*ಸ್ವಾತಂತ್ರ್ಯ ದಿನದಂದು ದೇಶದ ಸುರಕ್ಷಿತ ಭವಿಷ್ಯಕ್ಕೆ ದೃಢ ಸಂಕಲ್ಪ ಕೈಗೊಳ್ಳಬೇಕು: ಸಚಿವ ಕೆ.ಜೆ.ಜಾರ್ಜ್ *
- *ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ನರವೇರಿಸಿದ ಜಿಲ್ಲಾ ಉಸ್ತುವಾರಿ ಸಚಿವರು*
- *ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಸಮರ್ಪಕ ಜಾರಿ ದೇಶಕ್ಕೇ ಮಾದರಿ ಎಂದು ಬಣ್ಣನೆ *
*ಚಿಕ್ಕಮಗಳೂರು, ಆ.15, 2025 *: ದೇಶದ ಬಗ್ಗೆ ಹೆಮ್ಮೆ ಪಡಲು ಮತ್ತು ದೇಶಕ್ಕೆ ಸುರಕ್ಷಿತ ಭವಿಷ್ಯ ರೂಪಿಸುವ ಸಂಕಲ್ಪ ಕೈಗೊಳ್ಳಲು ಸ್ವಾತಂತ್ರ್ಯ ದಿನಾಚರಣೆ ಒಂದು ಸದವಕಾಶ ಎಂದು ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಜವಾಬ್ದಾರಿಯನ್ನೂ ಹೊಂದಿರುವ ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.
ಜಿಲ್ಲಾಡಳಿತವು ಇಲ್ಲಿನ ಜಿಲ್ಲಾ ಆಟದ ಮೈದಾನದಲ್ಲಿ ಶುಕ್ರವಾರ ಆಯೋಜಿಸಿದ್ದ 79ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ರಾಷ್ಟ್ರಧ್ವಜಾರೋಹಣ ನೆರೇರಿಸಿ, ಧ್ವಜ ವಂದನೆ ಸ್ವೀಕರಿಸಿದ ಬಳಿಕ ಮಾತನಾಡಿದ ಅವರು, "ಲಕ್ಷಾಂತರ ಮಂದಿಯ ತ್ಯಾಗ, ಬಲಿದಾನದಿಂದ ದೊರೆತ ಸ್ವಾತಂತ್ರ್ಯವನ್ನು ಉಳಿಸುವುದರ ಜತೆಗೆ ದೇಶಕ್ಕೆ ಸುರಕ್ಷಿತ ಭವಿಷ್ಯ ರೂಪಿಸಬೇಕಿದೆ. ಈ ನಿಟ್ಟಿನಲ್ಲಿ ಎಲ್ಲರೂ ದೃಢ ಸಂಕಲ್ಪ ಕೈಗೊಳ್ಳಬೇಕಿದೆ," ಎಂದರು.
"ಸ್ವಾತಂತ್ರ್ಯ ಹೋರಾಟದಲ್ಲಿ ಚಿಕ್ಕಮಗಳೂರು ಜಿಲ್ಲೆಯ ಜನರೂ ಕ್ರಿಯಾಶೀಲವಾಗಿ ಪಾಲ್ಗೊಂಡಿದ್ದರು. ಸಾಮಾಜಿಕ ಅಸಮಾನತೆಯ ವಿರುದ್ಧ ಹೋರಾಟ, ವಿದೇಶಿ ವಸ್ತ್ರ ಹಾಗೂ ವಸ್ತುಗಳ ಬಹಿಷ್ಕಾರ; ಸ್ವದೇಶಿ ವಸ್ತುಗಳ ಬಳಕೆಗೆ ಪ್ರೋತ್ಸಾಹ, ಚರಕದಿಂದ ನೂಲು ತೆಗೆಯುವುದು, ಖಾದಿ ವಸ್ತ್ರ ಬಳಕೆ ಮಾಡುವುದು, ಕಾನೂನು ಭಂಗ ಚಳುವಳಿ ಇಂತಹ ಅನೇಕ ಹೋರಾಟಗಳು ಮೂಡಿ ಬಂದಿದ್ದವು," ಎಂದು ಸ್ಮರಿಸಿಕೊಂಡರು.
"ಭಾರತ ಸ್ವಾತಂತ್ರ್ಯ ಅಭಿಯಾನದಲ್ಲಿ ಕಾಂಗ್ರೆಸ್ನ ಸಾಧನೆ ಅತ್ಯಂತ ಮಹತ್ವದ್ದು. ಸ್ವಾತಂತ್ರ್ಯಾನಂತರವೂ ಕಾಂಗ್ರೆಸ್ ಪಕ್ಷವು ಭಾರತೀಯರಿಗೆ ಒಳ್ಳೆಯ ಆಡಳಿತ ಮತ್ತು ಸುಭದ್ರತೆಯನ್ನು ನೀಡಬೇಕೆಂಬ ದೃಢ ಸಂಕಲ್ಪದೊಂದಿಗೆ ಮುಂದುವರಿಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರಾ್ಯದಲ್ಲಿ ಅಧಿಕಾರಕ್ಕೆ ಬಂದ ನಂತರ ಪಂಚ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಅಳುಕಿಲ್ಲದೆ ನಿರ್ಭಯವಾಗಿ ಮತ್ತು ಅತ್ಯಂತ ಸಮರ್ಪಕವಾಗಿ ಜಾರಿಗೆ ತಂದಿರುವುದು ಇಡೀ ದೇಶದಲ್ಲಿಯೇ ಮಾದರಿಯಾಗಿದೆ ಎಂದರು.
*ಕಾನೂನು ಸುವ್ಯವಸ್ಥೆ ಮತ್ತು ಅಭಿವೃದ್ಧಿಗೆ ಆದ್ಯತೆ*:
ಚಿಕ್ಕಮಗಳೂರು ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆಗೆ ಕೈಗೊಂಡಿರುವ ಕ್ರಮಗಳ ಕುರಿತು ಮಾತನಾಡಿದ ಸಚಿವರು, ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ‘ಮನೆ ಮನೆ ಪೊಲೀಸ್’, ‘ಆರಕ್ಷಕ ಗೆಳತಿ’ ಮತ್ತು ಮಾದಕ ವಸ್ತು ವಿರೋಧಿ ಎಂಬ ಮೂರು ವಿನೂತನ ಕಾರ್ಯಕ್ರಮಗಳನ್ನು ಆರಂಭಿಸಲಾಗಿದೆ. ಆರಕ್ಷಕ ಗೆಳತಿ ಕಾರ್ಯಕ್ರಮದಡಿ ಬಾಲಕಿಯರ ಹಾಸ್ಟೆಲ್ಗಳಲ್ಲಿರುವ ವಿದ್ಯಾರ್ಥಿನಿಯರಿಗೆ ಕಾನೂನಿನ ಅರಿವು ಮೂಡಿಸುವುದು ಹಾಗೂ ಅವರ ಕುಂದುಕೊರತೆಗಳನ್ನು ವಿಚಾರಿಸಿ ಪರಿಹರಿಸುವ ಉದ್ದೇಶವನ್ನು ಹೊಂದಲಾಗಿದೆ ಎಂದು ಹೇಳಿದರು.
ಜಿಲ್ಲೆಯ ಕಡೂರು ತಾಲ್ಲೂಕು ವ್ಯಾಪ್ತಿಯಲ್ಲಿ 25 ಕೆರೆಗಳಿಗೆ ನೀರು ಪೂರೈಸುವ ಮದಗದ ಕೆರೆ ಮತ್ತು ಕಾಲುವೆಗಳ ಆಧುನೀಕರಣ ಕಾಮಗಾರಿಯನ್ನು 50 ಕೋಟಿ ವೆಚ್ಚದಲ್ಲಿ ಸಣ್ಣ ನೀರಾವರಿ ಇಲಾಖೆ ವತಿಯಿಂದ ಕೈಗೊಳ್ಳಲಾಗದೆ. ಅಜ್ಜಂಪುರ ತಾಲ್ಲಕು ಗಡಿರಂಗಾಪುರ ಮತ್ತು ಇತರೆ 19 ಕೆರೆಗಳಿಗೆ ನೀರು ತುಂಬಿಸುವ ಏತ ನೀರಾವರಿ ಯೋಜನೆಯ ಕಾಮಗಾರಿಯನ್ನು 48 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ ಭದ್ರಾ ಉಪ ಕಣಿವೆ ಯೋಜನೆಯಡಿ ಕಡೂರು ಮತ್ತು ಚಿಕ್ಕಮಗಳೂರು ತಾಲೂಕುಗಳ ಕೆರೆಗಳಿಗೆ ನೀರು ತುಂಬಿಸಲು 407 ಕೋಟಿ ವೆಚ್ಚದ ಕಾಮಗಾರಿಗಳಿಗೆ ಅನುಮೋದನೆ ನೀಡಲಾಗಿದ್ದು, ಟೆಂಡರ್ ಪ್ರಕ್ರಿಯೆ ಜಾರಿಯಲ್ಲಿದೆ. ಜಿಲ್ಲೆಯ ರಾಜ್ಯ ಹೆದ್ದಾರಿ, ಜಿಲ್ಲಾ ಮುಖ್ಯ ರಸ್ತೆಯ ಅಭಿವೃದ್ಧಿಗಾಗಿ ಲೋಕೋಪಯೋಗಿ ಇಲಾಖೆಯ ಒಟ್ಟು 89 ಕಾಮಗಾರಿಗಳಿಗೆ 150 ಕೋಟಿ ರೂ.ಗಳಿಗೆ ಅನುಮೋದನೆ ನೀಡಲಾಗಿದೆ. ಎನ್.ಆರ್.ಪುರ ಪಟ್ಟಣದ ರಸ್ತೆ ಅಭಿವೃದ್ಧಿಗಾಗಿ 60 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದರು.
ಶಾಸಕ ಎಚ್.ಡಿ. ತಮ್ಮಯ್ಯಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ, ಭದ್ರಾ ಅಚ್ಚುಕಟ್ಟು ಪ್ರಾಧಿಕಾರದ ಅಧ್ಯಕ್ಷ ಡಾ. ಅಂಶುಮಂತ್, ಜಿಲ್ಲಾ ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷ ಎಂ.ಸಿ. ಶಿವಾನಂದಸ್ವಾಮಿ, ಚಿಕ್ಕಮಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಯಾಜ್ ಅಹಮದ್, ಜಿಲ್ಲಾಧಿಕಾರಿ ಮೀನಾ ನಾಗರಾಜ್, ಜಿಲ್ಲಾ ರಕ್ಷಣಾಧಿಕಾರಿ ಡಾ. ವಿಕ್ರಂ ಅಮಟೆ, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಚ್.ಎಸ್. ಕೀರ್ತನಾ ಉಪಸ್ಥಿತರಿದ್ದರು.
ತರೀಕೆರೆ ಗೌರಿ ಗಣೇಶ ಮತ್ತು ಈದ್ ಮಿಲಾದ್ ಹಬ್ಬದ ಪ್ರಯುಕ್ತ ಶಾಂತಿ ಸಭೆ
ಈ ಸಭೆಯಲ್ಲಿ ಚಿಕ್ಕಮಗಳೂರು ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಶ್ರೀ
ಜಯಕುಮಾರ್ ರವರು ಮಾತನಾಡಿ ಪರಿಸರ ಸ್ನೇಹಿ ಗಣೇಶ ವಿಗ್ರಹಗಳನ್ನ ಪ್ರತಿಷ್ಠಾಪಿಸಬೇಕು ಹಾಗೂ ಹಬ್ಬದ ಸಂದರ್ಭದಲ್ಲಿ ಹೆಚ್ಚು ಸ್ವಯಂಸೇವಕರುಗಳನ್ನ ಬಳಸಿಕೊಂಡು ಪೊಲೀಸ್ ಇಲಾಖೆ ಹಾಗೂ ತಾಲೂಕು ಆಡಳಿತದವರು ನೀಡುವ ನಿರ್ದೇಶನಗಳನ್ನ ಪಾಲಿಸಿ ಶಾಂತಿಯುತವಾಗಿ ಆಚರಣೆ ಮಾಡಬೇಕು ಎಂದು ಗಣೇಶ ಸಮಿತಿ ಹಾಗೂ ಈದ್ ಮಿಲಾದ್ ಸಮಿತಿಯವರಿಗೆ ಸೂಚಿಸಿದರು.
ತರೀಕೆರೆ ಪೊಲೀಸ್ ಠಾಣೆಯ ಠಾಣಾಧಿಕಾರಿಗಳಾದ ರಾಮಚಂದ್ರ ನಾಯಕ ಇವರು ಎಲ್ಲರನ್ನೂ ಸ್ವಾಗತಿಸಿ ಸಮಿತಿಯವರ ಅನುಕೂಲಕ್ಕಾಗಿ ಸಿಂಗಲ್ ವಿಂಡೋ ಕಮಿಟಿ ಪ್ರಾರಂಭವಾಗಿದ್ದು ಅದರ ಸದುಪಯೋಗ ತೆಗೆದುಕೊಂಡು ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಅನುಮತಿ ಪತ್ರವನ್ನು ಕಡ್ಡಾಯವಾಗಿ ತೆಗೆದುಕೊಳ್ಳಬೇಕು ಹಾಗೂ ವಿಸರ್ಜನೆ ಸಮಯದಲ್ಲಿ ನುರಿತ ಈಜುಗಾರರು ಹಾಗೂ ಮುಳುಗು ತಜ್ಞರನ್ನ ನೇಮಿಸಿಕೊಳ್ಳಬೇಕು ಎಂದರು..
ಮುಖಂಡರುಗಳಾದ ಭೋಜರಾಜ ,ರೋಷನ್, ಆದಿಲ್, ಪ್ರದೀಪ್ ರವರು ಮಾತನಾಡಿ ಎಲ್ಲರೂ ಶಾಂತಿ ಸೌಹಾರ್ದತೆಯಿಂದ ಹಬ್ಬವನ್ನು ಆಚರಿಸಬೇಕೆಂದು ಹಾಗೂ ಸಾಮಾಜಿಕ ಜಾಲತಾಣದಲ್ಲಿ ಯಾವುದೇ ರೀತಿಯ ಕೋಮು ಪ್ರಚೋದನೆಯ ಪೋಸ್ಟ್ ಗಳಿಗೆ ಗಮನ ನೀಡದೆ ಪೊಲೀಸರೊಂದಿಗೆ ಸಹಕರಿಸೋಣ ಎಂದು ಹೇಳಿದರು.
ತರೀಕೆರೆ ಪೊಲೀಸ್ ಉಪಾ ದೀಕ್ಷಕರಾದ ಶ್ರೀ ಹಾಲಮೂರ್ತಿ ರಾವ್ ರವರು ಮಾತನಾಡಿ ಪ್ರಮುಖ ಗಣೇಶ ಸಮಿತಿಯವರು ಸಿಸಿಟಿವಿ ಅಳವಡಿಸಿಕೊಂಡು, ಸ್ವಯಂ ಸೇವಕರನ್ನ ಕಡ್ಡಾಯವಾಗಿ ನೇಮಿಸಿಕೊಳ್ಳಬೇಕೆಂದು ಸೂಚಿಸಿದರು. ಹಾಗೂ ಈದ್ ಮಿಲಾದ್ ಮೆರವಣಿಗೆಯಲ್ಲಿ ಸಂಚಾರಕ್ಕೆ ತೊಂದರೆಯಾಗದಂತೆ ಸ್ವಯಂಸೇವಕರನ್ನು ನಿಯೋಜಿಸಿಕೊಂಡು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ಹೇಳಿದರು.
ತರೀಕೆರೆಯ ಉಪವಿಭಾಗಾಧಿಕಾರಿಗಳಾದ ಶ್ರೀ ನಟೇಶ್ ರವರು ಸೋಶಿಯಲ್ ಮೀಡಿಯಾದಲ್ಲಿ ಬರುವಂತಹ ನೆಗೆಟಿವ್ ಅಂಶಗಳನ್ನು ವೈಭವೀಕರಿಸದೆ ಎಲ್ಲರೂ ಶಾಂತಿ ಸೌಹಾರ್ದತೆಯಿಂದ ಹಬ್ಬವನ್ನು ಆಚರಿಸಬೇಕು ಎಂದರು.
ಪುರಸಭೆಯ ಅಧ್ಯಕ್ಷರಾದ ವಸಂತ್ ಕುಮಾರ್ ರವರು ಹಬ್ಬವನ್ನು ಶಾಂತಿಯುತವಾಗಿ, ಅದ್ದೂರಿಯಾಗಿ ಆಚರಿಸಲು ಎಲ್ಲ ರೀತಿಯ ಸಹಾಯ ನೀಡುವುದಾಗಿ ಹೇಳಿದರು.
ಅಜ್ಜಂಪುರ ಸಿಪಿಐ ವೀರೇಂದ್ರರವರು ವಂದಿಸಿದರು. ತರೀಕೆರೆ ಠಾಣೆಯ ಸಿಬ್ಬಂದಿ ಕುಮಾರ್ ಅವರು ಕಾರ್ಯಕ್ರಮವನ್ನು ನಿರೂಪಿಸಿದರು.
ಕರ್ನಾಟಕ ಸರ್ಕಾರ, ಸರ್ಕಾರಿ ಆಯುರ್ವೇದ ಆಸ್ಪತ್ರೆ, ಆಶೀರ್ವಾದ ನರ್ಸಿಂಗ್ ಹೋಂ, ತರೀಕೆರೆ,ರೋಟರಿ ಕ್ಲಬ್, ಇನ್ನರ್ ವೀಲ್ ಕ್ಲಬ್ ತರೀಕೆರೆ, ಅರುಣೋದಯ ವಿದ್ಯಾ ಸಂಸ್ಥೆ,ತರೀಕೆರೆ ಇವರ ಸಹಯೋಗದೊಂದಿಗೆ ಅರುಣೋದಯ ವಿದ್ಯಾ ಸಂಸ್ಥೆಯ ಹೆಣ್ಣು ಮಕ್ಕಳಿಗೆ "*ಹದಿಹರೆಯದವರ ಸಮಸ್ಯೆಗಳು ಮತ್ತು ಆರೋಗ್ಯ*, *ಋತುಚಕ್ರ ಶುಚಿತ್ವ ನಿರ್ವಹಣೆ ಮತ್ತು ಸ್ವಚ್ಛತೆ*" ಬಗ್ಗೆ ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಈ ಕಾರ್ಯಕ್ರಮದಲ್ಲಿ ಅರುಣೋದಯ ವಿದ್ಯಾ ಸಂಸ್ಥೆಯ ಸಂಯೋಜಕಿ, ಶ್ರೀಮತಿ ಗೀತಾ ಶ್ರೀ ಹರ್ಷ, ಶ್ರೀಮತಿ ಗೌರಮ್ಮ ಮುಖ್ಯೋಪಾಧ್ಯಾಯರು, ಡಾ.ಎಸ್.ಗಿರೀಶ್, ಡಾ.ಸುಮನ ಕಿಶೋರ್, ಡಾ.ಕಿಶೋರ್ ಕುಮಾರ್ ಬಿ.ವಿ, ಪ್ರವೀಣ್ ನಹರ್ ಸಹಾಯಕ ಗವರ್ನರ್ ವಲಯ -7 , ರೋಟರಿ ಕ್ಲಬ್ ಅಧ್ಯಕ್ಷರಾದ ಬಿ.ಪಿ.ರವಿ ಕುಮಾರ್, ಕಾರ್ಯದರ್ಶಿಗಳಾದ ಪ್ರವೀಣ್ ಪಿ, ಇನ್ನರ್ ವೀಲ್ ಕ್ಲಬ್ ನ ಅಧ್ಯಕ್ಷರಾದ ಮೀರಾ ವಾಸು, ಮಂಜುಳಾ ಶರತ್, ಸಂಪಾದಕರಾದ ಚೈತ್ರ ಚಂದ್ರು, ಸದಸ್ಯನಿಯರಾದ ಲಕ್ಷ್ಮಿ ನಿತಿನ್, ಸಂತೋಷ್ ಪ್ರವೀಣ್ ನಹರ್, ಪ್ರತಿಭಾ ಶಂಕರ್, ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿಗಳಾದ ಅಮೃತ , ಮಧು, ಅರುಣೋದಯ ವಿದ್ಯಾ ಸಂಸ್ಥೆಯ ಶಿಕ್ಷಕರು, ಶಿಕ್ಷಕಿಯರು ಮಕ್ಕಳು ಭಾಗವಹಿಸಿದ್ದರು.
ಈ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾದ *ಡಾ.ಎಸ್.ಗಿರೀಶ್, ಮಕ್ಕಳ ತಜ್ಞರು, ಆಶೀರ್ವಾದ
ನರ್ಸಿಂಗ್ ಹೋಮ್*, ತರೀಕೆರೆ ಅವರು ಹದಿಹರೆಯದವರ ಸಮಸ್ಯೆಗಳು ಮತ್ತು ಆರೋಗ್ಯ*ದ ಬಗ್ಗೆ
ಮಾತನಾಡಿ ಸಾಮಾನ್ಯವಾಗಿ 10 ರಿಂದ 18 ವರ್ಷದೊಳಗೆ ಪ್ರಾರಂಭವಾಗುತ್ತದೆ. ಬಾಲ್ಯಾವಸ್ಥೆಯಿಂದ ಪ್ರೌಢಾವಸ್ಥೆಗೆ ಕ್ರಮೇಣ ಬದಲಾಗುವ ಪ್ರಕ್ರಿಯೆ ಇದು. ಪ್ರತಿ ವ್ಯಕ್ತಿಯಲ್ಲಿಯೂ ಈ ಬದಲಾವಣೆಗಳು ಬೇರೆ
ಬೇರೆ ಕಾಲದಲ್ಲಿ ಪ್ರಾರಂಭವಾಗುತ್ತವೆ. ದೈಹಿಕ ಬದಲಾವಣೆಗಳು, ನಡವಳಿಕೆಯಲ್ಲಿನ ಬದಲಾವಣೆಗಳು
ಮತ್ತು ಜೀವನ ಶೈಲಿಯಲ್ಲಿನ ಬದಲಾವಣೆಗಳು ಅವುಗಳಲ್ಲಿ ಪ್ರಮುಖವಾಗಿರುತ್ತದೆ, ಮತ್ತು ಹದಿಹರೆಯದವರನ್ನು ಕಾಡುವ ಆರೋಗ್ಯ ಸಮಸ್ಯೆ ಗಳಾದ ಮಾನಸಿಕ ಆರೋಗ್ಯ,ಮಾದಕ ವಸ್ತುಗಳ
ಬಳಕೆ, ಹಿಂಸಾತ್ಮಕ ನಡವಳಿಕೆ, ಮಕ್ಕಳ ಜೀವನಶೈಲಿ, ಪೌಷ್ಟಿಕಾಂಶ, ಲೈಂಗಿಕ ಮತ್ತು ಜನನಾಂಗ ಆರೋಗ್ಯ, ಮಕ್ಕಳಲ್ಲಿ ಲೈಂಗಿಕ ಕಿರುಕುಳವಾದಗ ಸಂಪರ್ಕಿಸುವ ವಿಧಾನ, ಗರ್ಭಕೊರಳಿನ, ಅಂಡಾಣು ಕ್ಯಾನ್ಸರ್ ತಡೆಗಟ್ಟುವುದು ಮತ್ತು ಲಸಿಕೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಮಕ್ಕಳಿಗೆ ನೀಡಿದರು.
ಇನ್ನೋರ್ವ ಸಂಪನ್ಮೂಲ ವ್ಯಕ್ತಿಯಾದ *ಡಾ.ಸುಮನ ಕಿಶೋರ್, ಆತ್ರೇಯ ಕ್ಲಿನಿಕ್*, ತರೀಕೆರೆ ಅವರು
ಋತುಚಕ್ರ ಶುಚಿತ್ವ ನಿರ್ವಹಣೆ ಮತ್ತು ಆರೋಗ್ಯ*ದ ಬಗ್ಗೆ ಮಾತನಾಡಿ ಪ್ರತಿ ಹೆಣ್ಣುಮಕ್ಕಳು ತಮ್ಮ ಜೀವಿತಾವಧಿಯಲ್ಲಿ ಮುಟ್ಟಿನ ದಿನಗಳನ್ನು ಎದುರಿಸುತ್ತಾರೆ. ಹೆಣ್ಣುಮಕ್ಕಳು ಪ್ರೌಢಾವಸ್ಥೆಗೆ ಕಾಲಿಡುವ ಸಂದರ್ಭದಲ್ಲಿ ಮೊದಲ ಬಾರಿಗೆ ಋತುಮತಿಯಾಗುತ್ತಾರೆ, ಋತುಸ್ರಾವ ಒಂದು ನೈಸರ್ಗಿಕ ಪ್ರಕ್ರಿಯೆ ಹಾಗೂ ಋತುಸ್ರಾವದ ಸಮಸ್ಯೆಗಳು, ಸ್ವಚ್ಛತೆ, ಮುಟ್ಟಿನ ಆರೋಗ್ಯದ ಮಹತ್ವ, ಮುಟ್ಟಿನ ಉತ್ಪನ್ನಗಳ ಸೂಕ್ತ ಬಳಕೆ, ಮುಟ್ಟಿನ ಸಮಯದಲ್ಲಿನ ಆಹಾರ ಕ್ರಮ, ಋತುಚಕ್ರ ಮತ್ತು ಜೀವನದ ಗುಣಮಟ್ಟ ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಹೆಣ್ಣು ಮಕ್ಕಳಿಗೆ ನೀಡಿದರು.
ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಅಭಿವೃದ್ಧಿ ಸೇವಾ ಸಂಘ ಚಿಕ್ಕಮಗಳೂರು ಘಟಕದವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆಯ
ಅಂಗವಾಗಿ ನಗರದ ಬಸ್ ನಿಲ್ದಾಣ ಹಾಗೂ ಬೀದಿ ಬದಿ ಮಲಗುವ ಬಡ ನಿರ್ಗತಿಕರಿಗೆ ಬ್ಲಾಂಕೆಟ್ ವಿತರಣೆ ಮಾಡಿಲಾಯಿತು .
ಈ ಸಂದರ್ಭದಲ್ಲಿ ಮಾತನಾಡಿದ ಸಂಘಟನೆಯ ರಾಜ್ಯ ಉಪಾಧ್ಯಕ್ಷ ಶಿಹಾನ್ ಪಾಶ ರವರು ಸಂಘಟನೆ ಕಳೆದ 5-6 ವರ್ಷಗಳಿಂದ ರಾಜ್ಯ
ಹಾಗೂ ಜಿಲ್ಲೆಯಲ್ಲಿ ವಿವಿಧ ರೀತಿಯ ಸಾಮಾಜಿಕ ಸೇವಾ ಕಾರ್ಯಗಳನ್ನು ಹಮ್ಮಿಕೊಂಡುಬಂದಿದ್ದು ಅದರ ಮುಂದುವರೆದ ಭಾಗವಾಗಿ
ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಸುಮಾರು 100 ಜನ ನಿರ್ಗತಿಕರಿಗೆ ಉಚಿತ ಬ್ಲಾಂಕೆಟ್ ವಿತರಣೆಯನ್ನು ಮಾಡಲಾಗುತ್ತಿದೆ ಎಂದು
ತಿಳಿಸಿದರು.
ಈ ಸಂದರ್ಭದಲ್ಲಿ ಸಂಘಟನೆಯ ರಾಜ್ಯ ಸಮಿತಿ ಸದಸ್ಯ ನಯಾಜ್, ಅಜ್ಮಾಲ್, ಅಕ್ರಮ್, ಅಧ್ಯಕ್ಷರು ಮೊಹಸೀನ್, ವಾಜೀದ್, ಫಾರೂಕ್
, ಆರಿಫ್, ಮೆಹರಾಜ್, ಸಿದ್ದಿಕ್, ಸಲ್ಮಾನ್, ವಾಜೀದ್ ಹುಸೇನ್, ಇರ್ಫಾನ್, ಫಾರ್ದಿನ್, ಫಾರ್ಹನ್ , ಎಹ್ತೆಷಮ್, ಇಬ್ರಾಹಿಂ ಮತ್ತಿತರರು ಉಪಸ್ಥಿತರಿದ್ದರು.
ಬ್ಲಾಕ್ ಕಾಂಗ್ರೆಸ್ ವತಿಯಿಂದ ಮೇಣದ ಬೆಳಕಿನ ಮೆರವಣಿಗೆ
ಓಟ್-ಚೋರ್ ; ಗದ್ದಿ ಛೋಡ್* ಕಾರ್ಯಕ್ರಮದ ಅನ್ವಯ ಪಟ್ಟಣದ ನೆಹರೂ-ಸರ್ಕಲ್'ನಲ್ಲಿ
ಬ್ಲಾಕ್-ಕಾಂಗ್ರೆಸ್ ವತಿಯಿಂದ ಮೇಣದ ಬೆಳಕಿನ ಮೆರವಣಿಗೆ
ಚಿಕ್ಕನಾಯಕನಹಳ್ಳಿ : ದಿ.14-08-2025'ರ ಗುರುವಾರ-ಸಂಜೆ 7.00 ಗಂಟೆಯಲ್ಲಿ ಪಕ್ಷದ ಎಲ್ಲ
ಮುಂಚೂಣಿ ಘಟಕ ಮತ್ತು ಪಕ್ಷದ ಸೆಲ್ ಹಾಗೂ ವಿಭಾಗಗಳೆಲ್ಲ ಸೇರಿಕೊಂಡು ಬ್ಲಾಕ್ ಕಾಂಗ್ರೆಸ್
ಸಮಿತಿ ಅಧ್ಯಕ್ಷರ ನೇತೃತ್ವದಲ್ಲಿ,
ಮತಕಳುವಿನ-ವಿರುದ್ಧ ಕ್ಯಾಂಡಲ್ ಲೈಟ್ ಮಾರ್ಚ್ (Candle light March) ಆಯೋಜಿಸುವಂತೆ,
ಮಾನ್ಯ ಕೆಪಿಸಿಸಿ ಅಧ್ಯಕ್ಷರಾದ ಶ್ರೀ ಡಿ.ಕೆ. ಶಿವಕುಮಾರ್ ರವರು ನೀಡಿದ್ದ ಸೂಚನೆ ಮೇರೆಗೆ,
ಚಿಕ್ಕನಾಯಕನಹಳ್ಳಿ ಬ್ಲಾಕ್-ಕಾಂಗ್ರೆಸ್ ವತಿಯಿಂದ ಪಟ್ಟಣದ ನೆಹರೂ-ಸರ್ಕಲ್'ನಲ್ಲಿ ಮತಕಳುವಿನ
-ವಿರುದ್ಧದ ಮೇಣದ ಬೆಳಕಿನ ಪ್ರತಿಭಟನಾತ್ಮಕ ಮೆರವಣಿಗೆ ನಡೆಯಿತು.
ಮೆರವಣಿಗೆಯಲ್ಲಿ,
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸಿ ಡಿ ಚಂದ್ರಶೇಖರ್ ಸೇರಿದಂತೆ ಪಕ್ಷದ ಹಿರಿ-ಕಿರಿಯ ನಾಯಕರನೇಕರು ಪಾಲ್ಗೊಂಡಿದ್ದರು.
ಬ್ರಹ್ಮಾ ಕುಮಾರೀಸ್ ಈಶ್ವರಿಯ ವಿಶ್ವ ವಿದ್ಯಾಲಯದ ಡಾ|| ಪ್ರಕಾಶ್ ಮಣಿ ದಾದಿಜೀ ಅವರ 18 ನೇ ವರ್ಷದ ಪುಣ್ಯ ಸ್ಮೃತಿ ದಿನವನ್ನು ವಿಶ್ವಭಂದುತ್ವ ದಿನವಾಗಿ ಆಚರಿಸಲಾಗುತ್ತಿದ್ದು ಅದರ ಅಂಗವಾಗಿ 1 ಲಕ್ಷ ಯುನಿಟ್ ರಕ್ತವನ್ನು ಸಮಾಜ ಸೇವೆಗೆ ಅರ್ಪಿಸುವ ಸಲುವಾಗಿ ರಕ್ತದಾನ ಕಾರ್ಯಕ್ರಮವನ್ನು ತಾಲೂಕು ಸಾರ್ವಜನಿಕ ಆಸ್ಪತ್ರೆ, ರಕ್ತ ನಿಧಿ ಕೇಂದ್ರ, ಮೆಗ್ಗಾನ್ ಭೋದನ ಆಸ್ಪತ್ರೆ, ಶಿವಮೊಗ್ಗ, ರೋಟರಿ ಸಂಸ್ಥೆ, ಲಯನ್ಸ್ ಸಂಸ್ಥೆ, ಮಮತ ಮಹಿಳಾ ಸಮಾಜ, ಸರ್ಕಾರಿ ಪಾಲಿಟೆಕ್ನಿಕ್ ಭಾವಿಕೆರೆ, ಇವರ ಸಹಯೋಗದಲ್ಲಿ, ದಿನಾಂಕ 22 ನೆ ಶುಕ್ರವಾರ, ಪ್ರಜಾಪಿತ ಬ್ರಹ್ಮ ಕುಮಾರಿ ಈಶ್ವರಿಯ ವಿಶ್ವ ವಿದ್ಯಾನಿಲಯ ವೆಂಕಟರಾಯನ ಬೀದಿ ಇಲ್ಲಿ ನಡೆಯಲಿದೆ ಎಂದು ಬ್ರಹ್ಮ ಕುಮಾರಿ ಸಂಸ್ಥೆ ಯ ಮುಖ್ಯಸ್ಥ ಕಲೈ ವಾಣಿ ತಿಳಿಸಿದರು. ರಕ್ತ ದಾನ ಮಾಡುವುದು ಅತ್ಯಂತ ಶ್ರೇಷ್ಟ ಕಾರ್ಯ ವಾಗಿದ್ದು, ಸಾರ್ವಜನಿಕ ರು ರಕ್ತ ದಾನ. ಮಾಡುವ ಮೂಲಕ ಅಗತ್ಯ ಇರುವ ವರಿಗೆ ನೇರವಾಗುವಂತೆ ಮನವಿ ಮಾಡಿದರು. ರಕ್ತ ದಾನದ ಮಹತ್ವ ಕುರಿತಂತೆ, ಬ್ಯಾನೆರ್ ಗಳನ್ನು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಅಳವಡಿಸುವ ಜೊತೆಗೆ ಕರ ಪತ್ರ ಗಳ ಮೂಲಕ ಮಾಹಿತಿ ನೀಡಲಾಗುವುದು ಎಂದರು.
. ಈ ಸಂಧರ್ಭ ದಲ್ಲಿ ತರೀಕೆರೆ ರೋಟರಿ ಕ್ಲಬ್ ಅಧ್ಯಕ್ಷರಾದ ರವಿಕುಮಾರ್ ಬಿ ಪಿ, ತರೀಕೆರೆ ಲಯನ್ಸ್ ಕ್ಲಬ್ ಅಧ್ಯಕ್ಷರಾದ ಟಿ ಎಮ್ ಹರೀಶ್, ಲಯನ್ಸ್ ಕ್ಲಬ್ ಖಜಾಂಚಿ ಟಿ ಎಮ್ ನವೀನ್ , ತರೀಕೆರೆ ಸೀನಿಯರ್ ಚೆಂಬರ್ ಅಧ್ಯಕ್ಷರಾದ ಆಶಾ ಬೊಸ್ಲೆ, ಮಮತಾ ಸಮಾಜದ ಅಧ್ಯಕ್ಷರಾದ ಮಂಜುಳಾ ವಿಜಯಕುಮಾರ್, ಕಾರ್ಯದರ್ಶಿ ರೋಹಿಣಿ ಎನ್ ಮೂರ್ತಿ , ಪಾಲಿಟೆಕ್ನಿಕ್ ಕಾಲೇಜು ಉಪನ್ಯಾಸಕ ಲಿಖಿತ್, ಹಾಗೂ ನ್ಯಾಯವಾದಿ ಜಿ. ಸುಬ್ರಹ್ಮಣ್ಯ, ಬ್ರಹ್ಮಾ ಕುಮಾರೀಸ್ ಈಶ್ವರಿಯ ವಿಶ್ವ ವಿದ್ಯಾಲಯದ ಸಹೋದರಿ ಬಿ ಕೆ ಕವಿತೆ ಹಾಜರಿದ್ದು ಸಲಹೆ ನೀಡಿದರು
ಭೂಮಿ -ವಸತಿ "ಹಕ್ಕು ಮಾನ್ಯ ಮಾಡುವ "ಸಾಮಾಜಿಕ ನ್ಯಾಯ"ಕ್ಕಾಗಿ ಆಗ್ರಹ..........................
.. ತರೀಕೆರೆ ಆಗಸ್ಟ್ 21 -- ದಿವಂಗತ ದೇವರಾಜ ಅರಸು ರವರು ಭೂ ಸುಧಾರಣಾ ಕಾಯ್ದೆಗೆ ತಿದ್ದುಪ
ಡಿಯ ಮೂಲಕ ಉಳುವವನೇ ಭೂಮಿಯ ಒಡೆಯ ಕಾಯ್ದೆಯನ್ನು ಜಾರಿಗೆ ತಂದರು. ಎಂದು ಭೂಮಿ
ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ರಾಜ್ಯಾಧ್ಯಕ್ಷರಾದ ಎಂ ಓಂಕಾರಪ್ಪನವರು
ಇಂದು ಪಟ್ಟಣದ ತಾಲೂಕು ಆಡಳಿತ ಕಚೇರಿಯ ಮುಂದಿನ ಡಾ. ಬಿಆರ್
ಭೂಮಿ -ವಸತಿ "ಹಕ್ಕು ಮಾನ್ಯ ಮಾಡುವ "ಸಾಮಾಜಿಕ ನ್ಯಾಯ"ಕ್ಕಾಗಿ ಆಗ್ರಹ..........................
.. ತರೀಕೆರೆ ಆಗಸ್ಟ್ 21 -- ದಿವಂಗತ ದೇವರಾಜ ಅರಸು ರವರು ಭೂ ಸುಧಾರಣಾ ಕಾಯ್ದೆಗೆ ತಿದ್ದುಪ
ಡಿಯ ಮೂಲಕ ಉಳುವವನೇ ಭೂಮಿಯ ಒಡೆಯ ಕಾಯ್ದೆಯನ್ನು ಜಾರಿಗೆ ತಂದರು. ಎಂದು ಭೂಮಿ
ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ರಾಜ್ಯಾಧ್ಯಕ್ಷರಾದ ಎಂ ಓಂಕಾರಪ್ಪನವರು
ಇಂದು ಪಟ್ಟಣದ ತಾಲೂಕು ಆಡಳಿತ ಕಚೇರಿಯ ಮುಂದಿನ ಡಾ. ಬಿಆರ್ ಅಂಬೇಡ್ಕರ್ ರವರ ಪುತ್ತಳಿಗೆ
ಮಾಲಾರ್ಪಣೆ ಮಾಡಿ ಮಾತನಾಡಿದರು. ಇಂದು ದಿವಂಗತ ಮಾಜಿ ಮುಖ್ಯಮಂತ್ರಿ ಡಿ ದೇವರಾಜ ಅರಸುರವರ 110ನೇ ಜನ್ಮದಿನದ ಪ್ರಯುಕ್ತ ವಿವಿಧ ದಲಿತ ಸಂಘಟನೆಗಳ ಮುಖಂಡರೊಂದಿಗೆ ಬಾಬಾ ಸಾಬ್ ಅಂಬೇಡ್ಕರ್ ಪುತ್ತಳಿಗೆ ಮಾಲಾರ್ಪಣೆ ಮಾಡಿ ಪುಷ್ಪಾರ್ಚನೆ ಮಾಡಿ ಅವರ ಪುತ್ಥಳಿಯ ಎದುರು ಪತ್ರಿಕಾಗೋಷ್ಠಿ ನಡೆಸಿದರು. ಬಗರ್ ಹುಕುಂ ಸಾಗುವಳಿದಾರರು ಅರ್ಜಿ ಸಲ್ಲಿಸಿದ್ದು ರಾಜ್ಯ ಸರ್ಕಾರದ ಲೆಕ್ಕದಲ್ಲಿ 33 ಲಕ್ಷಕ್ಕೂ ಹೆಚ್ಚು ಅರ್ಜಿಗಳು ಇದ್ದು ಇದರಲ್ಲಿ ಶೇ% 90ರಷ್ಟು ಅರ್ಜಿಗಳನ್ನು ತಿರಸ್ಕರಿಸಿ ವಿಲೇವಾರಿ ಮಾಡಿದೆ. ಅರಣ್ಯ ಹಕ್ಕು ಕಾಯ್ದೆಯನ್ನು ಜಾರಿ ಮಾಡದೆ ಅರಣ್ಯ ಅಧಿಕಾರಿಗಳು ಪರಿಸರದ ಹೆಸರಿನಲ್ಲಿ ಜನರಿಗೆ ವಂಚನೆ ಮಾಡುತ್ತಿದ್ದು ಆದಿವಾಸಿ ಇನ್ನಿತರೆ ಜನ ಸಮುದಾಯಗಳಿಗೆ ಸಂವಿಧಾನ ಬದ್ಧ ಹಕ್ಕನ್ನು ನಿರಾಕರಿಸಲಾಗುತ್ತಿದೆ ಕಾನೂನು ಬದ್ಧವಾಗಿರುವ ಅರಣ್ಯ ಹಕ್ಕು ಕಾಯ್ದೆಯನ್ನು ನಿರ್ಜೀವ ಗೊಳಿಸಲಾಗುತ್ತಿದೆ ಎಂದು ಆರೋಪಿಸಿದರು. ಉಳುವವನೇ ಭೂ ಒಡೆಯ ನೀತಿಯನ್ನು ಜಾರಿ ಮಾಡದಂತೆ ಸಾಮಾಜಿಕ ನ್ಯಾಯವನ್ನು ಪ್ರತಿಪಾದಿಸುವ ಸರ್ಕಾರವಾಗಿ ಸಾಗುವಳಿ ಮಾಡುತ್ತಾ ಅರ್ಜಿ ಸಲ್ಲಿಸಿರುವರಿಗೆ ಭೂ ಮಂಜೂರಾತಿ ನೀಡಲು ಒನ್ ಟೈಮ್ ಸೆಟ್ಲ್ಮೆಂಟ್ ಜಾರಿ ಮಾಡುವ ಮೂಲಕ ಬಡವರಿಗೆ ನ್ಯಾಯ ದೊರಕಿಸಬೇಕೆಂದು ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಆಗ್ರಹಿಸುತ್ತಿದೆ ಎಂದು ಹೇಳಿದರು. ಮಹಾತ್ಮ ಪ್ರೊ ಬಿ ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕರಾದ ತರೀಕೆರೆ ಎನ್ ವೆಂಕಟೇಶ್, ಜಿಲ್ಲಾ ಸಂಘಟನಾ ಸಂಚಾಲಕರಾದ ಎಚ್ ವಿ ಬಾಲರಾಜ್, ತಾಲೂಕು ಸಂಚಾಲಕರಾದ ರಾಜಪ್ಪ, ಕುಮಾರಪ್ಪ, ಮಂಜಪ್ಪ, ಸಿದ್ದರಾಮಪ್ಪ, ಶಿವರಾಜ್, ಪರಮೇಶ್ ಹಾಗೂ ಮುಂತಾದವರು ಉಪಸ್ಥಿತರಿದ್ದರು.
ಹಗ್ಗದಿಂದ ಕುತ್ತಿಗೆಗೆ ಬಿಗಿದು ಕೊಲೆ ಮಾಡಿ ಪೆಟ್ರೋಲ್ ನಿಂದ ಸುಟ್ಟು ತಲೆಮರೆಸಿಕೊಂಡಿದ್ದ 03 ಜನ ಕೊಲೆ ಆರೋಪಿಗಳ ಬಂಧನ
ದಿನಾಂಕ:02-06-2025 ರಂದು ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯ ಕಂಸಾಗರ ಗೇಟ್ ಬಳಿ ಯಾವುದೋ ಅನಾಮಧೇಯ ವ್ಯಕ್ತಿಯ ದೇಹವು ಸುಟ್ಟ ಸ್ಥಿತಿಯಲ್ಲಿರುವುದಾಗಿ ಮಾಹಿತಿ ಬಂದ ಮೇರೆಗೆ ಕೂಡಲೇ ಸ್ಥಳಕ್ಕೆ ತೆರಳಿ ಪರಿಶೀಲಿಸಲಾಗಿ ಸದರಿ ಮೃತ ವ್ಯಕ್ತಿಯನ್ನು ಯಾರೋ ಕೊಲೆ ಮಾಡಿ ಸೌದೆ ಮತ್ತು ಪೆಟ್ರೋಲ್ ಬಳಿಸಿ ಸುಟ್
ಹಗ್ಗದಿಂದ ಕುತ್ತಿಗೆಗೆ ಬಿಗಿದು ಕೊಲೆ ಮಾಡಿ ಪೆಟ್ರೋಲ್ ನಿಂದ ಸುಟ್ಟು ತಲೆಮರೆಸಿಕೊಂಡಿದ್ದ 03 ಜನ ಕೊಲೆ ಆರೋಪಿಗಳ ಬಂಧನ
ದಿನಾಂಕ:02-06-2025 ರಂದು ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯ ಕಂಸಾಗರ ಗೇಟ್ ಬಳಿ ಯಾವುದೋ ಅನಾಮಧೇಯ ವ್ಯಕ್ತಿಯ ದೇಹವು ಸುಟ್ಟ ಸ್ಥಿತಿಯಲ್ಲಿರುವುದಾಗಿ ಮಾಹಿತಿ ಬಂದ ಮೇರೆಗೆ ಕೂಡಲೇ ಸ್ಥಳಕ್ಕೆ ತೆರಳಿ ಪರಿಶೀಲಿಸಲಾಗಿ ಸದರಿ ಮೃತ ವ್ಯಕ್ತಿಯನ್ನು ಯಾರೋ ಕೊಲೆ ಮಾಡಿ ಸೌದೆ ಮತ್ತು ಪೆಟ್ರೋಲ್ ಬಳಿಸಿ ಸುಟ್ಟು ಹಾಕಿ ಸಾಕ್ಷ್ಯ ನಾಶಕ್ಕೆ ಪ್ರಯತ್ನಿಸಿರುವುದು ಕಂಡು ಬಂದ ಮೇರೆಗೆ ಫಿರ್ಯಾದುದಾರರಾದ ಶ್ರೀ ಹೆಚ್ ಶ್ರೀನಿವಾಸ್ ರವರು ನೀಡಿದ ದೂರನ್ನು ಸ್ವೀಕರಿಸಿ ಕಡೂರು ಪೊಲೀಸ್ ಠಾಣೆಯಲ್ಲಿ ಠಾಣಾ ಮೊ.ನಂ 159/2025 ಕಲಂ 103(1), 238 ಬಿ ಎನ್ ಎಸ್ ರೀತ್ಯಾ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತದೆ.
ದಿನಾಂಕ:02-06-2025 ರಂದು ಕಡೂರು ಟೌನ್ ನ ಕೋಟೆ ವಾಸಿ ಶ್ರೀಮತಿ ಮೀನಾಕ್ಷಮ್ಮ ರವರು ಠಾಣೆಗೆ ಹಾಜರಾಗಿ ತನ್ನ ಗಂಡ ಸುಬ್ರಹ್ಮಣ್ಯ ರವರು ದಿನಾಂಕ:31-05-2025 ರಂದು ಕಾಣಿಯಾಗಿರುವುದಾಗಿ ತಿಳಿಸಿ ಕಡೂರು ಠಾಣಾ ಮೊ.ನಂ. 157/2025 ಕಲಂ ಮನುಷ್ಯ ಕಾಣಿ ರೀತ್ಯಾ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತದೆ.
ಈ ಮೇಲ್ಕಂಡ ಎರಡೂ ಪ್ರಕರಣಗಳಿಗೆ ಸಂಬಂಧಪಟ್ಟಂತೆ, ಡಾ. ಶ್ರೀ ವಿಕಂ ಅಮಟೆ, ಮಾನ್ಯ ಪೊಲೀಸ್ ಅಧೀಕ್ಷಕರು, ಚಿಕ್ಕಮಗಳೂರು ಜಿಲ್ಲೆ, ಶ್ರೀ ಜಯಕುಮಾರ್, ಮಾನ್ಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ಚಿಕ್ಕಮಗಳೂರು ಜಿಲ್ಲೆ, ಶ್ರೀ ಹಾಲಮೂರ್ತಿ ರಾವ್, ಮಾನ್ಯ ಪೊಲೀಸ್ ಉಪಾಧೀಕ್ಷಕರು, ತರೀಕೆರೆ ಉಪ ವಿಭಾಗ ರವರುಗಳ ಮಾರ್ಗದರ್ಶನದಲ್ಲಿ ಶ್ರೀ ರಫೀಕ್.ಎಂ. ಪೊಲೀಸ್ ವೃತ್ತ ನಿರೀಕ್ಷಕರು, ಕಡೂರು ವೃತ್ತ ರವರ ನೇತೃತ್ವದಲ್ಲಿ ಕೊಲೆಯಾದ ವ್ಯಕ್ತಿಯ ಗುರುತು ಪತ್ತೆ ಹಾಗೂ ಕೊಲೆಮಾಡಿದ ಆರೋಪಿಗಳ ಪತ್ತೆಗಾಗಿ ಹಾಗೂ ಕಾಣೆಯಾದ ಸುಬ್ರಹ್ಮಣ್ಯ ರವರ ಪತ್ತೆ ಸಂಬಂಧ ಕಡೂರು ಪೊಲೀಸ್ ಠಾಣಾ ಪಿ ಎಸ್ ಐ ರವರುಗಳು ಹಾಗೂ ಸಿಬ್ಬಂದಿಗಳನ್ನೊಳಗೊಂಡ 02 ಪ್ರತ್ಯೇಕ ತಂಡಗಳನ್ನು ನೇಮಕ ಮಾಡಿರುತ್ತಾರೆ. ನಂತರ ಎರಡೂ ಪ್ರಕರಣಗಳಿಗೆ ಸಂಬಂಧಿಸಿದಂತೆ ಪತ್ತೆ ತಂಡಗಳು ತಾಂತ್ರಿಕ ಹಾಗೂ ವಿವಿಧ ಆಯಾಮಾಗಳಿಂದ ಪರಿಶೀಲಿಸಲಾಗಿ ಮನುಷ್ಯ ಕಾಣಿ ಪ್ರಕರಣದಲ್ಲಿ ಕಾಣೆಯಾದ ವ್ಯಕ್ತಿ ಮತ್ತು ಕೊಲೆಯಾದ ವ್ಯಕ್ತಿಯು ಒಬ್ಬನೆ ಎಂದು ಖಚಿತಪಡಿಸಿಕೊಂಡು ಪ್ರಕರಣದಲ್ಲಿ ಅನುಮಾನಾಸ್ಪದ ವ್ಯಕ್ತಿಗಳಾದ 1) ಪ್ರದೀಪ್ ಆಚಾರ್ ಜನ್ ಮಲ್ಲೇಶ್ ಆಚಾರ್, 33 ವರ್ಷ, ಕಾರ್ಪೆಂಟರ್ ಕೆಲಸ ವಾಸ ಪ್ಲೇಗಿನಮ್ಮ ದೇವಸ್ಥಾನದ ಹತ್ತಿರ ಕಡೂರು ಟೌನ್, 2) ಸಿದ್ದೇಶ್ ಬಿನ್ ನಂಜುಂಡಪ್ಪ, 35 ವರ್ಷ, ವಿಭೂತಿ ವ್ಯಾಪಾರ ಕೆಲಸ ವಾಸ ಕೋಟೆ ಕಡೂರು ಟೌನ್, 3) ವಿಶ್ವಾಸ್ ಬಿನ್ ಮಂಜುನಾಥ್, 18 ವರ್ಷ, ಕೂಲಿ ಕೆಲಸ ವಾಸ ಫಾರೆಸ್ಟ್ ಆಫೀಸ್ ಹತ್ತಿರ ಕಡೂರು ಟೌನ್ ರವರುಗಳನ್ನು ವಶಕ್ಕೆ ಪಡೆದು ಕೂಲಂಕುಶವಾಗಿ ವಿಚಾರಣೆಗೊಳಪಡಿಸಿದಾಗ ಪ್ರಕರಣದ ಮೊದಲನೇ ಆರೋಪಿಗೂ ಹಾಗೂ ಕೊಲೆಯಾದ ವ್ಯಕ್ತಿಯ ಹೆಂಡತಿಗೂ ಅಕ್ರಮ ಸಂಬಂಧವಿದ್ದು, ಈ ವಿಚಾರದಲ್ಲಿ ತಿಳಿದ ಕೊಲೆಯಾದ ವ್ಯಕ್ತಿಯು ಅಕ್ರಮ ಸಂಬಂಧಕ್ಕೆ ಅಡ್ಡಿಪಡಿಸುತ್ತಿದ್ದ ಹಿನ್ನೆಲೆಯಲ್ಲಿ ಮೊದಲನೇ ಆರೋಪಿಯು ಎರಡು ಮತ್ತು ಮೂರನೇ ಆರೋಪಿಗಳಿಗೆ ಹಣದ ಆಮೀಷವನ್ನು ಒಡ್ಡಿ ಅವರುಗಳ ಸಹಾಯ ಪಡೆದು ದಿನಾಂಕ:31-05-2025 ರಂದು ಕಂಸಾಗರ ಗೇಟ್ ಬಳಿ ಎರಡನೇ ಆರೋಪಿಯ ಮಾರುತಿ ಓಮಿನಿ ಕಾರಿನಲ್ಲಿ ಸುಬ್ರಹ್ಮಣ್ಯ ರವರನ್ನು ಹಗ್ಗದಿಂದ ಕುತ್ತಿಗೆಗೆ ಬಿಗಿದು ಕೊಲೆ ಮಾಡಿ ನಂತರ ಶವವನ್ನು ಸೌದೆ ಮತ್ತು ಪೆಟ್ರೋಲ್ ಬಳಿಸಿ ಸುಟ್ಟುಹಾಕಿರುವುದಾಗಿ ತನಿಖೆಯಿಂದ ತಿಳಿದುಬಂದಿರುತ್ತದೆ. ಸದರಿ ಪ್ರಕರಣದಲ್ಲಿ ಒಟ್ಟು 03 ಜನ ಆರೋಪಿಗಳನ್ನು ದಸ್ತಗಿರಿ ಮಾಡಿ ಅವರುಗಳಿಂದ ಕೃತ್ಯಕ್ಕೆ ಬಳಸಿದ ಒಂದು ಮಾರುತಿ ಓಮಿನಿ ಕಾರನ್ನು ವಶಕ್ಕೆ ಪಡೆಯಲಾಗಿರುತ್ತದೆ. ನಂತರ ಆರೋಪಿಗಳನ್ನು ಘನ ನ್ಯಾಯಾಲಯದ ಆದೇಶದ ಮೇರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿರುತ್ತದೆ ಹಾಗೂ ಪ್ರಕರಣದ ತನಿಖೆ ಮುಂದುವರೆದಿರುತ್ತದೆ.
ಆರೋಪಿಯ ಪತ್ತೆ ತಂಡ & ತನಿಖಾ ತಂಡದಲ್ಲಿ ಶ್ರೀ ರಫೀಕ್.ಎಂ. ಪೊಲೀಸ್ ವೃತ್ತ ನಿರೀಕ್ಷಕರು, ಕಡೂರು ವೃತ್ತ ರವರ ನೇತೃತ್ವದಲ್ಲಿ ಪಿಎಸ್ಐ ರವರುಗಳಾದ ಶ್ರೀ ಪವನ್ ಕುಮಾರ್ ಸಿ.ಸಿ. ಶ್ರೀ ಧನಂಜಯ.ಡಿ.ಹೆಚ್, ಶ್ರೀಮತಿ ಲೀಲಾವತಿ, ಎ.ಎಸ್.ಐ ಶ್ರೀ ವೇದಮೂರ್ತಿ ಹಾಗೂ ಸಿಬ್ಬಂದಿಗಳಾದ ಶ್ರೀ ಮಧು ಕುಮಾರ್, ಹರೀಶ ಬಿ.ಸಿ. ಸ್ವಾಮಿ ಎ.ಓ, ಮಹಮ್ಮದ್ ರಿಯಾಜ್, ಧನಪಾಲ ನಾಯ್ಕ, ಪರಮೇಶ್ವರನಾಯ್ಕ ಜಿ.ಎಸ್. ಈಶ್ವರಪ್ಪ, ಬೀರೇಶ್ ಜಿ.ಕೆ. ಮಂಜುನಾಥ್ ಕೆ.ಎಸ್. ಬೀರೂರು ಪೊಲೀಸ್ ಠಾಣಾ ಅವರಾಧ ವಿಭಾಗದ ಸಿಬ್ಬಂಧಿಯವರಾದ ಹೇಮಂತ್ ಕುಮಾರ್ ಡಿ.ವಿ. ರಾಜಪ್ಪ ಬಿ.ಹೆಚ್ ಹಾಗೂ ಪ್ರಕರಣದ ತನಿಖಾ ತಂಡದಲ್ಲಿ ಶ್ರೀ ವಸಂತ್, ನಜೀರ್, ಕುಚೇಲ, ಮಂಜುನಾಥ್, ನವೀನ್ ಎ.ಆರ್ ಮತ್ತು ಜಿಲ್ಲಾ ಪೊಲೀಸ್ ಕಛೇರಿ ತಾಂತ್ರಿಕ ವಿಭಾಗದ ಅಬ್ದುಲ್ ರಬ್ಬಾನಿ, ನಯಾಜ್ ಅಂಜುಂ ರವರುಗಳು ಕಾರ್ಯ ನಿರ್ವಹಿಸಿದ್ದು, ಉತ್ತಮ ಕರ್ತವ್ಯ ನಿರ್ವಹಿಸಿದ ಅಧಿಕಾರಿ/ಸಿಬ್ಬಂದಿಗಳಿಗೆ ಪೊಲೀಸ್ ಅಧೀಕ್ಷಕರು, ಚಿಕ್ಕಮಗಳೂರು ಜಿಲ್ಲೆ ರವರು ಶ್ಲಾಘಿಸಿ, ಬಹುಮಾನವನ್ನು ಘೋಷಿಸಿರುತ್ತಾರೆ.
ವಿಶ್ವ ಪರಿಸರ ದಿನದ ಅಂಗವಾಗಿ ಈ ದಿನ ದಿನಾಂಕಃ 05-06-2025 ರಂದು ಬೆಳಗ್ಗೆ ಶಿವಮೊಗ್ಗ ಜಿಲ್ಲಾ ಪೊಲೀಸ್ ಕಛೇರಿ ಆವರಣದಲ್ಲಿ ಶ್ರೀ ಮಿಥುನ್ ಕುಮಾರ್ ಜಿ.ಕೆ ಐಪಿಎಸ್, ಮಾನ್ಯ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ಮತ್ತು ಶ್ರೀ ಅನಿಲ್ ಕುಮಾರ್ ಭೂಮರಡ್ಡಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರು - 1 ಶಿವಮೊಗ್ಗ ಜಿಲ್ಲೆ ಮತ್ತು ಎ. ಜಿ.ಕಾರ್ಯಪ್ಪ* ಹೆಚ್ಚುವರಿ ಪೊಲೀಸ್ ಅಧೀಕ್ಷಕರು - 2 ಶಿವಮೊಗ್ಗ ಜಿಲ್ಲೆ ರವರಿ
ವಿಶ್ವ ಪರಿಸರ ದಿನದ ಅಂಗವಾಗಿ ಈ ದಿನ ದಿನಾಂಕಃ 05-06-2025 ರಂದು ಬೆಳಗ್ಗೆ ಶಿವಮೊಗ್ಗ ಜಿಲ್ಲಾ ಪೊಲೀಸ್ ಕಛೇರಿ ಆವರಣದಲ್ಲಿ ಶ್ರೀ ಮಿಥುನ್ ಕುಮಾರ್ ಜಿ.ಕೆ ಐಪಿಎಸ್, ಮಾನ್ಯ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ಮತ್ತು ಶ್ರೀ ಅನಿಲ್ ಕುಮಾರ್ ಭೂಮರಡ್ಡಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರು - 1 ಶಿವಮೊಗ್ಗ ಜಿಲ್ಲೆ ಮತ್ತು ಎ. ಜಿ.ಕಾರ್ಯಪ್ಪ* ಹೆಚ್ಚುವರಿ ಪೊಲೀಸ್ ಅಧೀಕ್ಷಕರು - 2 ಶಿವಮೊಗ್ಗ ಜಿಲ್ಲೆ ರವರಿಂದ ಗಿಡವನ್ನು ನೆಡುವ ಮುಖಾಂತರ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಶ್ರೀ ದಿಲೀಪ್ ಕುಮಾರ್* ಪೊಲೀಸ್ ಉಪಾಧೀಕ್ಷಕರು, ಡಿಎಆರ್ ಶಿವಮೊಗ್ಗ ಮತ್ತು ಶಿವಮೊಗ್ಗ ನಗರದ ಪೊಲೀಸ್ ನಿರೀಕ್ಷಕರು, ಪೊಲೀಸ್ ಉಪ ನಿರೀಕ್ಷಕರು, ಅಧಿಕಾರಿ ಸಿಬ್ಬಂದಿಗಳು ಉಪಸ್ಥಿತರಿದ್ದರು. ಇದೇ ರೀತಿ ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆ, ವೃತ್ತ ಕಛೇರಿ ಮತ್ತು ಉಪ ವಿಭಾಗ ಕಛೇರಿಗಳಲ್ಲಿ, ಆಯಾ *ಡಿಎಸ್.ಪಿ, ಸಿಪಿಐ/ಪಿಐ, ಪಿಎಸ್ಐ* ರವರುಗಳು ಮತ್ತು ಪೊಲೀಸ್ ಸಿಬ್ಬಂಧಿಗಳು ಠಾಣಾ ಮತ್ತು ಕಛೇರಿಗಳ ಆವರಣದಲ್ಲಿ *ಗಿಡಗಳನ್ನು ನಡೆವ ಮುಖಾಂತರ ವಿಶ್ವ ಪರಿಸರ ದಿನವನ್ನು* ಆಚರಿಸಿರುತ್ತಾರೆ.*ಹಸಿರೇ ನಮ್ಮೆಲ್ಲರ ಉಸಿರು, ಕಾಡು ಬೆಳಸಿ ನಾಡು ಉಳಿಸುವ ಸಂಕಲ್ಪ ಮಾಡೋಣ*
ಸಚಿವರಾದ ಶ್ರೀ ಮಧುಬಂಗಾರಪ್ಪ ನವರ ಪಿ.ಎ. ಅಂತ ಹೇಳಿಕೊಂಡು ಮೋಸ ಮಾಡುತಿದ್ದ ಆರೋಪಿ ಬಂಧನ.
ಕರ್ನಾಟಕ ರಾಜ್ಯ ಶಿಕ್ಷಣ ಸಚಿವರು ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಮಧುಬಂಗಾರಪ್ಪ
ನವರ ಪಿ.ಎ. ಅಂತ ಹೇಳಿಕೊಂಡು ಮೋಸ ಮಾಡುತಿದ್ದ ಆರೋಪಿಯನ್ನು ಬಂಧಿಸಲಾಗಿದೆ
ಗಿರೀಶ ಆರ್ ಜಿಲ್ಲಾ ಯುವ ಕಾಂಗೇಸ್ ಅಧ್ಯಕ್ಷರು (ಉತ್ತರ ಬ್ಲಾಕ್) ವಾಸ ಬೊಮ್ಮನಕಟ್ಟೆ ಜಿ, ಬ್ಯಾಕ್ ಶಿವಮೊಗ್ಗ ರವರು ದಿನಾಂಕ:22/08/2025 ರಂದು ಈಗ್ಗ
ಸಚಿವರಾದ ಶ್ರೀ ಮಧುಬಂಗಾರಪ್ಪ ನವರ ಪಿ.ಎ. ಅಂತ ಹೇಳಿಕೊಂಡು ಮೋಸ ಮಾಡುತಿದ್ದ ಆರೋಪಿ ಬಂಧನ.
ಕರ್ನಾಟಕ ರಾಜ್ಯ ಶಿಕ್ಷಣ ಸಚಿವರು ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಮಧುಬಂಗಾರಪ್ಪ
ನವರ ಪಿ.ಎ. ಅಂತ ಹೇಳಿಕೊಂಡು ಮೋಸ ಮಾಡುತಿದ್ದ ಆರೋಪಿಯನ್ನು ಬಂಧಿಸಲಾಗಿದೆ
ಗಿರೀಶ ಆರ್ ಜಿಲ್ಲಾ ಯುವ ಕಾಂಗೇಸ್ ಅಧ್ಯಕ್ಷರು (ಉತ್ತರ ಬ್ಲಾಕ್) ವಾಸ ಬೊಮ್ಮನಕಟ್ಟೆ ಜಿ, ಬ್ಯಾಕ್ ಶಿವಮೊಗ್ಗ ರವರು ದಿನಾಂಕ:22/08/2025 ರಂದು ಈಗ್ಗೆ 06 ತಿಂಗಳಿಂದ ರಘುನಾಥ ಎಂಬ ಒಬ್ಬ ವ್ಯಕ್ತಿ ಕರ್ನಾಟಕ ರಾಜ್ಯ ಶಿಕ್ಷಣ ಸಚಿವರು ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಮಧುಬಂಗಾರಪ್ಪ ನವರ ಪಿ.ಎ ಅಂತ ಹೇಳಿಕೊಂಡು ಸರ್ಕಾರಿ ಕೆಲಸ ಕೊಡಿಸುವುದಾಗಿ ಹಾಗೂ ವರ್ಗಾವಣೆ ಮಾಡಿಕೊಡುವುದಾಗಿ ಹೇಳಿಕೊಂಡು ಜನರಿಗೆ ಮೋಸ ಮಾಡುತಿದ್ದಾನೆಂದು ನೀಡಿದ ದೂರಿನ ಮೇರೆಗೆ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿತ್ತದೆ.
ನಂತರ ಸದರಿ ಪ್ರಕರಣದಲ್ಲಿ ಆರೋಪಿ ಪತ್ತೆ ಮಾಡುವ ಬಗ್ಗೆ ಶಿವಮೊಗ್ಗ ಜಿಲ್ಲಾ, ಪೊಲೀಸ್ ಅಧೀಕ್ಷಕರಾದ ಶ್ರೀ. ಮಿಥುನ್ ಕುಮಾರ್ ಜಿ. ಕೆ. ಐ.ಪಿ.ಎಸ್. ರವರ ನಿರ್ದೇಶನದಂತೆ ಹೆಚ್ಚುವರಿ ಪೊಲೀಸ್ ಅಧೀಕ್ಷಕರು - 1 ಶ್ರೀ ಕಾರಿಯಪ್ಪ ಎ. ಜಿ. ಮತ್ತು ಹೆಚ್ಚುವರಿ ಪೊಲೀಸ್ ಅಧೀಕ್ಷಕರು - 2 ಶ್ರೀ ಎಸ್ ರಮೇಶ್ ಕುಮಾರ್ ಮತ್ತು ಶಿವಮೊಗ್ಗ ಉಪವಿಭಾಗ-ಬಿ ಡಿ.ವೈಎಸ್.ಪಿ. ರವರಾದ ಶ್ರೀ. ಸಂಜೀವ್ ಕುಮಾರ್ ರವರ ಮಾರ್ಗದರ್ಶನದಲ್ಲಿ ಜಯನಗರ ಪೊಲೀಸ್ ಠಾಣೆ ಇನ್ ಸ್ಪೆಕ್ಟರ್ ರವರಾದ ಶ್ರೀ. ಸಿದ್ದೇಗೌಡ ಹೆಚ್.ಎಮ್, ಪಿ.ಎಸ್.ಐ-2 ರವರಾದ ಶ್ರೀಮತಿ ಕೋಮಲ ಬಿ.ಆರ್ ಎ,ಎಸ್,ಐ ಕರಿಬಸಪ್ಪ ಸಿ,ಆರ್ ರವರು ಹಾಗೂ ಸಿಬ್ಬಂದಿಯವರಾದ ಹೆಚ್.ಸಿ.-352 ನಾಗರಾಜ,ಕೆ, ಸಿ.ಪಿ.ಸಿ-1073 ವಸಂತ.ಜಿ, ಸಿ.ಪಿ.ಸಿ-1719 ಸಚಿನ್ ಹೆಚ್.ಎಸ್, ಸಿಪಿಸಿ-1277 ವಿರೇಶ್ ವಿ.ಎಮ್ ರವರನ್ನು ಒಳಗೊಂಡ ತಂಡವನ್ನು ರಚಿಸಿರುತ್ತದೆ.
ಸದರಿ ತಂಡವು ದಿನಾಂಕಃ 22/08/2025 ರಂದು ಸದರಿ ಪ್ರಕರಣದ ಆರೋಪಿತರಾದ ರಘುನಾಥ ಎಸ್.ವಿ.ಎನ್, 36 ವರ್ಷ, ರಾಮಕೃಷ್ಣ ನಗರ ಮೈಸೂರು ಇವನನ್ನು ದಸ್ತಗಿರಿ ಮಾಡಿ, ಈ ದಿನ ದಿನಾಂಕ 23/08/2025 ರಂದು ಮಾನ ನ್ಯಾಯಾಲಯಕ್ಕೆ ಹಾರುಪಡಿಸಿರುತ್ತದೆ.
ಸೊರಬ: ಹಿಂದೂಗಳ ಪವಿತ್ರ ಕ್ಷೇತ್ರ ಧರ್ಮಸ್ಥಳದ ಘನತೆಗೆ ಧಕ್ಕೆ ಮತ್ತು ಕಳಂಕ ತರುತ್ತಿರುವವರನ್ನು ತಕ್ಷಣ ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಬಿಜೆಪಿ ಸೊರಬ ಮಂಡಲ ವತಿಯಿಂದ ಹಿಂದೂಪರ ಸಂಘಟನೆಗಳು ಹಾಗೂ ಭಕ್ತಾದಿಗಳ ನೇತೃತ್ವದಲ್ಲಿ ಶಿವಮೊಗ್ಗ ಜಿಲ್ಲೆ ಸೊರಬ ಪಟ್ಟಣದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.
ಸೊರಬ ಪಟ್ಟಣದ ಶ್ರೀ ರಂಗನಾಥ ಸ್ವಾಮಿ ದೇವಸ್ಥಾನದಿಂದ ಮೆರವಣಿಗೆಯಲ್ಲಿ ತೆರಳಿ ಖಾಸಗ
ಸೊರಬ: ಹಿಂದೂಗಳ ಪವಿತ್ರ ಕ್ಷೇತ್ರ ಧರ್ಮಸ್ಥಳದ ಘನತೆಗೆ ಧಕ್ಕೆ ಮತ್ತು ಕಳಂಕ ತರುತ್ತಿರುವವರನ್ನು ತಕ್ಷಣ ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಬಿಜೆಪಿ ಸೊರಬ ಮಂಡಲ ವತಿಯಿಂದ ಹಿಂದೂಪರ ಸಂಘಟನೆಗಳು ಹಾಗೂ ಭಕ್ತಾದಿಗಳ ನೇತೃತ್ವದಲ್ಲಿ ಶಿವಮೊಗ್ಗ ಜಿಲ್ಲೆ ಸೊರಬ ಪಟ್ಟಣದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.
ಸೊರಬ ಪಟ್ಟಣದ ಶ್ರೀ ರಂಗನಾಥ ಸ್ವಾಮಿ ದೇವಸ್ಥಾನದಿಂದ ಮೆರವಣಿಗೆಯಲ್ಲಿ ತೆರಳಿ ಖಾಸಗಿ ಬಸ್ ನಿಲ್ದಾಣದ ಆವರಣದಲ್ಲಿ ಬಹಿರಂಗ ಸಭೆ ನಡೆಸಲಾಯಿತು. ಸಭೆಯನ್ನುದ್ದೇಶಿಸಿ ಬಿಜೆಪಿ ಮುಖಂಡ ಹಾಗೂ ಸಂಚಾಲಕ ಡಾಕ್ಟರ್ ಜ್ಞಾನೇಶ್ ಹೆಚ್.ಈ ಮಾತನಾಡಿ ಇತ್ತೀಚಿನ ದಿನಗಳಲ್ಲಿ ಪಟ್ಟಬದ್ಧ ಹಿತಾಸಕ್ತಿಗಳು ಹಾಗೂ ಹಿಂದೂ ವಿರೋಧಿ ಶಕ್ತಿಗಳು ಸಂಘಟಿತವಾಗಿ ಧರ್ಮಸ್ಥಳ ಕ್ಷೇತ್ರದ ಬಗ್ಗೆ ಅಪಪ್ರಚಾರ ನಡೆಸುತ್ತಿದ್ದು, ಧರ್ಮಸ್ಥಳದ ಗೌರವ ಹಾಗೂ ಘನತೆಗೆ ಧಕ್ಕೆ ತರುವಂತ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಇದು ಕೋಟ್ಯಂತರ ಕನ್ನಡಿಗರ ಭಾವನೆಗಳಿಗೆ ನೋವುಂಟು ಮಾಡುವುದರೊಂದಿಗೆ ಸಮಾಜದ ಶಾಂತಿ-ಸೌಹಾರ್ದತೆಗೂ ಧಕ್ಕೆ ತರುತ್ತಿದೆ. ಹಿಂದೂ ಪರಂಪರೆಯ ನಾವೆಲ್ಲರೂ ಸ್ವಾಭಿಮಾನಿಗಳಾಗಿದ್ದೇವೆ. ಅಂದು ಸೋಮನಾಥ, ವಿಶ್ವನಾಥ ಇಂದು ಮಂಜುನಾಥನ ಅಸ್ವಿತ್ವವನ್ನೇ ಪ್ರಶ್ನಿಸಲು ಮುಂದಾಗಿದ್ದಾರೆ. ಘಜ್ನಿ ಸಂತತಿಯವರು ಅಂದೂ, ಇಂತಹ ಸಂತತಿಗೆ ನಾವೆಲ್ಲರೂ ವಿಚಲಿತರಾಗಬೇಕಿಲ್ಲ ಎಂದರು.
ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ರಾಜು ಎಂ ತಲ್ಲೂರು ಮಾತನಾಡಿ, ಇಂದು ನಾವು ಧರ್ಮದ ಉಳಿವಿಗಾಗಿ ಹೋರಾಟ ನಡೆಸುವ ಹೋರಾಟ ಹಿಂದೂ ವಿರೋಧಿಗಳಿಗೆ ಇದು ಎಚ್ಚರಿಕೆಯ ಘಂಟೆ. ಧರ್ಮಸ್ಥಳ ನಮಗೆ ಕಲಿಸಿದ್ದು ಧರ್ಮ, ಆಸ್ತಿಕತೆ. ಪ್ರತಿ ಭಕ್ತ ಹಸಿವನ್ನು ತೀರಿಸುವ ಕ್ಷೇತ್ರ ಧರ್ಮಸ್ಥಳ. ಇಂತಹ ಕ್ಷೇತ್ರದ ಬಗ್ಗೆ ಅಪಪ್ರಚಾರ ಮಾಡುತ್ತಿರುವುದು ಅತಿದೊಡ್ಡ ಷಡ್ಯಂತ್ರವಾಗಿದೆ. ಹಿಂದೂಗಳ ವಿರುದ್ಧ ಇದೇ ರೀತಿ ಮುಂದುವರೆದರೆ ದೇಶಾದ್ಯಂತ ಹೋರಾಟ ನಡೆಸಬೇಕಾಗುತ್ತದೆ. ರಾಜ್ಯ ಸರ್ಕಾರವು ಈ ಷಡ್ಯಂತ್ರಕ್ಕೆ ಒಳಗಾಗದೇ ನಮ್ಮ ಹಿಂದುತ್ವವನ್ನು ಉಳಿಸಲು ಮುಂದಾಗಬೇಕು ಎಂದು ಎಚ್ಚರಿಸಿದರು.
ವಿಧಾನ ಪರಿಷತ್ ಸದಸ್ಯ ಧನಂಜಯ ಸರ್ಜಿ ಮಾತನಾಡಿ ಈ ಷಡ್ಯಂತ್ರದ ಪಿತೂರಿ ಮಾಡಿರುವ ಸಮಾಜ ಘಾತುಕರ ವಿರುದ್ಧ ಹಾಗೂ ರಾಷ್ಟçವಿರೋಧಿ ಚಟುವಟಿಕೆ ನಡೆಸುತ್ತಿರುವವರ ವಿರುದ್ಧ ಕಾನೂನು ರೀತ್ಯ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹರಿಕೃಷ್ಣ, ಮಂಡಲ ಅಧ್ಯಕ್ಷ ಪ್ರಕಾಶ್ ಅಗಸನಹಳ್ಳಿ ಮಾತನಾಡಿದರು.
ಪ್ರಮುಖರಾದ ದೇವೇಂದ್ರಪ್ಪ ಚನ್ನಾಪುರ, ಪ್ರಕಾಶ್ ತಲಕಾಲಕೊಪ್ಪ, ಪಾಣಿರಾಜಪ್ಪ, ವಿಜೇಂದ್ರ ತಲಗುಂದ, ಸುರೇಶ್ ಉದ್ರಿ, ಡಿ. ಶಿವಯೋಗಿ, ಉಮೇಶ್ ಉಡುಗಣಿ, ಗೀತಾ ಮಲ್ಲಿಕಾರ್ಜುನ, ಜಾನಕಪ್ಪ ಒಡೆಯರ್, ಹೊಳಿಯಮ್ಮ ಸೇರಿದಂತೆ ಮುಖಂಡರು, ಕಾರ್ಯಕರ್ತರು, ಭಕ್ತಾದಿಗಳು, ಹಿಂದೂಪರ ಸಂಘಟನೆಯವರು ಪಾಲ್ಗೊಂಡಿದ್ದರು.
Established in 2005, arakshakavaninews has been the go-to source for the latest news and trends in the newspaper and magazine industry. Our journey began with a small team of journalists who shared a passion for storytelling and a desire to inform and engage readers. Over the years, we have grown and expanded our team, but our commitment to delivering high-quality content has never wavered.
At arakshakavaninews, we value integrity, accuracy, and creativity. We are committed to providing our readers with truthful and unbiased information, and we strive to be a trusted source of news and information for our community. We believe that great content is a result of hard work, dedication, and a willingness to take risks and try new things.
Our team is made up of talented journalists, editors, and designers who are passionate about their work. We are dedicated to delivering the best possible content to our readers, and we take pride in the quality of our work. We believe that our team is our greatest asset, and we are committed to investing in their professional development and growth.
At arakshakavaninews, we believe in the transformative power of news. Our philosophy revolves around transparency, integrity, and the pursuit of truth.
We celebrate diversity at arakshakavaninews. Our newsroom is a melting pot of ideas and perspectives, ensuring a well-rounded representation of news.
As a responsible news organization, arakshakavaninews is committed to sustainability. We are continuously looking for ways to minimize our environmental impact.
ತರೀಕೆರೆ : ಪುರಸಭಾ ಸದಸ್ಯ ಲೋಕಾಯುಕ್ತ ಬಲೆಗೆ.
What's something exciting your business offers? Say it here.
Give customers a reason to do business with you.
Say something interesting about your business here.
What's something exciting your business offers? Say it here.
Say something interesting about your business here.
What's something exciting your business offers? Say it here.
Have a story idea for us? Would you like to write for us?
Send us a message and let us know what you are thinking about.
Bhovi Colony, 3rd cross, Kodi camp, Tarikere taluk, Chikkamagaluru Dist., Bhovi colony/Lingadahalli main road, Tarikere, KA 577228
Mon | 12:00 am – 12:00 am | |
Tue | 12:00 am – 12:00 am | |
Wed | 12:00 am – 12:00 am | |
Thu | 12:00 am – 12:00 am | |
Fri | 12:00 am – 12:00 am | |
Sat | 12:00 am – 12:00 am | |
Sun | 12:00 am – 12:00 am |
Sign up to get each issue delivered straight to your inbox.
We use cookies to analyze website traffic and optimize your website experience. By accepting our use of cookies, your data will be aggregated with all other user data.