್ನು ಬಳಸಿಕೊಂಡು ರಾತ್ರಿ ವೇಳೆ ಜಲ ಮತ್ತು ಕಲ್ಲಿದ್ದಲು ಆಧಾರಿತ ವಿದ್ಯುತ್ ಉತ್ಪಾದನೆಯನ್ನು ಹೆಚ್ಚಿಸುವ ಮೂಲಕ ಪೂರೈಕೆ ಉತ್ಪಾದನೆಯಲ್ಲಿ ಸಮತೋಲನ ಕಾಯ್ದುಕೊಳ್ಳಬೇಕು," ಎಂದು ಹೇಳಿದರು.
"ಬೇಡಿಕೆಗೆ ತಕ್ಕಂತೆ ವಿದ್ಯುತ್ ಪೂರೈಸಲು ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳಬೇಕು. ವಿನಿಮಯ ಅಥವಾ ದೀರ್ಘಾವಧಿ ಖರೀದಿ ಆಧಾರದ ಮೇಲೆ ಅನ್ಯ ರಾಜ್ಯಗಳಿಂದ ವಿದ್ಯುತ್ ಪಡೆಯಲು ಹಾಗೂ ಸಕ್ಕರೆ ಜತೆಗೆ ವಿದ್ಯುತ್ ಉತ್ಪಾದನೆ ಮಾಡುವ ಕಾರ್ಖಾನೆಗಳೊಂದಿಗೆ ಈಗಲೇ ಒಪ್ಪಂದ ಮಾಡಿಕೊಳ್ಳಬೇಕು. ಇದರಿಂದ ಬೇಸಿಗೆಯಲ್ಲಿ ಹೆಚ್ಚುವರಿ ವಿದ್ಯುತ್ ಲಭ್ಯವಾದರೆ ಬೇರೆ ರಾಜ್ಯಗಳಿಗೆ ಮಾರಾಟ ಮಾಡಬಹುದು. ಆದರೆ, ಯಾವುದೇ ಕಾರಣಕ್ಕೂ ಕೊರತೆ ಉಂಟಾಗಬಾರದು," ಎಂದರು.
*ಕೃಷಿಗೆ ಹಗಲು 7 ಗಂಟೆ ವಿದ್ಯುತ್*:
"ರಾಜ್ಯದ ಹಲವು ಭಾಗಗಳಲ್ಲಿ ಈಗಾಗಲೇ ಕುಸುಮ್- ಸಿ ಯೋಜನೆಯಡಿ ಫೀಡ್ ಸೋಲರೈಸೇಷನ್ ಮೂಲಕ ರೈತರ ಕೃಷಿ ಪಂಪ್ ಸೆಟ್ ಗಳಿಗೆ ಹಗಲು 7 ಗಂಟೆ ನಿರಂತರ ವಿದ್ಯುತ್ ಪೂರೈಸಲಾಗುತ್ತಿದೆ. ಪ್ರಸ್ತುತ ಸೌರ ವಿದ್ಯುತ್ ಉತ್ಪಾದನೆ ಹೆಚ್ಚಾಗಿರುವುದರಿಂದ ಇತರೆ ಭಾಗಗಳಲ್ಲೂ ಕೃಷಿ ಪಂಪ್ ಸೆಟ್ ಗಳಿಗೆ ಹಗಲು ನಿರಂತರ 7 ಗಂಟೆ ವಿದ್ಯುತ್ ಪೂರೈಕೆ ಮಾಡಬೇಕು," ಎಂದು ಸಚಿವರು ನಿರ್ದೇಶನ ನೀಡಿದರು.
ಪಿಸಿಕೆಎಲ್ ಅಧಿಕಾರಿಗಳು ಮಾಹಿತಿ ನೀಡಿ, "ಪ್ರಸಕ್ತ ಆರ್ಥಿಕ ವರ್ಷದಲ್ಲಿ ಡಿಸೆಂಬರ್ ತಿಂಗಳಲ್ಲಿ ದಾಖಲೆಯ 17,220 ಮೆಗಾವ್ಯಾಟ್ ವಿದ್ಯುತ್ ಬೇಡಿಕೆ ಬಂದಿದ್ದು,ಸಮರ್ಪಕವಾಗಿ ಪೂರೈಕೆ ಮಾಡಲಾಗಿದೆ. ಈ ಬಾರಿಯ ಬೇಸಿಗೆಯಲ್ಲಿ ಕಳೆದ ವರ್ಷಕ್ಕಿಂತ ಶೇ. 5ರಷ್ಟು ಹೆಚ್ಚುವರಿ ವಿದ್ಯುತ್ ಬೇಡಿಕೆ ನಿರೀಕ್ಷಿಸಲಾಗಿದ್ದು, ಅದಕ್ಕೆ ತಕ್ಕಂತೆ ಪೂರೈಕೆಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಬೇಡಿಕೆ ಅವಧಿಯಲ್ಲಿ ಅಂದರೆ ಬೆಳಗ್ಗೆ ಮತ್ತು ಸಂಜೆ ಜಲ ವಿದ್ಯುತ್ ಮತ್ತು ಉಷ್ಣ ವಿದ್ಯುತ್ ಉತ್ಪಾದಿಸಿ ಪೂರೈಸಲಾಗುವುದು." ಎಂದು ತಿಳಿಸಿದರು.
"ಪ್ರಸ್ತುತ ರಾಜ್ಯದ ಜಲಾಶಯಗಳಲ್ಲಿ ಸಂಗ್ರಹವಾಗಿರುವ ನೀರಿನಲ್ಲಿ ಜುಲೈ ಅಂತ್ಯದವರೆಗೆ ಪ್ರತಿನಿತ್ಯ 33 ಮಿಲಿಯನ್ ಯೂನಿಟ್ ವಿದ್ಯುತ್ ಉತ್ಪಾದಿಸಬಹುದು. ಅದೇ ರೀತಿ ರಾಯಚೂರು, ಯರಮರಸ್ ಮತ್ತು ಬಳ್ಳಾರಿಯ ಉಷ್ಣ ವಿದ್ಯುತ್ ಸ್ಥಾವರಗಳಲ್ಲಿರುವ ಘಟಕಗಳನ್ನೂ ಬೇಸಿಗೆಯಲ್ಲಿ ಅಗತ್ಯ ವಿದ್ಯುತ್ ಉತ್ಪಾದಿಸಲು ಅನುವಾಗುವಂತೆ ಸಿದ್ಧಗೊಳಿಸಲಾಗುತ್ತಿದೆ. ಜತೆಗೆ ನವೀಕರಿಸಬಹುದಾದ ಇಂಧನ ಮೂಲಗಳಿಂದಲೂ ಸಾಕಷ್ಟು ವಿದ್ಯುತ್ ಉತ್ಪಾದಿಸಲಾಗುತ್ತಿದೆ," ಎಂದು ವಿವರಿಸಿದರು.
ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕುಮಾರ್ ಪಾಂಡೆ, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಡಾ. ಶಿವಶಂಕರ ಎನ್., ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕಿ ವೈಶಾಲಿ ಎಂ.ಎಲ್., ಕೃಷ್ಣ ಬಾಜಪೇಯಿ, ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಆರ್.ಜಯಕುಮಾರ್, ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕ ಕೆ.ಎಂ.ಮುನಿಗೋಪಾಲ ರಾಜು, ಕ್ರೆಡಲ್ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ.ರುದ್ರಪ್ಪಯ್ಯ ಸೇರಿದಂತೆ ಇಂಧನ ಇಲಾಖೆ ಹಿರಿಯ ಅಧಿಕಾರಿಗಳು ಇದ್ದರು.
*ಕೋಟ್*-
"ಲಭ್ಯ ವಿದ್ಯುತ್ತನ್ನು ಸಮರ್ಪಕ ರೀತಿಯಲ್ಲಿ ಪ್ರಸರಣ ಮತ್ತು ಸರಬರಾಜು ಮಾಡಲು ಅಗತ್ಯ ಮೂಲ ಸೌಕರ್ಯಗಳನ್ನು ಈಗಲೇ ಸಿದ್ಧ ಮಾಡಿಕೊಳ್ಳಬೇಕು. ಓವರ್ ಲೋಡ್ ಸಮಸ್ಯೆ ಇರುವ ಪ್ರದೇಶಗಳನ್ನು ಗುರುತಿಸಿ ಅದಕ್ಕೆ ಪರಿಹಾರ ಕಂಡುಕೊಳ್ಳೇಕು. ಲಿಂಕ್ ವ್ಯವಸ್ಥೆ ಮೂಲಕ ಎಲ್ಲಾ ಭಾಗಗಳಲ್ಲಿ ಸಮರ್ಪಕ ವಿದ್ಯುತ್ ಲಭ್ಯವಾಗುವಂತೆ ನೋಡಿಕೊಳ್ಳಬೇಕು,".
ಗೌರವ ಗುಪ್ತ, ಅಪರ ಮುಖ್ಯ ಕಾರ್ಯದರ್ಶಿಗಳು, ಇಂಧನ ಇಲಾಖೆ

ವಿಜಯಪುರಕ್ಕೆ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸಬೇಕೆಂದು106 ದಿನಗಳಿಂದ ನಿರಂತರವಾಗಿ
ಶಾಂತಿ ಪೂರ್ಣ ಹೋರಾಟ
ವಿಜಯಪುರಕ್ಕೆ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸಬೇಕೆಂಬ ಸಮಂಜಸ, ನ್ಯಾಯಸಮ್ಮತ ಮತ್ತು
ಜನಪರ ಬೇಡಿಕೆಗಾಗಿ ಕಳೆದ 106 ದಿನಗಳಿಂದ ನಿರಂತರವಾಗಿ ಶಾಂತಿಪೂರ್ಣ ಹೋರಾಟ ನಡೆಯುತ್ತಿದ್ದರೂ
ಸಹ, ಸರ್ಕಾರ ಹಾಗೂ ಜಿಲ್ಲೆಯ ಜನಪ್ರತಿನಿಧಿಗಳು ಈ ಹೋರಾಟವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿರುವುದು ಅತ್ಯಂತ ಖಂಡನೀಯ.
ಸರ್ಕಾರದ ನಿರ್ಲಕ್ಷ್ಯಕ್ಕೆ ವಿರುದ್ಧವಾಗಿ ಜನಪ್ರತಿನಿಧಿಗಳ ಗಮನ ಸೆಳೆಯುವ ಉದ್ದೇಶದಿಂದ ದಿನಾಂಕ 01/01/2026 ರಂದು ಜನಪರ ಹೋರಾಟಗಾರರು ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಎಂ.ಬಿ. ಪಾಟೀಲರ ನಿವಾಸದ ಮುಂದೆ ಶಾಂತ ರೀತಿಯಲ್ಲಿ ಪ್ರತಿಭಟನೆ ನಡೆಸಲು ಹೊರಟಾಗ, ಪೊಲೀಸರು ಪ್ರಜಾಪ್ರಭುತ್ವ ವಿರೋಧಿ ಹಾಗೂ ಸಂವಿಧಾನಬಾಹ್ಯ ರೀತಿಯಲ್ಲಿ ವರ್ತಿಸಿ ಹೋರಾಟಗಾರರನ್ನು ತಡೆದಿದ್ದಾರೆ.
ಶಾಂತಿಪೂರ್ಣವಾಗಿ ತೆರಳುತ್ತಿದ್ದ ಹೋರಾಟಗಾರರ ಮೇಲೆ ಪೊಲೀಸರು ದೌರ್ಜನ್ಯ ಮಾಡಿ, ತಳ್ಳಾಟ-ನುಗ್ಗಾಟ ನಡೆಸಿ, ಮಹಿಳೆಯರು ಮತ್ತು ಸ್ವಾಮೀಜಿಗಳ ಮೇಲೂ ಸಹ ಅಮಾನವೀಯ ದೌರ್ಜನ್ಯ ಎಸಗಿದ್ದಾರೆ. ಹೋರಾಟಗಾರರ ಮೊಬೈಲ್ಗಳನ್ನು ಕಸಿದುಕೊಳ್ಳಲಾಗಿದ್ದು, ಉದ್ದೇಶಪೂರ್ವಕವಾಗಿ ಪ್ರಚೋದನೆ ನೀಡಿ ಗೊಂದಲ ಸೃಷ್ಟಿಸಲಾಗಿದೆ. ಇದು ಪೊಲೀಸರ ನಗ್ನ ದೌರ್ಜನ್ಯ ಮತ್ತು ಸರ್ಕಾರದ ದಮನಕಾರಿ ನೀತಿಯ ಪ್ರತಿಬಿಂಬವಾಗಿದೆ.
ಇಷ್ಟರಲ್ಲೇ ನಿಲ್ಲದೆ, ಹೋರಾಟಗಾರರನ್ನು ಬಲವಂತವಾಗಿ ಪೊಲೀಸ್ ವ್ಯಾನ್ಗಳಲ್ಲಿ ಎಳೆದೊಯ್ದು, ಅವರ ವಿರುದ್ಧ ಸುಳ್ಳು ಹಾಗೂ ರಾಜಕೀಯ ಪ್ರೇರಿತ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಲಾಗಿದೆ. ಜನರ ಮೂಲಭೂತ ಹಕ್ಕಾದ ಆರೋಗ್ಯ ಶಿಕ್ಷಣಕ್ಕಾಗಿ, ವಿಜಯಪುರಕ್ಕೆ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸಬೇಕೆಂದು ಕೇಳುವುದು ಅಪರಾಧವೇ? ಇದಕ್ಕೆ ಕ್ರಿಮಿನಲ್ ಕೇಸ್ ದಾಖಲಿಸುವುದು ಯಾವ ನ್ಯಾಯ, ಯಾವ ಸಂವಿಧಾನ?
ಮತ್ತೊಂದು ತೀವ್ರ ಅತಿರೇಕವೆಂದರೆ, ಜಿಲ್ಲಾಡಳಿತವು ಹೋರಾಟಗಾರರು 106 ದಿನಗಳಿಂದ ಸತ್ಯಾಗ್ರಹ ನಡೆಸುತ್ತಿದ್ದ ಸ್ಥಳದಲ್ಲಿದ್ದ ವೇದಿಕೆಯನ್ನು ರಾತ್ರೋರಾತ್ರಿ ನೆಲಸಮ ಮಾಡಿರುವುದು. ಇದು ಪ್ರಜಾಪ್ರಭುತ್ವದ ಧ್ವನಿಯನ್ನು ಹತ್ತಿಕ್ಕುವ ಸ್ಪಷ್ಟ ಪ್ರಯತ್ನವಾಗಿದ್ದು, ಪೊಲೀಸರ ಮತ್ತು ಆಡಳಿತದ ದೌರ್ಜನ್ಯಕ್ಕೆ ಜೀವಂತ ಸಾಕ್ಷಿಯಾಗಿದೆ.
ಈ ಎಲ್ಲಾ ಘಟನೆಗಳು ಕರ್ನಾಟಕದಲ್ಲಿ ಪ್ರಜಾಪ್ರಭುತ್ವ ಉಳಿದಿದೆಯೇ ಎಂಬ ಗಂಭೀರ ಪ್ರಶ್ನೆಯನ್ನು ಎತ್ತಿವೆ. ಸರ್ಕಾರ ಹಾಗೂ ಪೊಲೀಸ್ ಇಲಾಖೆ ಜನಪರ ಹೋರಾಟಗಳನ್ನು ದಮನಿಸುವ ಬದಲು, ಜನರ ನ್ಯಾಯಸಮ್ಮತ ಬೇಡಿಕೆಗಳಿಗೆ ಸ್ಪಂದಿಸಬೇಕಾಗಿದೆ.
ಪೊಲೀಸರ ಹಾಗೂ ಆಡಳಿತದ ಈ ಅಮಾನವೀಯ, ಪ್ರಜಾಪ್ರಭುತ್ವ ವಿರೋಧಿ ದೌರ್ಜನ್ಯ ಕ್ರಮಗಳನ್ನು ಅಖಿಲ ಭಾರತ ಗ್ರಾಮೀಣ ಬ್ಯಾಂಕ್ ನೌಕರರ ಸಂಘ ತೀವ್ರವಾಗಿ ಖಂಡಿಸುತ್ತದೆ.* *ಹೋರಾಟಗಾರರ ಮೇಲೆ ದಾಖಲಿಸಿರುವ ಎಲ್ಲಾ ಕ್ರಿಮಿನಲ್ ಪ್ರಕರಣಗಳನ್ನು ತಕ್ಷಣವೇ ಯಾವುದೇ ಷರತ್ತು ಇಲ್ಲದೆ ಹಿಂಪಡೆಯಬೇಕು. ವಿಜಯಪುರಕ್ಕೆ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸುವ ಬಗ್ಗೆ ಸರ್ಕಾರ ತಕ್ಷಣ ಸ್ಪಷ್ಟ ನಿರ್ಧಾರ ಪ್ರಕಟಿಸಬೇಕೆಂದು ನಾವು ಒತ್ತಾಯಿಸುತ್ತೇವೆ.

ಭೂಮಿ -ವಸತಿ "ಹಕ್ಕು ಮಾನ್ಯ ಮಾಡುವ "ಸಾಮಾಜಿಕ ನ್ಯಾಯ"ಕ್ಕಾಗಿ ಆಗ್ರಹ..........................
.. ತರೀಕೆರೆ ಆಗಸ್ಟ್ 21 -- ದಿವಂಗತ ದೇವರಾಜ ಅರಸು ರವರು ಭೂ ಸುಧಾರಣಾ ಕಾಯ್ದೆಗೆ ತಿದ್ದುಪ
ಡಿಯ ಮೂಲಕ ಉಳುವವನೇ ಭೂಮಿಯ ಒಡೆಯ ಕಾಯ್ದೆಯನ್ನು ಜಾರಿಗೆ ತಂದರು. ಎಂದು ಭೂಮಿ
ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ರಾಜ್ಯಾಧ್ಯಕ್ಷರಾದ ಎಂ ಓಂಕಾರಪ್ಪನವರು
ಇಂದು ಪಟ್ಟಣದ ತಾಲೂಕು ಆಡಳಿತ ಕಚೇರಿಯ ಮುಂದಿನ ಡಾ. ಬಿಆರ್
ಭೂಮಿ -ವಸತಿ "ಹಕ್ಕು ಮಾನ್ಯ ಮಾಡುವ "ಸಾಮಾಜಿಕ ನ್ಯಾಯ"ಕ್ಕಾಗಿ ಆಗ್ರಹ..........................
.. ತರೀಕೆರೆ ಆಗಸ್ಟ್ 21 -- ದಿವಂಗತ ದೇವರಾಜ ಅರಸು ರವರು ಭೂ ಸುಧಾರಣಾ ಕಾಯ್ದೆಗೆ ತಿದ್ದುಪ
ಡಿಯ ಮೂಲಕ ಉಳುವವನೇ ಭೂಮಿಯ ಒಡೆಯ ಕಾಯ್ದೆಯನ್ನು ಜಾರಿಗೆ ತಂದರು. ಎಂದು ಭೂಮಿ
ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ರಾಜ್ಯಾಧ್ಯಕ್ಷರಾದ ಎಂ ಓಂಕಾರಪ್ಪನವರು
ಇಂದು ಪಟ್ಟಣದ ತಾಲೂಕು ಆಡಳಿತ ಕಚೇರಿಯ ಮುಂದಿನ ಡಾ. ಬಿಆರ್ ಅಂಬೇಡ್ಕರ್ ರವರ ಪುತ್ತಳಿಗೆ
ಮಾಲಾರ್ಪಣೆ ಮಾಡಿ ಮಾತನಾಡಿದರು. ಇಂದು ದಿವಂಗತ ಮಾಜಿ ಮುಖ್ಯಮಂತ್ರಿ ಡಿ ದೇವರಾಜ ಅರಸುರವರ 110ನೇ ಜನ್ಮದಿನದ ಪ್ರಯುಕ್ತ ವಿವಿಧ ದಲಿತ ಸಂಘಟನೆಗಳ ಮುಖಂಡರೊಂದಿಗೆ ಬಾಬಾ ಸಾಬ್ ಅಂಬೇಡ್ಕರ್ ಪುತ್ತಳಿಗೆ ಮಾಲಾರ್ಪಣೆ ಮಾಡಿ ಪುಷ್ಪಾರ್ಚನೆ ಮಾಡಿ ಅವರ ಪುತ್ಥಳಿಯ ಎದುರು ಪತ್ರಿಕಾಗೋಷ್ಠಿ ನಡೆಸಿದರು. ಬಗರ್ ಹುಕುಂ ಸಾಗುವಳಿದಾರರು ಅರ್ಜಿ ಸಲ್ಲಿಸಿದ್ದು ರಾಜ್ಯ ಸರ್ಕಾರದ ಲೆಕ್ಕದಲ್ಲಿ 33 ಲಕ್ಷಕ್ಕೂ ಹೆಚ್ಚು ಅರ್ಜಿಗಳು ಇದ್ದು ಇದರಲ್ಲಿ ಶೇ% 90ರಷ್ಟು ಅರ್ಜಿಗಳನ್ನು ತಿರಸ್ಕರಿಸಿ ವಿಲೇವಾರಿ ಮಾಡಿದೆ. ಅರಣ್ಯ ಹಕ್ಕು ಕಾಯ್ದೆಯನ್ನು ಜಾರಿ ಮಾಡದೆ ಅರಣ್ಯ ಅಧಿಕಾರಿಗಳು ಪರಿಸರದ ಹೆಸರಿನಲ್ಲಿ ಜನರಿಗೆ ವಂಚನೆ ಮಾಡುತ್ತಿದ್ದು ಆದಿವಾಸಿ ಇನ್ನಿತರೆ ಜನ ಸಮುದಾಯಗಳಿಗೆ ಸಂವಿಧಾನ ಬದ್ಧ ಹಕ್ಕನ್ನು ನಿರಾಕರಿಸಲಾಗುತ್ತಿದೆ ಕಾನೂನು ಬದ್ಧವಾಗಿರುವ ಅರಣ್ಯ ಹಕ್ಕು ಕಾಯ್ದೆಯನ್ನು ನಿರ್ಜೀವ ಗೊಳಿಸಲಾಗುತ್ತಿದೆ ಎಂದು ಆರೋಪಿಸಿದರು. ಉಳುವವನೇ ಭೂ ಒಡೆಯ ನೀತಿಯನ್ನು ಜಾರಿ ಮಾಡದಂತೆ ಸಾಮಾಜಿಕ ನ್ಯಾಯವನ್ನು ಪ್ರತಿಪಾದಿಸುವ ಸರ್ಕಾರವಾಗಿ ಸಾಗುವಳಿ ಮಾಡುತ್ತಾ ಅರ್ಜಿ ಸಲ್ಲಿಸಿರುವರಿಗೆ ಭೂ ಮಂಜೂರಾತಿ ನೀಡಲು ಒನ್ ಟೈಮ್ ಸೆಟ್ಲ್ಮೆಂಟ್ ಜಾರಿ ಮಾಡುವ ಮೂಲಕ ಬಡವರಿಗೆ ನ್ಯಾಯ ದೊರಕಿಸಬೇಕೆಂದು ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಆಗ್ರಹಿಸುತ್ತಿದೆ ಎಂದು ಹೇಳಿದರು. ಮಹಾತ್ಮ ಪ್ರೊ ಬಿ ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕರಾದ ತರೀಕೆರೆ ಎನ್ ವೆಂಕಟೇಶ್, ಜಿಲ್ಲಾ ಸಂಘಟನಾ ಸಂಚಾಲಕರಾದ ಎಚ್ ವಿ ಬಾಲರಾಜ್, ತಾಲೂಕು ಸಂಚಾಲಕರಾದ ರಾಜಪ್ಪ, ಕುಮಾರಪ್ಪ, ಮಂಜಪ್ಪ, ಸಿದ್ದರಾಮಪ್ಪ, ಶಿವರಾಜ್, ಪರಮೇಶ್ ಹಾಗೂ ಮುಂತಾದವರು ಉಪಸ್ಥಿತರಿದ್ದರು.

ಹಗ್ಗದಿಂದ ಕುತ್ತಿಗೆಗೆ ಬಿಗಿದು ಕೊಲೆ ಮಾಡಿ ಪೆಟ್ರೋಲ್ ನಿಂದ ಸುಟ್ಟು ತಲೆಮರೆಸಿಕೊಂಡಿದ್ದ 03 ಜನ ಕೊಲೆ ಆರೋಪಿಗಳ ಬಂಧನ
ದಿನಾಂಕ:02-06-2025 ರಂದು ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯ ಕಂಸಾಗರ ಗೇಟ್ ಬಳಿ ಯಾವುದೋ ಅನಾಮಧೇಯ ವ್ಯಕ್ತಿಯ ದೇಹವು ಸುಟ್ಟ ಸ್ಥಿತಿಯಲ್ಲಿರುವುದಾಗಿ ಮಾಹಿತಿ ಬಂದ ಮೇರೆಗೆ ಕೂಡಲೇ ಸ್ಥಳಕ್ಕೆ ತೆರಳಿ ಪರಿಶೀಲಿಸಲಾಗಿ ಸದರಿ ಮೃತ ವ್ಯಕ್ತಿಯನ್ನು ಯಾರೋ ಕೊಲೆ ಮಾಡಿ ಸೌದೆ ಮತ್ತು ಪೆಟ್ರೋಲ್ ಬಳಿಸಿ ಸುಟ್
ಹಗ್ಗದಿಂದ ಕುತ್ತಿಗೆಗೆ ಬಿಗಿದು ಕೊಲೆ ಮಾಡಿ ಪೆಟ್ರೋಲ್ ನಿಂದ ಸುಟ್ಟು ತಲೆಮರೆಸಿಕೊಂಡಿದ್ದ 03 ಜನ ಕೊಲೆ ಆರೋಪಿಗಳ ಬಂಧನ
ದಿನಾಂಕ:02-06-2025 ರಂದು ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯ ಕಂಸಾಗರ ಗೇಟ್ ಬಳಿ ಯಾವುದೋ ಅನಾಮಧೇಯ ವ್ಯಕ್ತಿಯ ದೇಹವು ಸುಟ್ಟ ಸ್ಥಿತಿಯಲ್ಲಿರುವುದಾಗಿ ಮಾಹಿತಿ ಬಂದ ಮೇರೆಗೆ ಕೂಡಲೇ ಸ್ಥಳಕ್ಕೆ ತೆರಳಿ ಪರಿಶೀಲಿಸಲಾಗಿ ಸದರಿ ಮೃತ ವ್ಯಕ್ತಿಯನ್ನು ಯಾರೋ ಕೊಲೆ ಮಾಡಿ ಸೌದೆ ಮತ್ತು ಪೆಟ್ರೋಲ್ ಬಳಿಸಿ ಸುಟ್ಟು ಹಾಕಿ ಸಾಕ್ಷ್ಯ ನಾಶಕ್ಕೆ ಪ್ರಯತ್ನಿಸಿರುವುದು ಕಂಡು ಬಂದ ಮೇರೆಗೆ ಫಿರ್ಯಾದುದಾರರಾದ ಶ್ರೀ ಹೆಚ್ ಶ್ರೀನಿವಾಸ್ ರವರು ನೀಡಿದ ದೂರನ್ನು ಸ್ವೀಕರಿಸಿ ಕಡೂರು ಪೊಲೀಸ್ ಠಾಣೆಯಲ್ಲಿ ಠಾಣಾ ಮೊ.ನಂ 159/2025 ಕಲಂ 103(1), 238 ಬಿ ಎನ್ ಎಸ್ ರೀತ್ಯಾ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತದೆ.
ದಿನಾಂಕ:02-06-2025 ರಂದು ಕಡೂರು ಟೌನ್ ನ ಕೋಟೆ ವಾಸಿ ಶ್ರೀಮತಿ ಮೀನಾಕ್ಷಮ್ಮ ರವರು ಠಾಣೆಗೆ ಹಾಜರಾಗಿ ತನ್ನ ಗಂಡ ಸುಬ್ರಹ್ಮಣ್ಯ ರವರು ದಿನಾಂಕ:31-05-2025 ರಂದು ಕಾಣಿಯಾಗಿರುವುದಾಗಿ ತಿಳಿಸಿ ಕಡೂರು ಠಾಣಾ ಮೊ.ನಂ. 157/2025 ಕಲಂ ಮನುಷ್ಯ ಕಾಣಿ ರೀತ್ಯಾ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತದೆ.
ಈ ಮೇಲ್ಕಂಡ ಎರಡೂ ಪ್ರಕರಣಗಳಿಗೆ ಸಂಬಂಧಪಟ್ಟಂತೆ, ಡಾ. ಶ್ರೀ ವಿಕಂ ಅಮಟೆ, ಮಾನ್ಯ ಪೊಲೀಸ್ ಅಧೀಕ್ಷಕರು, ಚಿಕ್ಕಮಗಳೂರು ಜಿಲ್ಲೆ, ಶ್ರೀ ಜಯಕುಮಾರ್, ಮಾನ್ಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ಚಿಕ್ಕಮಗಳೂರು ಜಿಲ್ಲೆ, ಶ್ರೀ ಹಾಲಮೂರ್ತಿ ರಾವ್, ಮಾನ್ಯ ಪೊಲೀಸ್ ಉಪಾಧೀಕ್ಷಕರು, ತರೀಕೆರೆ ಉಪ ವಿಭಾಗ ರವರುಗಳ ಮಾರ್ಗದರ್ಶನದಲ್ಲಿ ಶ್ರೀ ರಫೀಕ್.ಎಂ. ಪೊಲೀಸ್ ವೃತ್ತ ನಿರೀಕ್ಷಕರು, ಕಡೂರು ವೃತ್ತ ರವರ ನೇತೃತ್ವದಲ್ಲಿ ಕೊಲೆಯಾದ ವ್ಯಕ್ತಿಯ ಗುರುತು ಪತ್ತೆ ಹಾಗೂ ಕೊಲೆಮಾಡಿದ ಆರೋಪಿಗಳ ಪತ್ತೆಗಾಗಿ ಹಾಗೂ ಕಾಣೆಯಾದ ಸುಬ್ರಹ್ಮಣ್ಯ ರವರ ಪತ್ತೆ ಸಂಬಂಧ ಕಡೂರು ಪೊಲೀಸ್ ಠಾಣಾ ಪಿ ಎಸ್ ಐ ರವರುಗಳು ಹಾಗೂ ಸಿಬ್ಬಂದಿಗಳನ್ನೊಳಗೊಂಡ 02 ಪ್ರತ್ಯೇಕ ತಂಡಗಳನ್ನು ನೇಮಕ ಮಾಡಿರುತ್ತಾರೆ. ನಂತರ ಎರಡೂ ಪ್ರಕರಣಗಳಿಗೆ ಸಂಬಂಧಿಸಿದಂತೆ ಪತ್ತೆ ತಂಡಗಳು ತಾಂತ್ರಿಕ ಹಾಗೂ ವಿವಿಧ ಆಯಾಮಾಗಳಿಂದ ಪರಿಶೀಲಿಸಲಾಗಿ ಮನುಷ್ಯ ಕಾಣಿ ಪ್ರಕರಣದಲ್ಲಿ ಕಾಣೆಯಾದ ವ್ಯಕ್ತಿ ಮತ್ತು ಕೊಲೆಯಾದ ವ್ಯಕ್ತಿಯು ಒಬ್ಬನೆ ಎಂದು ಖಚಿತಪಡಿಸಿಕೊಂಡು ಪ್ರಕರಣದಲ್ಲಿ ಅನುಮಾನಾಸ್ಪದ ವ್ಯಕ್ತಿಗಳಾದ 1) ಪ್ರದೀಪ್ ಆಚಾರ್ ಜನ್ ಮಲ್ಲೇಶ್ ಆಚಾರ್, 33 ವರ್ಷ, ಕಾರ್ಪೆಂಟರ್ ಕೆಲಸ ವಾಸ ಪ್ಲೇಗಿನಮ್ಮ ದೇವಸ್ಥಾನದ ಹತ್ತಿರ ಕಡೂರು ಟೌನ್, 2) ಸಿದ್ದೇಶ್ ಬಿನ್ ನಂಜುಂಡಪ್ಪ, 35 ವರ್ಷ, ವಿಭೂತಿ ವ್ಯಾಪಾರ ಕೆಲಸ ವಾಸ ಕೋಟೆ ಕಡೂರು ಟೌನ್, 3) ವಿಶ್ವಾಸ್ ಬಿನ್ ಮಂಜುನಾಥ್, 18 ವರ್ಷ, ಕೂಲಿ ಕೆಲಸ ವಾಸ ಫಾರೆಸ್ಟ್ ಆಫೀಸ್ ಹತ್ತಿರ ಕಡೂರು ಟೌನ್ ರವರುಗಳನ್ನು ವಶಕ್ಕೆ ಪಡೆದು ಕೂಲಂಕುಶವಾಗಿ ವಿಚಾರಣೆಗೊಳಪಡಿಸಿದಾಗ ಪ್ರಕರಣದ ಮೊದಲನೇ ಆರೋಪಿಗೂ ಹಾಗೂ ಕೊಲೆಯಾದ ವ್ಯಕ್ತಿಯ ಹೆಂಡತಿಗೂ ಅಕ್ರಮ ಸಂಬಂಧವಿದ್ದು, ಈ ವಿಚಾರದಲ್ಲಿ ತಿಳಿದ ಕೊಲೆಯಾದ ವ್ಯಕ್ತಿಯು ಅಕ್ರಮ ಸಂಬಂಧಕ್ಕೆ ಅಡ್ಡಿಪಡಿಸುತ್ತಿದ್ದ ಹಿನ್ನೆಲೆಯಲ್ಲಿ ಮೊದಲನೇ ಆರೋಪಿಯು ಎರಡು ಮತ್ತು ಮೂರನೇ ಆರೋಪಿಗಳಿಗೆ ಹಣದ ಆಮೀಷವನ್ನು ಒಡ್ಡಿ ಅವರುಗಳ ಸಹಾಯ ಪಡೆದು ದಿನಾಂಕ:31-05-2025 ರಂದು ಕಂಸಾಗರ ಗೇಟ್ ಬಳಿ ಎರಡನೇ ಆರೋಪಿಯ ಮಾರುತಿ ಓಮಿನಿ ಕಾರಿನಲ್ಲಿ ಸುಬ್ರಹ್ಮಣ್ಯ ರವರನ್ನು ಹಗ್ಗದಿಂದ ಕುತ್ತಿಗೆಗೆ ಬಿಗಿದು ಕೊಲೆ ಮಾಡಿ ನಂತರ ಶವವನ್ನು ಸೌದೆ ಮತ್ತು ಪೆಟ್ರೋಲ್ ಬಳಿಸಿ ಸುಟ್ಟುಹಾಕಿರುವುದಾಗಿ ತನಿಖೆಯಿಂದ ತಿಳಿದುಬಂದಿರುತ್ತದೆ. ಸದರಿ ಪ್ರಕರಣದಲ್ಲಿ ಒಟ್ಟು 03 ಜನ ಆರೋಪಿಗಳನ್ನು ದಸ್ತಗಿರಿ ಮಾಡಿ ಅವರುಗಳಿಂದ ಕೃತ್ಯಕ್ಕೆ ಬಳಸಿದ ಒಂದು ಮಾರುತಿ ಓಮಿನಿ ಕಾರನ್ನು ವಶಕ್ಕೆ ಪಡೆಯಲಾಗಿರುತ್ತದೆ. ನಂತರ ಆರೋಪಿಗಳನ್ನು ಘನ ನ್ಯಾಯಾಲಯದ ಆದೇಶದ ಮೇರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿರುತ್ತದೆ ಹಾಗೂ ಪ್ರಕರಣದ ತನಿಖೆ ಮುಂದುವರೆದಿರುತ್ತದೆ.
ಆರೋಪಿಯ ಪತ್ತೆ ತಂಡ & ತನಿಖಾ ತಂಡದಲ್ಲಿ ಶ್ರೀ ರಫೀಕ್.ಎಂ. ಪೊಲೀಸ್ ವೃತ್ತ ನಿರೀಕ್ಷಕರು, ಕಡೂರು ವೃತ್ತ ರವರ ನೇತೃತ್ವದಲ್ಲಿ ಪಿಎಸ್ಐ ರವರುಗಳಾದ ಶ್ರೀ ಪವನ್ ಕುಮಾರ್ ಸಿ.ಸಿ. ಶ್ರೀ ಧನಂಜಯ.ಡಿ.ಹೆಚ್, ಶ್ರೀಮತಿ ಲೀಲಾವತಿ, ಎ.ಎಸ್.ಐ ಶ್ರೀ ವೇದಮೂರ್ತಿ ಹಾಗೂ ಸಿಬ್ಬಂದಿಗಳಾದ ಶ್ರೀ ಮಧು ಕುಮಾರ್, ಹರೀಶ ಬಿ.ಸಿ. ಸ್ವಾಮಿ ಎ.ಓ, ಮಹಮ್ಮದ್ ರಿಯಾಜ್, ಧನಪಾಲ ನಾಯ್ಕ, ಪರಮೇಶ್ವರನಾಯ್ಕ ಜಿ.ಎಸ್. ಈಶ್ವರಪ್ಪ, ಬೀರೇಶ್ ಜಿ.ಕೆ. ಮಂಜುನಾಥ್ ಕೆ.ಎಸ್. ಬೀರೂರು ಪೊಲೀಸ್ ಠಾಣಾ ಅವರಾಧ ವಿಭಾಗದ ಸಿಬ್ಬಂಧಿಯವರಾದ ಹೇಮಂತ್ ಕುಮಾರ್ ಡಿ.ವಿ. ರಾಜಪ್ಪ ಬಿ.ಹೆಚ್ ಹಾಗೂ ಪ್ರಕರಣದ ತನಿಖಾ ತಂಡದಲ್ಲಿ ಶ್ರೀ ವಸಂತ್, ನಜೀರ್, ಕುಚೇಲ, ಮಂಜುನಾಥ್, ನವೀನ್ ಎ.ಆರ್ ಮತ್ತು ಜಿಲ್ಲಾ ಪೊಲೀಸ್ ಕಛೇರಿ ತಾಂತ್ರಿಕ ವಿಭಾಗದ ಅಬ್ದುಲ್ ರಬ್ಬಾನಿ, ನಯಾಜ್ ಅಂಜುಂ ರವರುಗಳು ಕಾರ್ಯ ನಿರ್ವಹಿಸಿದ್ದು, ಉತ್ತಮ ಕರ್ತವ್ಯ ನಿರ್ವಹಿಸಿದ ಅಧಿಕಾರಿ/ಸಿಬ್ಬಂದಿಗಳಿಗೆ ಪೊಲೀಸ್ ಅಧೀಕ್ಷಕರು, ಚಿಕ್ಕಮಗಳೂರು ಜಿಲ್ಲೆ ರವರು ಶ್ಲಾಘಿಸಿ, ಬಹುಮಾನವನ್ನು ಘೋಷಿಸಿರುತ್ತಾರೆ.

ವಿಶ್ವ ಪರಿಸರ ದಿನದ ಅಂಗವಾಗಿ ಈ ದಿನ ದಿನಾಂಕಃ 05-06-2025 ರಂದು ಬೆಳಗ್ಗೆ ಶಿವಮೊಗ್ಗ ಜಿಲ್ಲಾ ಪೊಲೀಸ್ ಕಛೇರಿ ಆವರಣದಲ್ಲಿ ಶ್ರೀ ಮಿಥುನ್ ಕುಮಾರ್ ಜಿ.ಕೆ ಐಪಿಎಸ್, ಮಾನ್ಯ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ಮತ್ತು ಶ್ರೀ ಅನಿಲ್ ಕುಮಾರ್ ಭೂಮರಡ್ಡಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರು - 1 ಶಿವಮೊಗ್ಗ ಜಿಲ್ಲೆ ಮತ್ತು ಎ. ಜಿ.ಕಾರ್ಯಪ್ಪ* ಹೆಚ್ಚುವರಿ ಪೊಲೀಸ್ ಅಧೀಕ್ಷಕರು - 2 ಶಿವಮೊಗ್ಗ ಜಿಲ್ಲೆ ರವರಿ
ವಿಶ್ವ ಪರಿಸರ ದಿನದ ಅಂಗವಾಗಿ ಈ ದಿನ ದಿನಾಂಕಃ 05-06-2025 ರಂದು ಬೆಳಗ್ಗೆ ಶಿವಮೊಗ್ಗ ಜಿಲ್ಲಾ ಪೊಲೀಸ್ ಕಛೇರಿ ಆವರಣದಲ್ಲಿ ಶ್ರೀ ಮಿಥುನ್ ಕುಮಾರ್ ಜಿ.ಕೆ ಐಪಿಎಸ್, ಮಾನ್ಯ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ಮತ್ತು ಶ್ರೀ ಅನಿಲ್ ಕುಮಾರ್ ಭೂಮರಡ್ಡಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರು - 1 ಶಿವಮೊಗ್ಗ ಜಿಲ್ಲೆ ಮತ್ತು ಎ. ಜಿ.ಕಾರ್ಯಪ್ಪ* ಹೆಚ್ಚುವರಿ ಪೊಲೀಸ್ ಅಧೀಕ್ಷಕರು - 2 ಶಿವಮೊಗ್ಗ ಜಿಲ್ಲೆ ರವರಿಂದ ಗಿಡವನ್ನು ನೆಡುವ ಮುಖಾಂತರ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಶ್ರೀ ದಿಲೀಪ್ ಕುಮಾರ್* ಪೊಲೀಸ್ ಉಪಾಧೀಕ್ಷಕರು, ಡಿಎಆರ್ ಶಿವಮೊಗ್ಗ ಮತ್ತು ಶಿವಮೊಗ್ಗ ನಗರದ ಪೊಲೀಸ್ ನಿರೀಕ್ಷಕರು, ಪೊಲೀಸ್ ಉಪ ನಿರೀಕ್ಷಕರು, ಅಧಿಕಾರಿ ಸಿಬ್ಬಂದಿಗಳು ಉಪಸ್ಥಿತರಿದ್ದರು. ಇದೇ ರೀತಿ ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆ, ವೃತ್ತ ಕಛೇರಿ ಮತ್ತು ಉಪ ವಿಭಾಗ ಕಛೇರಿಗಳಲ್ಲಿ, ಆಯಾ *ಡಿಎಸ್.ಪಿ, ಸಿಪಿಐ/ಪಿಐ, ಪಿಎಸ್ಐ* ರವರುಗಳು ಮತ್ತು ಪೊಲೀಸ್ ಸಿಬ್ಬಂಧಿಗಳು ಠಾಣಾ ಮತ್ತು ಕಛೇರಿಗಳ ಆವರಣದಲ್ಲಿ *ಗಿಡಗಳನ್ನು ನಡೆವ ಮುಖಾಂತರ ವಿಶ್ವ ಪರಿಸರ ದಿನವನ್ನು* ಆಚರಿಸಿರುತ್ತಾರೆ.*ಹಸಿರೇ ನಮ್ಮೆಲ್ಲರ ಉಸಿರು, ಕಾಡು ಬೆಳಸಿ ನಾಡು ಉಳಿಸುವ ಸಂಕಲ್ಪ ಮಾಡೋಣ*

ಜಗತ್ತಿನ ಸರ್ವ ಶ್ರೇಷ್ಠ ಕವಿ ರಸಋಷಿ ಕುವೆಂಪು
ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಚಿಕ್ಕಮಗಳೂರು ಜಿಲ್ಲೆ ಮತ್ತು ತಾಲೂಕು ಸಮಿತಿ ಚಿಕ್ಕಮಗಳೂರು
ವತಿಯಿಂದ ಚಿಕ್ಕಮಗಳೂರು ಜೀವನ ಸಂದ್ಯಾ ಆಶ್ರಮದ ಕಾರ್ಯಕ್ರಮ ಭವನದಲ್ಲಿ ನಡೆದ ಜಗದ ಕವಿ ಕುವೆಂಪುರವರ ವಿಶ್ವಮಾನವ ಸಂದೇಶ ಹಾಗೂ ಸಮಾಜ ಸೇವೆ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಚಿಂತಕರಿಗೆ ಅಭಿನಂದನ ಕಾರ್ಯಕ್ರಮದ ಉದ್ಘಾಟನೆಯನ್ನು ಜ್ಯೋತಿ ಬೆಳಗಿಸುವುದ
ಜಗತ್ತಿನ ಸರ್ವ ಶ್ರೇಷ್ಠ ಕವಿ ರಸಋಷಿ ಕುವೆಂಪು
ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಚಿಕ್ಕಮಗಳೂರು ಜಿಲ್ಲೆ ಮತ್ತು ತಾಲೂಕು ಸಮಿತಿ ಚಿಕ್ಕಮಗಳೂರು
ವತಿಯಿಂದ ಚಿಕ್ಕಮಗಳೂರು ಜೀವನ ಸಂದ್ಯಾ ಆಶ್ರಮದ ಕಾರ್ಯಕ್ರಮ ಭವನದಲ್ಲಿ ನಡೆದ ಜಗದ ಕವಿ ಕುವೆಂಪುರವರ ವಿಶ್ವಮಾನವ ಸಂದೇಶ ಹಾಗೂ ಸಮಾಜ ಸೇವೆ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಚಿಂತಕರಿಗೆ ಅಭಿನಂದನ ಕಾರ್ಯಕ್ರಮದ ಉದ್ಘಾಟನೆಯನ್ನು ಜ್ಯೋತಿ ಬೆಳಗಿಸುವುದರೊಂದಿಗೆ ಮತ್ತು ಕುವೆಂಪುರವರ ಭಾವಚಿತ್ರಕ್ಕೆ ಪುಷ್ಪ ನಮನ ನೆರವೇರಿಸಿ ತಮ್ಮ ಉದ್ಘಾಟನಾ ಭಾಷಣ ದಲ್ಲಿ ಮಾತನಾಡಿದ ಶ್ರೀಮತಿ ಭಾಗ್ಯ ಮೇಡಂ ರವರು ಉಪನ್ಯಾಸಕರು ಡಯಟ್ ಚಿಕ್ಕಮಗಳೂರು ಮಾತನಾಡುತ್ತಾ ಡಿಸೆಂಬರ್ 29ರಂದು ರಾಷ್ಟ್ರ ಕವಿ ಕುವೆಂಪು ಅವರ ಜನ್ಮದಿನ, ಮಲೆನಾಡ ಕವಿ ವಿಶ್ವಕವಿ ಯಾದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ರಾದ ಕುವೆಂಪುರವರು ಚಿಕ್ಕಮಗಳೂರು ಜಿಲ್ಲೆಯ ಹಿರೇಕೊಡಿಗೆ ಎಂಬ ಪುಟ್ಟ ಹಳ್ಳಿಯಲ್ಲಿ
ಡಿಸೆಂಬರ್ 29. 12.1904 ರಲ್ಲಿ ಜನ್ಮ ತಾಳಿದರು ಕುವೆಂಪುರವರ ಜನ್ಮದಿನವನ್ನು ವಿಶ್ವಮಾನವ ದಿನವನ್ನಾಗಿ ಆಚರಿಸಲಾಗುತ್ತದೆ ಮನುಜ ಪಥ ವಿಶ್ವ ಪಥ ಸಂದೇಶವನ್ನು ಸಾರಿದ ಶ್ರೇಷ್ಠ ವಿಶ್ವ ಮಾನವ ಕುವೆಂಪುರವರ ಬಗೆಗಿನ ಆಸಕ್ತಿದಾಯಕ ವಿಚಾರಗಳನ್ನ ತಿಳಿದುಕೊಳ್ಳುವ ದಿನ ಇದಾಗಿದೆ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ, ಕನ್ನಡ ನಾಡು ನುಡಿ ಗೆ ತನ್ನ ಜೀವನವನ್ನೇ ಮುಡುಪಾಗಿಟ್ಟ ಹಿರಿಯ ಮಹೋನ್ನತ ಕವಿ ಸಾಹಿತಿ ಕುವೆಂಪುರವರ ಜನ್ಮದಿನ.ಇವರ ಪೂರ್ಣ ಹೆಸರು ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ. 20ನೇ ಶತಮಾನದಲ್ಲಿ ಅವರು ಬೋಧಿಸಿದ ಅವರ ಸಾದ್ವಿಚಾರ ಸಂದೇಶ *ಮನುಜಮಥ ವಿಶ್ವ ಪಥ* ಸಂದೇಶವನ್ನು ಗೌರವಿಸುವ ಸಲುವಾಗಿ ಪ್ರತಿ ವರ್ಷ ಅವರ ಜನ್ಮದಿನವಾದ ಡಿಸೆಂಬರ್ 29 ನ್ನು ವಿಶ್ವಮಾನವ ದಿನ ಎಂದು ಆಚರಿಸುತ್ತಾ ಬರಲಾಗುತ್ತಿದೆ. ಈ ವಿಶೇಷ ದಿನವೊಂದು ಕುವೆಂಪುರವರು ಕನ್ನಡ ಸಾಹಿತ್ಯ ಲೋಕಕ್ಕೆ ನೀಡಿದ ಕೊಡುಗೆಗಳನ್ನು ನೆನಪಿಸಿಕೊಳ್ಳಲಾಗುತ್ತದೆ, ಕುವೆಂಪುರವರು ಕವಿಯಾಗಿ ಕಾದಂಬರಿಕಾರರಾಗಿ ಸಾಹಿತ್ಯದ ವಿವಿಧ ಮಜಲುಗಳಲ್ಲಿ ಕೃಷಿ ಮಾಡಿದ ಇಡೀ ಪ್ರಪಂಚಕ್ಕೆ ವಿಶ್ವ ಮಾನವ ಸಂದೇಶವನ್ನು ನೀಡಿದ ಮಹಾನ್ ವ್ಯಕ್ತಿಯಾಗಿದ್ದಾರೆ ಕನ್ನಡ ಸಾಹಿತ್ಯದ ಲೋಕಕ್ಕೆ ಇವರು ನೀಡಿದ ಕೊಡುಗೆ ಅಪಾರವಾಗಿದೆ ಶ್ರೀರಾಮಾಯಣ ದರ್ಶನಂ, ಕಾನೂರು ಹೆಗ್ಗಡತಿ, ಹಾಗೂ ಮಲೆಗಳಲ್ಲಿ ಮದುಮಗಳು, ಸೇರಿದಂತೆ ವಿವಿಧ ಕೃತಿ ಹಾಗೂ ಕಾದಂಬರಿಗಳನ್ನು ಕನ್ನಡ ಸಾಹಿತ್ಯ ಲೋಕಕ್ಕೆ ನೀಡಿದ್ದಾರೆ ಇವರ ಸಾಹಿತ್ಯ ಸೇವೆಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಪದ್ಮಭೂಷಣ, ಕರ್ನಾಟಕ ರತ್ನ, ಪ್ರಶಸ್ತಿಗಳು. ಮೊದಲು ನೆನಪಾಗುವುದು ರಸಋಷಿ ಕುವೆಂಪು ಹೌದು ಅವರ "ಚಿಂತನೆ ಮತ್ತು ಆದರ್ಶಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡು ಜಾತಿ ಭೇದ ಮರೆತು, ಸ್ನೇಹ ಸೌಹಾರ್ದತೆ ಭ್ರಾತೃತ್ವದಿಂದ ಬಾಳುವ ಉದ್ದೇಶದಿಂದ "ಈ ದಿನ ಆಚರಣೆಯನ್ನು ಆಚರಿಸಲಾಗುತ್ತದೆ. ಈ ಸುಸಂದರ್ಭದಲ್ಲಿ ನಾವು ಅವರ ವಿಶ್ವಮಾನವ ಸಂದೇಶವನ್ನು ನೆನಪಿಸಿಕೊಂಡು ನಮ್ಮ ಜೀವನದಲ್ಲಿ ಅದನ್ನು ಅಳವಡಿಸಿಕೊಳ್ಳೋಣ ಎಲ್ಲರ ಒಳಿತಿಗಾಗಿ ದುಡಿಯೋಣ ಜಗತ್ತಿನ ಸರ್ವ ಶ್ರೇಷ್ಠ ಕವಿಗಳಲ್ಲಿ ಒಬ್ಬರು ರಸ ಋಷಿ ಕವಿ ಕುವೆಂಪುರವರು ಅವರ ಮೂಲ ತತ್ವ *ಸರ್ವೇ ಜನ ಸುಖಿನೋಭವಂತು* ಎಂಬಂತೆ ಸರ್ವರ ಏಳಿಗೆಗೆ ಶ್ರಮಿಸೋಣ ಎಂದು ಜಗದ ಕವಿಯ ಸಂದೇಶವನ್ನು ತಿಳಿಸಿದರು . ಕಾರ್ಯಕ್ರಮದಲ್ಲಿ ಪ್ರಸ್ತಾವಿಕ ಮಾತನಾಡಿದ ಶ್ರೀಯುತ ಕೆ ಎನ್ ಮೋಹನ್ ಕೋಶಾಧ್ಯಕ್ಷರು ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಚಿಕ್ಕಮಗಳೂರು ರವರು ಜಿಲ್ಲಾಧ್ಯಂತ ಶಾಲಾ ಕಾಲೇಜುಗಳಲ್ಲಿ ಕವಿ ಕುವೆಂಪು ರವರ ಜನ್ಮದಿನದಂದು ವಿಶ್ವಮಾನವ ಸಂದೇಶವನ್ನು ಪ್ರಬಂಧ ಸ್ಪರ್ಧೆ, ರಸಪ್ರಶ್ನೆ,ಕುವೆಂಪು ಚಿತ್ರಕಲಾ ಸ್ಪರ್ಧೆ ಗಳನ್ನು ಏರ್ಪಡಿಸಿ ಇಂದಿನ ಮಕ್ಕಳು ಮತ್ತು ಯುವಜನತೆಗೆ ವಿಶ್ವಮಾನವ ಸಂದೇಶವನ್ನು ಸಾರುವ ಪ್ರಯತ್ನವನ್ನು ನಮ್ಮ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಆಯೋಜಿಸುತ್ತಿದೆ, ಅನೇಕ ಸಾಹಿತಿಗಳು ಮತ್ತು ಸಮಾಜ ಸೇವಕರನ್ನು ಉತ್ತಮ ಶಿಕ್ಷಕರನ್ನು ಗೌರವಿಸುವ ಕಾರ್ಯ ನಮ್ಮ ಸಮಿತಿಯಿಂದ ನಡೆಯುತ್ತಿದೆ ಎಂದು ತಿಳಿಸಿದರು. ಮುಖ್ಯ ಅತಿಥಿಗಳಾದ ಶ್ರೀಯುತ ಮುಗಳಿಕಟ್ಟೆ ಲೋಕೇಶ್ ಜಿಲ್ಲಾಧ್ಯಕ್ಷರು ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಚಿಕ್ಕಮಗಳೂರು ಜಿಲ್ಲೆ ರವರು ಮಾತನಾಡುತ್ತಾ ಕವಿ ಕುವೆಂಪುರವರ ಜನ್ಮದಿನವನ್ನು ವಿಶ್ವಮಾನವ ದಿನವನ್ನಾಗಿ ಆಚರಿಸುತ್ತಿ ತಿರುವುದು ನಮ್ಮೆಲ್ಲರಿಗೂ ದೊರೆತ ಅಮೂಲ್ಯ ಅವಕಾಶ, ಕವಿ ಕುವೆಂಪುರವರ ಸಂದೇಶ ಜಗತ್ತಿನ ಪ್ರತಿಯೊಬ್ಬರಿಗೂ ವಿಚಾರಧಾರೆಗಳು ಚಿಂತನ ಮಂತನವಾಗಬೇಕು. ಈ ನಿಟ್ಟಿನಲ್ಲಿ ಕುವೆಂಪುರವರ ವಿಚಾರಧಾರೆ , *ಪ್ರತಿಯೊಂದು ಮಗು ಹುಟ್ಟುತ್ತಲೇ ವಿಶ್ವಮಾನವನಾಗಿ* "ಬೆಳೆಯುತ್ತಾ ನಾವು ಅದನ್ನು ಅಲ್ಪ ಮಾನವನನ್ನಾಗಿ" ಮಾಡುತ್ತೇವೆ ಆದರೆ ಮತ್ತೆ ಅದನ್ನು ವಿಶ್ವಮಾನವನ್ನಾಗಿ ಮಾಡುವುದೇ ವೈಜ್ಞಾನಿಕ ನೆಲಗಟ್ಟಿನ ಮೇಲೆ ಶೈಕ್ಷಣಿಕ ಜ್ಞಾನ ಮಂತ್ರವೆಂಬ ಕರ್ತವ್ಯವಾಗಬೇಕು ಹುಟ್ಟುವಾಗ ವಿಶ್ವಮಾನವನಾಗಿಯೇ ಹುಟ್ಟಿದ ಮಗುವನ್ನು ನಾವು ದೇಶ ಭಾಷೆ ಮತ ಜಾತಿ ಜನಾಂಗ ವರ್ಣ ಇತ್ಯಾದಿ ಉಪಾದಿಗಳಿಂದ ಬದ್ಧನನ್ನಾಗಿ ಮಾಡುತ್ತೇವೆ ಅವೆಲ್ಲವುಗಳಿಂದ ಪಾರು ಮಾಡಿ ಅವನನ್ನು ಬುದ್ದನನ್ನಾಗಿಸುವುದು ಅಂದರೆ ವಿಶ್ವಮಾನವನ್ನಾಗಿಸುವುದು ಆ ಮಗುವನ್ನು ಪರಿವರ್ತಿಸುವುದು ನಮ್ಮ ವಿದ್ಯೆಯ ನಮ್ಮ ವಿಜ್ಞಾನದ ಸಂಸ್ಕೃತಿ ನಾಗರಿಕತೆ ಜ್ಞಾನ ವಿಜ್ಞಾನದ ಆದ್ಯ ಕರ್ತವ್ಯವಾಗಬೇಕು ಪ್ರಪಂಚದ ಮಕ್ಕಳೆಲ್ಲ ಹನಿಕೇತರಾಗಬೇಕು. ಲೋಕ ಉಳಿದು ಬಳಿ ಬಾಳಿ ಬದುಕಬೇಕಾದರೆ ಮನುಜ ಮತ ವಿಶ್ವ ಪಥ,ಸರ್ವೋದಯ, ಸಮನ್ವಯ ಪೂರ್ಣ ದೃಷ್ಟಿ, ಈ ಪಂಚಮಂತ್ರಗಳನ್ನ ಮುಂದಿನ ದೃಷ್ಟಿಯಾಗಿಸಿಕೊಳ್ಳಬೇಕಾಗಿದೆ ಮನುಷ್ಯರೊಂದಿಗೆ ಪರಸ್ಪರ ವಿಮುಖವಾಗಿ ಹಿಡಿದು ಹೋಗುವುದಲ್ಲ. ಮನುಷ್ಯ ನ ಮನಸ್ಸು ಮನಸ್ಸಿನೊಂದಿಗೆ ಸಮನ್ವಯಗೊಳ್ಳುವುದು. ಎಲ್ಲವನ್ನು ನಾವು ನೋಡುವ ದೃಷ್ಟಿ ಕಾಣುವ ಪೂರ್ಣ ದೃಷ್ಟಿಯಾಗಬೇಕು ಎಂಬ ಕವಿ ಕುವೆಂಪುರವರ ವಾಣಿಯಂತೆ ಕನ್ನಡಕ್ಕಾಗಿ ಕೈಯೆತ್ತು ನಿನ್ನ ಕೈ ಕಲ್ಪವೃಕ್ಷವಾಗುತ್ತದೆ ಕನ್ನಡಕ್ಕಾಗಿ ಕೊರಳೆತ್ತು ಅಲ್ಲಿ ಪಾಂಚಜನ್ಯ ಮೂಡುತ್ತದೆ, ಕನ್ನಡಕ್ಕಾಗಿ ಕಿರು ಬೆರಳೆತ್ತಿದರೂ ಸಾಕು ಇಂದು ಅದೇ ಗೋವರ್ಧನ ಗಿರಿಧಾರಿಯಾಗುತ್ತದೆ. ಎಂಬ ಸಂದೇಶದಂತೆ ನಾಡು ನುಡಿಯೇ ದೇಶ ಭಾಷೆ ಜಲ ನೆಲ ಎಲ್ಲವುಗಳ ಅಳಿವು ಉಳಿವು ನಮ್ಮ ನಿಮ್ಮೆಲ್ಲರ ಮೇಲಿದೆ ಈ ನಿಟ್ಟಿನಲ್ಲಿ ನಮ್ಮ ಸಮಿತಿಯು ರಾಜ್ಯಾದ್ಯಂತ ಜಗದ ಕವಿ ಕುವೆಂಪು ರವರ ಜನ್ಮದಿನವನ್ನು ವಿಶ್ವಮಾನವ ಸಂದೇಶವನ್ನ ಸಾರುವ ಅವಕಾಶ ಒದಗಿ ಬಂದಿರುವುದು ಇದೊಂದು ಶುಭದಿನ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಆಗಮಿಸಿದ ಶ್ರೀಯುತ ಆರ್,ಪ್ರಕಾಶ್ ಮೂಡಿಗೆರೆ ತಾಲೂಕ್ ಕೆಜೆ ವಿ ಎಸ್ ಅಧ್ಯಕ್ಷರು ಮಾತನಾಡುತ್ತಾ ಮಲೆನಾಡಿನ ಸುಂದರ ಚಿತ್ರಣವನ್ನು ಅಲ್ಲಿನ ಸೊಬಗನ್ನು ತಮ್ಮ ಕವಿತೆಗಳ ಮೂಲಕ ಕವಿ ಕುಲ ಕೋಟಿಗೆ ಮತ್ತು ಮಾನವ ಕುಲಕ್ಕೆ ಮಹೋನ್ನತ ಶ್ರೀರಾಮಾಯಣ ದರ್ಶನಂ ಮತ್ತು ಮಲೆಗಳಲ್ಲಿ ಮದುಮಗಳು ಕಾನೂರ ಹೆಗ್ಗಡತಿ ಮುಂತಾದ ಅಮೂಲ್ಯ ಗ್ರಂಥಗಳನ್ನು ನೀಡುವುದರೊಂದಿಗೆ ಸಾಹಿತ್ಯದ ಕೃಷಿಗೆ ಮಾರ್ಗದರ್ಶಕರಾಗಿದ್ದಾರೆ ಎಂದು ತಿಳಿಸಿದರು ಕಾರ್ಯಕ್ರಮದ ಇನ್ನೋರ್ವ ಅತಿಥಿ ಶ್ರೀಯುತ ರುದ್ರಪ್ಪ ಬೀರೂರು ಜಿಲ್ಲಾ ಸಂಚಾಲಕರು ಕೆ ಜೆವಿಎಸ್ ರವರು ಮೋಹನ್ನತ ಕವಿ ಕುವೆಂಪುರವರ ಹುಟ್ಟಿದ ದಿನವನ್ನು ಇಂತಹ ಮಹನೀಯ ಸ್ಥಳದಲ್ಲಿ ಜೀವನ ಸಂಧ್ಯಾ ಇಲ್ಲಿನ ಗುರು ಹಿರಿಯ ರೊಂದಿಗೆ ಮುಕ್ತವಾಗಿ ಕವಿ ಕುವೆಂಪುರವರ ಮಲೆನಾಡಿನ ಬಾಲ್ಯದ ಬದುಕು ಅಲ್ಲಿಯ ಆಚಾರ ವಿಚಾರಗಳನ್ನು ತಿಳಿಸುವುದರೊಂದಿಗೆ ಕುವೆಂಪುರವರ ಜೀವನ ಸಂದೇಶವನ್ನು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಶ್ರೀಯುತ ಕೃಷ್ಣಮೂರ್ತಿ ಅಧ್ಯಕ್ಷರು ಕೆ ಜೆ ವಿ ಎಸ್ ಚಿಕ್ಕಮಗಳೂರು ತಾಲೂಕು ರವರು ಈ ಸುಂದರ ವಿಶ್ವ ಮಾನವ ಸಂದೇಶದ ರಾಷ್ಟ್ರಕವಿ ಜಗದ ಕವಿ ನಮ್ಮ ನಿಮ್ಮೆಲ್ಲರ ಮನ ಮನೆಯ ಕವಿ ಕುವೆಂಪು ಎಂದೆಂದಿಗೂ ಮರೆಯಲಾಗದ ವ್ಯಕ್ತಿತ್ವವುಳ್ಳ ಮನುಜ ಮತ ವಿಶ್ವಪಥ ಸಾರಿದ ಮಹಾನ್ ವ್ಯಕ್ತಿ ಯ ಹುಟ್ಟಿದ ದಿನವನ್ನು ಆಚರಿಸುತ್ತಿರುವುದು ಒಂದು ದೊಡ್ಡ ಸುಸಂದರ್ಭ ಅದಕ್ಕಾಗಿ ಶುಭ ಹಾರೈಸುವದು ನಮ್ಮ ನಿಮ್ಮೆಲ್ಲರ ಕರ್ತವ್ಯ ಎಂದು ತಿಳಿಸಿದರು .ಕಾರ್ಯಕ್ರಮದಲ್ಲಿ ಗೌರವ ಪ್ರಧಾನ ಕಾರ್ಯದರ್ಶಿಯಾದ ಶ್ರೀಯುತ ಹೊನ್ನೇ ಗೌಡ್ರು ಕಾರ್ಯಕ್ರಮಕ್ಕೆ ಶುಭಾಶಯ ಕೋರುವದರೊಂದಿಗೆ ಜೀವನ ಸಂಧ್ಯಾ ಆಶ್ರಮದ ನೆರವಿಗಾಗಿ ಕಾರ್ಯಕ್ರಮದ ಸವಿ ನೆನಪಿಗಾಗಿ ಅವರ ಕುಟುಂಬದ ವತಿಯಿಂದ ಸಂಸ್ಥೆಗೆ 15 ಸಾವಿರ ರೂಪಾಯಿಗಳ ದೇಣಿಗೆಯನ್ನು ನೀಡುವುದರೊಂದಿ ಗೆ ಸಂಸ್ಥೆಯ ದಾನಿಗಳಾಗಿ ಶುಭ ಹಾರೈಕೆ ಸಲ್ಲಿಸಿದರು. ಜೀವನ ಸಂಧ್ಯಾ ಆಶ್ರಮದ ವ್ಯವಸ್ಥಾಪಕ ನಿರ್ದೇಶಕರಾದ ಮಾನ್ಯ ಶ್ರೀ ಹರೀಶ್ ಸಿಂಗ್ ಶ್ರೀಮತಿ ಶ್ರೀ ಚಂದ್ರಕಲಾ ದಂಪತಿಗಳಿಗೆ ಜ್ಞಾನ ವಿಜ್ಞಾನ ಸಮಿತಿಯ ವತಿಯಿಂದ ಶ್ರೀಯುತರ ಸಮಾಜ ಸೇವೆಯನ್ನು ಸ್ಮರಿಸಿ ಸನ್ಮಾನಿಸಲಾಯಿತು ಮತ್ತು ಶಿಕ್ಷಣ ಕ್ಷೇತ್ರದಲ್ಲಿನ ವೈಜ್ಞಾನಿಕ ಸಾಧನೆಗಾಗಿ ಡಯಟ್ ಉಪನ್ಯಾಸಕರಾದ ಶ್ರೀ ಮತಿ ಭಾಗ್ಯ ಮೇಡಮ್ ರವರನ್ನು ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಶ್ರೀಯುತ ಭದ್ರೆಗೌಡ್ರು ಸ್ವಾಗತಿಸಿದರು. ಶ್ರೀಯುತ ಬಿ ಎಲ್ ಮೋಹನ್ ಅವರು ಕಾರ್ಯಕ್ರಮ ನಿರೂಪಿಸಿದರು. ಮುಗಳಿಕಟ್ಟೆ ಲೋಕೇಶ್, ಜಿಲ್ಲಾಧ್ಯಕ್ಷರು, ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ(ರಿ) ಚಿಕ್ಕಮಗಳೂರು ಜಿಲ್ಲೆ

ಸೊರಬ: ಹಿಂದೂಗಳ ಪವಿತ್ರ ಕ್ಷೇತ್ರ ಧರ್ಮಸ್ಥಳದ ಘನತೆಗೆ ಧಕ್ಕೆ ಮತ್ತು ಕಳಂಕ ತರುತ್ತಿರುವವರನ್ನು ತಕ್ಷಣ ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಬಿಜೆಪಿ ಸೊರಬ ಮಂಡಲ ವತಿಯಿಂದ ಹಿಂದೂಪರ ಸಂಘಟನೆಗಳು ಹಾಗೂ ಭಕ್ತಾದಿಗಳ ನೇತೃತ್ವದಲ್ಲಿ ಶಿವಮೊಗ್ಗ ಜಿಲ್ಲೆ ಸೊರಬ ಪಟ್ಟಣದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.
ಸೊರಬ ಪಟ್ಟಣದ ಶ್ರೀ ರಂಗನಾಥ ಸ್ವಾಮಿ ದೇವಸ್ಥಾನದಿಂದ ಮೆರವಣಿಗೆಯಲ್ಲಿ ತೆರಳಿ ಖಾಸಗ
ಸೊರಬ: ಹಿಂದೂಗಳ ಪವಿತ್ರ ಕ್ಷೇತ್ರ ಧರ್ಮಸ್ಥಳದ ಘನತೆಗೆ ಧಕ್ಕೆ ಮತ್ತು ಕಳಂಕ ತರುತ್ತಿರುವವರನ್ನು ತಕ್ಷಣ ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಬಿಜೆಪಿ ಸೊರಬ ಮಂಡಲ ವತಿಯಿಂದ ಹಿಂದೂಪರ ಸಂಘಟನೆಗಳು ಹಾಗೂ ಭಕ್ತಾದಿಗಳ ನೇತೃತ್ವದಲ್ಲಿ ಶಿವಮೊಗ್ಗ ಜಿಲ್ಲೆ ಸೊರಬ ಪಟ್ಟಣದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.
ಸೊರಬ ಪಟ್ಟಣದ ಶ್ರೀ ರಂಗನಾಥ ಸ್ವಾಮಿ ದೇವಸ್ಥಾನದಿಂದ ಮೆರವಣಿಗೆಯಲ್ಲಿ ತೆರಳಿ ಖಾಸಗಿ ಬಸ್ ನಿಲ್ದಾಣದ ಆವರಣದಲ್ಲಿ ಬಹಿರಂಗ ಸಭೆ ನಡೆಸಲಾಯಿತು. ಸಭೆಯನ್ನುದ್ದೇಶಿಸಿ ಬಿಜೆಪಿ ಮುಖಂಡ ಹಾಗೂ ಸಂಚಾಲಕ ಡಾಕ್ಟರ್ ಜ್ಞಾನೇಶ್ ಹೆಚ್.ಈ ಮಾತನಾಡಿ ಇತ್ತೀಚಿನ ದಿನಗಳಲ್ಲಿ ಪಟ್ಟಬದ್ಧ ಹಿತಾಸಕ್ತಿಗಳು ಹಾಗೂ ಹಿಂದೂ ವಿರೋಧಿ ಶಕ್ತಿಗಳು ಸಂಘಟಿತವಾಗಿ ಧರ್ಮಸ್ಥಳ ಕ್ಷೇತ್ರದ ಬಗ್ಗೆ ಅಪಪ್ರಚಾರ ನಡೆಸುತ್ತಿದ್ದು, ಧರ್ಮಸ್ಥಳದ ಗೌರವ ಹಾಗೂ ಘನತೆಗೆ ಧಕ್ಕೆ ತರುವಂತ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಇದು ಕೋಟ್ಯಂತರ ಕನ್ನಡಿಗರ ಭಾವನೆಗಳಿಗೆ ನೋವುಂಟು ಮಾಡುವುದರೊಂದಿಗೆ ಸಮಾಜದ ಶಾಂತಿ-ಸೌಹಾರ್ದತೆಗೂ ಧಕ್ಕೆ ತರುತ್ತಿದೆ. ಹಿಂದೂ ಪರಂಪರೆಯ ನಾವೆಲ್ಲರೂ ಸ್ವಾಭಿಮಾನಿಗಳಾಗಿದ್ದೇವೆ. ಅಂದು ಸೋಮನಾಥ, ವಿಶ್ವನಾಥ ಇಂದು ಮಂಜುನಾಥನ ಅಸ್ವಿತ್ವವನ್ನೇ ಪ್ರಶ್ನಿಸಲು ಮುಂದಾಗಿದ್ದಾರೆ. ಘಜ್ನಿ ಸಂತತಿಯವರು ಅಂದೂ, ಇಂತಹ ಸಂತತಿಗೆ ನಾವೆಲ್ಲರೂ ವಿಚಲಿತರಾಗಬೇಕಿಲ್ಲ ಎಂದರು.
ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ರಾಜು ಎಂ ತಲ್ಲೂರು ಮಾತನಾಡಿ, ಇಂದು ನಾವು ಧರ್ಮದ ಉಳಿವಿಗಾಗಿ ಹೋರಾಟ ನಡೆಸುವ ಹೋರಾಟ ಹಿಂದೂ ವಿರೋಧಿಗಳಿಗೆ ಇದು ಎಚ್ಚರಿಕೆಯ ಘಂಟೆ. ಧರ್ಮಸ್ಥಳ ನಮಗೆ ಕಲಿಸಿದ್ದು ಧರ್ಮ, ಆಸ್ತಿಕತೆ. ಪ್ರತಿ ಭಕ್ತ ಹಸಿವನ್ನು ತೀರಿಸುವ ಕ್ಷೇತ್ರ ಧರ್ಮಸ್ಥಳ. ಇಂತಹ ಕ್ಷೇತ್ರದ ಬಗ್ಗೆ ಅಪಪ್ರಚಾರ ಮಾಡುತ್ತಿರುವುದು ಅತಿದೊಡ್ಡ ಷಡ್ಯಂತ್ರವಾಗಿದೆ. ಹಿಂದೂಗಳ ವಿರುದ್ಧ ಇದೇ ರೀತಿ ಮುಂದುವರೆದರೆ ದೇಶಾದ್ಯಂತ ಹೋರಾಟ ನಡೆಸಬೇಕಾಗುತ್ತದೆ. ರಾಜ್ಯ ಸರ್ಕಾರವು ಈ ಷಡ್ಯಂತ್ರಕ್ಕೆ ಒಳಗಾಗದೇ ನಮ್ಮ ಹಿಂದುತ್ವವನ್ನು ಉಳಿಸಲು ಮುಂದಾಗಬೇಕು ಎಂದು ಎಚ್ಚರಿಸಿದರು.
ವಿಧಾನ ಪರಿಷತ್ ಸದಸ್ಯ ಧನಂಜಯ ಸರ್ಜಿ ಮಾತನಾಡಿ ಈ ಷಡ್ಯಂತ್ರದ ಪಿತೂರಿ ಮಾಡಿರುವ ಸಮಾಜ ಘಾತುಕರ ವಿರುದ್ಧ ಹಾಗೂ ರಾಷ್ಟçವಿರೋಧಿ ಚಟುವಟಿಕೆ ನಡೆಸುತ್ತಿರುವವರ ವಿರುದ್ಧ ಕಾನೂನು ರೀತ್ಯ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹರಿಕೃಷ್ಣ, ಮಂಡಲ ಅಧ್ಯಕ್ಷ ಪ್ರಕಾಶ್ ಅಗಸನಹಳ್ಳಿ ಮಾತನಾಡಿದರು.
ಪ್ರಮುಖರಾದ ದೇವೇಂದ್ರಪ್ಪ ಚನ್ನಾಪುರ, ಪ್ರಕಾಶ್ ತಲಕಾಲಕೊಪ್ಪ, ಪಾಣಿರಾಜಪ್ಪ, ವಿಜೇಂದ್ರ ತಲಗುಂದ, ಸುರೇಶ್ ಉದ್ರಿ, ಡಿ. ಶಿವಯೋಗಿ, ಉಮೇಶ್ ಉಡುಗಣಿ, ಗೀತಾ ಮಲ್ಲಿಕಾರ್ಜುನ, ಜಾನಕಪ್ಪ ಒಡೆಯರ್, ಹೊಳಿಯಮ್ಮ ಸೇರಿದಂತೆ ಮುಖಂಡರು, ಕಾರ್ಯಕರ್ತರು, ಭಕ್ತಾದಿಗಳು, ಹಿಂದೂಪರ ಸಂಘಟನೆಯವರು ಪಾಲ್ಗೊಂಡಿದ್ದರು.

Established in 2005, arakshakavaninews has been the go-to source for the latest news and trends in the newspaper and magazine industry. Our journey began with a small team of journalists who shared a passion for storytelling and a desire to inform and engage readers. Over the years, we have grown and expanded our team, but our commitment to delivering high-quality content has never wavered.

At arakshakavaninews, we value integrity, accuracy, and creativity. We are committed to providing our readers with truthful and unbiased information, and we strive to be a trusted source of news and information for our community. We believe that great content is a result of hard work, dedication, and a willingness to take risks and try new things.

Our team is made up of talented journalists, editors, and designers who are passionate about their work. We are dedicated to delivering the best possible content to our readers, and we take pride in the quality of our work. We believe that our team is our greatest asset, and we are committed to investing in their professional development and growth.

At arakshakavaninews, we believe in the transformative power of news. Our philosophy revolves around transparency, integrity, and the pursuit of truth.

We celebrate diversity at arakshakavaninews. Our newsroom is a melting pot of ideas and perspectives, ensuring a well-rounded representation of news.

As a responsible news organization, arakshakavaninews is committed to sustainability. We are continuously looking for ways to minimize our environmental impact.
ತರೀಕೆರೆ : ಪುರಸಭಾ ಸದಸ್ಯ ಲೋಕಾಯುಕ್ತ ಬಲೆಗೆ.
What's something exciting your business offers? Say it here.
Give customers a reason to do business with you.
Say something interesting about your business here.
What's something exciting your business offers? Say it here.
Say something interesting about your business here.
What's something exciting your business offers? Say it here.
Have a story idea for us? Would you like to write for us?
Send us a message and let us know what you are thinking about.
Bhovi Colony, 3rd cross, Kodi camp, Tarikere taluk, Chikkamagaluru Dist., Bhovi colony/Lingadahalli main road, Tarikere, KA 577228
Mon | 12:00 am – 12:00 am | |
Tue | 12:00 am – 12:00 am | |
Wed | 12:00 am – 12:00 am | |
Thu | 12:00 am – 12:00 am | |
Fri | 12:00 am – 12:00 am | |
Sat | 12:00 am – 12:00 am | |
Sun | 12:00 am – 12:00 am |
Sign up to get each issue delivered straight to your inbox.
We use cookies to analyze website traffic and optimize your website experience. By accepting our use of cookies, your data will be aggregated with all other user data.