• Home
  • News
  • More
    • Home
    • News
  • Home
  • News

ಆರಕ್ಷಕವಾಣಿ ನ್ಯೂಸ್

ಆರಕ್ಷಕವಾಣಿ ನ್ಯೂಸ್ಆರಕ್ಷಕವಾಣಿ ನ್ಯೂಸ್ಆರಕ್ಷಕವಾಣಿ ನ್ಯೂಸ್

Breaking News in Pictures: The Most Powerful Images from Today's Headlines

    ವಿಧಾನಸೌಧದಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರಾದ ಕೆಜೆ ಜಾರ್ಜ್.

    ವಿಧಾನಸೌಧದಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರಾದ ಕೆಜೆ ಜಾರ್ಜ್.


    ವಿಧಾನಸೌಧದಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರಾದ ಕೆಜೆ ಜಾರ್ಜ್.

     ಪ್ರವಾಸೋದ್ಯಮ ಹಾಗೂ ಇಂಧನ ಸಚಿವರಾದ ಕೆಜೆ ಜಾರ್ಜ್ ರವರಿಂದ ಅಧಿಕಾರಿಗಳೊಂದಿಗೆ ಸಭೆ 


    ಪ್ರವಾಸೋದ್ಯಮ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಸಚಿವರಾದ ಕೆಜೆ ಜಾರ್ಜ್ ರವರು ಪ್ರವಾಸೋದ್ಯಮ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು


     ಸಭೆಯಲ್ಲಿ ಮಾತನಾಡಿದ ಕೆಜೆ ಜಾರ್ಜ್ ರವರು ಅಧಿಕಾರಿಗಳೊಂದಿಗೆ 

    ಪ್ರವಾಸಿಗರಿಗೆ ಉತ್ತಮ ಮೂಲಭೂತ ಸೌಕರ್ಯ, ಗುಣಮಟ್ಟದ ಎಲ್ಲಾ ಸೌಲಭ್ಯಗಳು ದೊರಕಬೇಕು &ಕರ್ನಾಟಕದ ಪ್ರವಾಸೋದ್ಯಮ ಕ್ಷೇತ್ರವನ್ನು ಬಲಪಡಿಸಬೇಕು ಎಂದು ಅಧಿಕಾರಿಗಳಿಗೆ ಮಾಹಿತಿ ನೀಡಿದರು 

    ತಂತ್ರಜ್ಞಾನ ಆಧಾರಿತ ಸೇವೆಗಳು 

    , ನಿಯಮಿತ ಕ್ಷೇತ್ರ ತಪಾಸಣೆ ಮತ್ತು ನಿಯಮಿತ ದೂರು ನಿವಾರಣೆಗೆ ಒತ್ತು ನೀಡಿ. ಕರ್ನಾಟಕದ 

    ಶ್ರೀಮಂತ ಪರಂಪರೆ ವನ್ಯಜೀವಿ ಕರಾವಳಿ ಮತ್ತು ನೈಸರ್ಗಿಕ ಸೌಂದರ್ಯವನ್ನು ಜಾಗತಿಕ 

    ಪ್ರವಾಸೋದ್ಯಮ ನಕ್ಷೆಯಲ್ಲಿ ಗುರುತಿಸುವ  ದೃಷ್ಟಿಕೋನದೊಂದಿಗೆ  ಸಭೆಯಲ್ಲಿ ಅಧಿಕಾರಿಗಳೊಂದಿಗೆ

     ಕೆಜೆ ಜಾರ್ಜ್ ರವರು  ನಿರ್ದೇಶನ ನೀಡಿದರು.

     ಪ್ರವಾಸೋದ್ಯಮ ಹಿರಿಯ ಅಧಿಕಾರಿಗಳ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ 

     ಪ್ರವಾಸೋದ್ಯಮ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳಾದ  ಡಾ. ಕೆ.ವಿ. ತ್ರಿಲೋಕ್ ಚಂದ್ರ 

    (ಐಎಎಸ್), ಹಾಗೂ

     ಪ್ರವಾಸೋದ್ಯಮ ಇಲಾಖೆಯ ಆಯುಕ್ತರಾದ ಶ್ರೀ ಅಕ್ರಂ ಪಾಷಾ (ಕೆಎಎಸ್), ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ (ಕೆಎಸ್‌ಟಿಡಿಸಿ) ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಶಿವಪ್ರಸಾದ್

     ಪಿ.ಆರ್. (ಐಎಎಸ್), ಜಂಗಲ್ ಲಾಡ್ಡಸ್ ಆ್ಯಂಡ್ ರಿಸಾರ್ಟ್ಸ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕರಾದ 

    ಶ್ರೀ ಪ್ರಶಾಂತ್ ಶಂಖಿನಮಠ (ಐಎಫ್‌ಎಸ್) ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.


    ಬಂಡಳ್ಳಿ ಗ್ರಾಮದ ಜಮೀರ್ ಅಹಮದ್ ಖಾನ್ ಅಭಿಮಾನಿ ಬಳಗದಿಂದ ಆಗ್ರಹ:

    ವಿಧಾನಸೌಧದಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರಾದ ಕೆಜೆ ಜಾರ್ಜ್.

    ಸದಾ ನಿಮ್ಮೊಂದಿಗೆ ನಾವು" ಬಂಡಳ್ಳಿ ಗ್ರಾಮದ ಜಮೀರ್ ಅಹಮದ್ ಖಾನ್  ಅಭಿಮಾನಿ ಬಳಗ

    ಬಿ.ಜೆಡ್. ಜಮೀರ್ ಅಹ್ಮದ್ ಖಾನ್ ಅವರಿಗೆ ಸೂಕ್ತ ಸಚಿವ ಸ್ಥಾನವನ್ನು ನೀಡಬೇಕು 


    ಬಂಡಳ್ಳಿ ಗ್ರಾಮದ ಜಮೀರ್ ಅಹಮದ್ ಖಾನ್  ಅಭಿಮಾನಿ ಬಳಗದಿಂದ ಆಗ್ರಹ: ಬಿ.ಜೆಡ್

    . ಜಮೀರ್ ಅಹ್ಮದ್ ಖಾನ್ ಅವರಿಗೆ ಸಚಿವ ಸ್ಥಾನ ನೀಡಲು ಒತ್ತಾಯ


    ಚಾಮರಾಜನಗರ/ಬಂಡಳ್ಳಿ: ರಾಜ್ಯದ ಪ್ರಭಾವಿ ನಾಯಕರಲ್ಲೊಬ್ಬರಾದ ಬಿ.ಜೆಡ್. ಜಮೀರ್

     ಅಹ್ಮದ್ ಖಾನ್ ಅವರಿಗೆ ಸೂಕ್ತ ಸಚಿವ ಸ್ಥಾನವನ್ನು ನೀಡಬೇಕು ಎಂದು ಚಾಮರಾಜನಗರ

     ಜಿಲ್ಲೆಯ ಬಂಡಳ್ಳಿ ಗ್ರಾಮದ ಜಮೀರ್ ಅಹ್ಮದ್ ಖಾನ್ ಅಭಿಮಾನಿ ಬಳಗವು ಕಾಂಗ್ರೆಸ್ ಪಕ್ಷದ 

    ಹೈಕಮಾಂಡ್ ಅನ್ನು ಒತ್ತಾಯಿಸಿದೆ.

    ಈ ಕುರಿತು ಹೇಳಿಕೆ ನೀಡಿರುವ ರಾಹಿಲ್ ಬೇಗ್ ಅವರು, "ಜಮೀರ್ ಅಹ್ಮದ್ ಖಾನ್ ಅವರು ಪಕ್ಷದ

     ಸಂಘಟನೆಗೆ ಅಪಾರ ಕೊಡುಗೆ ನೀಡಿದ್ದಾರೆ. ಅವರನ್ನು ಪ್ರಭಾವಿ ಖಾತೆಯ ಸಚಿವರನ್ನಾಗಿ ನೇಮಕ ಮಾಡಬೇಕೆಂದು ನಾವು ಕಾಂಗ್ರೆಸ್ ವರಿಷ್ಠರಲ್ಲಿ ಬಲವಾಗಿ ಆಗ್ರಹಿಸುತ್ತೇವೆ" ಎಂದು ತಿಳಿಸಿದ್ದಾರೆ.

    "ಸದಾ ನಿಮ್ಮೊಂದಿಗೆ ನಾವು"

    ಬಂಡಳ್ಳಿ ಗ್ರಾಮದ ಜಮೀರ್ ಅಹ್ಮದ್ ಖಾನ್ ಅಭಿಮಾನಿ ಬಳಗವು ಅವರ ಬೆಂಬಲಕ್ಕೆ ನಿಂತಿದ್ದು, 

    "ಸದಾ ನಿಮ್ಮೊಂದಿಗೆ ನಾವು" ಎಂಬ ಘೋಷವಾಕ್ಯದೊಂದಿಗೆ ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ಆರಂಭಿಸಿದೆ, ಈ ಮೂಲಕ ಪಕ್ಷದ ವರಿಷ್ಠರ ಮೇಲೆ ಒತ್ತಡ ಹೇರುವ ಪ್ರಯತ್ನವನ್ನು ಅಭಿಮಾನಿಗಳು ಮಾಡುತ್ತಿದ್ದಾರೆ.

    ರಾಜ್ಯ ರಾಜಕೀಯದಲ್ಲಿ ಸಕ್ರಿಯವಾಗಿರುವ ಜಮೀರ್ ಅಹ್ಮದ್ ಅವರಿಗೆ ಸಂಪುಟದಲ್ಲಿ ಸೂಕ್ತ

     ಸ್ಥಾನಮಾನ ಕಲ್ಪಿಸಿಕೊಡುವ ಮೂಲಕ ಅವರ ಸೇವೆಗೆ ಮನ್ನಣೆ ನೀಡಬೇಕು ಎಂಬುದು ಬಂಡಳ್ಳಿ

     ಗ್ರಾಮದ ಜಮೀರ್ ಅಹ್ಮದ್ ಖಾನ್ ಅಭಿಮಾನಿ ಬಳಗದ ಮುಖ್ಯ ಬೇಡಿಕೆಯಾಗಿದೆ, ಈ ವಿಚಾರವಾಗಿ ಕಾರ್ಯಕರ್ತರು ಒಗ್ಗಟ್ಟಿನ ಪ್ರದರ್ಶನವನ್ನು ಮುಂದುವರಿಸಿದ್ದಾರೆ.


    ವರದಿ ಉಸ್ಮಾನ್ ಖಾನ್

    ಭದ್ರಾವತಿಯ ಅನ್ವರ್ ಕಾಲೋನಿಯಲ್ಲಿ ಮಾರಕಸ್ತ್ರಗಳಿಂದ ವ್ಯಕ್ತಿಯ ಮೇಲೆ ದಾಳಿ, ಗಂಭೀರ ಗಾಯ

    ಭದ್ರಾವತಿಯ ಅನ್ವರ್ ಕಾಲೋನಿಯಲ್ಲಿ ಮಾರಕಸ್ತ್ರಗಳಿಂದ ವ್ಯಕ್ತಿಯ ಮೇಲೆ ದಾಳಿ, ಗಂಭೀರ ಗಾಯ 


     ಭದ್ರಾವತಿಯ ವಿಶ್ವನಾಥ್ ಮೇಲೆ ಮಾರಕಾಸ್ತ್ರಗಳಿಂದ ದಾಳಿ  ಭದ್ರಾವತಿಯ ವಿಶ್ವನಾಥ್ ಮೇಲೆ ಮಾರಕಾಸ್ತ್ರಗಳಿಂದ ದಾಳಿ 

    ಹಳೇ ದ್ವೇಷದ ಹಿನ್ನೆಲೆಯಲ್ಲಿ ಯುವಕನೊಬ್ಬನ ಮೇಲೆ ದುಷ್ಕರ್ಮಿಗಳ ಹಲ್ಲೆ 

    ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರದ ಹೊಳೆಹೊನ್ನೂರು ರಸ್ತೆಯ ಅನ್ವರ್ ಕಾಲೋನಿಯಲ್ಲಿ 

    ವಿಶ್ವನಾಥ್ ಎಂಬ  ವ್ಯಕ್ತಿ ಮೇಲೆ ಮಾರಕಾಸ್ತ್ರಗಳಿಂದ ಭೀಕರವಾಗಿ ಹಲ್ಲೆ ಮಾಡಲಾಗಿದೆ 

    ದಾಳಿಯಲ್ಲಿ ಮುದ್ದೆ ಅಲಿಯಾಸ್ ವಿಶ್ವನಾಥ್ ಎಂ. (35) ವರ್ಷದ ಯುವಕ ಗಂಭೀರವಾಗಿ

     ಗಾಯಗೊಂಡಿದ್ದು, ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

    ಸಾರ್ವಜನಿಕರ ಪ್ರಕಾರ ಕಿರಾಣಿ ಅಂಗಡಿಯ ಮುಂದೆ ಕುಳಿತಿದ್ದ ವಿಶ್ವನಾಥ್ ಮೇಲೆ ಸುಮಾರು 6ರಿಂದ 7 ಮಂದಿಯ ತಂಡ ಏಕಾಏಕಿ ಹಲ್ಲೆ ನಡೆಸಿದೆ. ಆರೋಪಿಗಳು ಅವರನ್ನು  ಮಾರಕಾಸ್ತ್ರಗಳಿಂದ ನಿರ್ದಯವಾಗಿ ಹಲ್ಲೆ ನಡೆಸಿದ್ದಾರೆ. 

    ನಂತರ ಸ್ಥಳದಿಂದ ಪರಾರಿಯಾಗಿದ್ದಾರೆ.


    ವಿಶ್ವನಾಥ್ ಭದ್ರಾವತಿ ಪ್ರದೇಶದಲ್ಲಿ "ಇಸ್ಪೀಟ್ ಕಿಂಗ್" ಎಂದೇ ಪರಿಚಿತರಾಗಿದ್ದು ಇಸ್ಪೀಟ್ ಹಾಗೂ ಇತರೆ ವಿಚಾರಗಳಿಗೆ ಸಂಬಂಧಿಸಿದ ವೈಷಮ್ಯವೇ ದಾಳಿಗೆ ಕಾರಣವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. 


     ಈ ಪ್ರಕರಣ  ಭದ್ರಾವತಿ ಹಳೆನಗರ ಪೊಲೀಸ್ ಠಾಣೆಯಲ್ಲಿ  ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು 






    ಬೀದಿ ನಾಯಿ ದಾಳಿಗೆ 13ಕ್ಕೂ ಹೆಚ್ಚು ಮಂದಿಗೆ ಗಾಯ

    ಶಿಕ್ಷಕರಿಲ್ಲದೆ ಅತಂತ್ರವಾದ ಮಕ್ಕಳ ಭವಿಷ್ಯ - ಮಾಂಬಳ್ಳಿ ಸರ್ಕಾರಿ ಉರ್ದು ಶಾಲೆಗೆ ತಕ್ಷಣ ಶಿಕ್ಷಕರ ನೇಮಕಕ್ಕೆ ಆಗ್ರಹ

     ಬೀದಿ ನಾಯಿ ದಾಳಿಗೆ 13ಕ್ಕೂ ಹೆಚ್ಚು ಮಂದಿಗೆ ಗಾಯ


    ಹನೂರು ಜೂ 11 :-  ತಾಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬೀದಿ ನಾಯಿಯೊಂದು

     ಎರಡು ದಿನಗಳಿಂದ ದಾಳಿ ನಡೆಸಿ 13ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಾಗಿರುವ

     ಘಟನೆ ಬುಧವಾರ ನಡೆದಿದೆ.


    ತಾಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಗೋಡೆಸ್ಟ್ ನಗರ ಗ್ರಾಮದ ಮಗು ಜಯಂತ್, ಮಾರ್ಟಳ್ಳಿ ಗ್ರಾಮದ ಶಾಂತ, ಮಾರ್ಟಿನ್, ರಮೇಶ್, ಸಂಧ್ಯಾ, ಅಮಲಾ, ಜೇಸಿಂತ, ಕ್ಲಿಮೆಂಟ್, ಮಣಿ, ಕದ್ರಿವೇಲು ಸೇರಿದಂತೆ ಒಟ್ಟು 13ಕ್ಕೂ ಹೆಚ್ಚು ಜನರು ನಾಯಿ ದಾಳಿಗೆ ಗಾಯಗೊಂಡಿದ್ದಾರೆ.


    ಬೀದಿ ನಾಯಿ ದಾಳಿಯಿಂದ ಹಲವರಿಗೆ ಕೈ, ಕಾಲು ಸೇರಿದಂತೆ ದೇಹದ ವಿವಿಧ ಭಾಗಗಳಲ್ಲಿ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೆಲವರನ್ನು ಹೆಚ್ಚಿನ ಚಿಕಿತ್ಸೆಗೆ 

    ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.


    ಈ ಹಿನ್ನೆಲೆಯಲ್ಲಿ ಪಶುಸಂಗೋಪನಾ ಇಲಾಖೆ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದು, ಗುರುವಾರದಿಂದ

     ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳಲ್ಲಿ ಸಾಕು ನಾಯಿಗಳಿಗೆ ಉಚಿತ ಲಸಿಕಾ ಅಭಿಯಾನ ನಡೆಸಲು ನಿರ್ಧರಿಸಿದ್ದಾರೆ. ಸಾರ್ವಜನಿಕರು ಈ ಕಾರ್ಯಕ್ಕೆ ಸಹಕರಿಸುವಂತೆ ಇಲಾಖೆ

     ಅಧಿಕಾರಿಗಳು ಮನವಿ ಮಾಡಿದ್ದಾರೆ.


    ಘಟನೆಯಿಂದ ಗ್ರಾಮಸ್ಥರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಮಕ್ಕಳು ಹಾಗೂ

     ಮಹಿಳೆಯರು ಹೊರಗಡೆ ಓಡಾಡಲು ಸಹ ಭಯಪಡುವ ಪರಿಸ್ಥಿತಿ ಎದುರಾಗಿದೆ. ಸುಳ್ವಾಡಿ

    , ಗೋಡೆಸ್ಟ್ ನಗರ, ಕೋಟೆಪೊದೆ ,ಏರಿ ಕಾಡು, ವೆಲ್ಲೇರಿ ಬೋರೆ ಗ್ರಾಮಗಳಿಗೆ ಪಶು ಸಂಗೋಪನೆ

     ಇಲಾಖೆಯಿಂದ ಸಾಕಿರುವ ನಾಯಿಗಳಿಗೆ ಲಸಿಕ ಕಾರ್ಯಕ್ರಮ ಹಮ್ಮಿಕೊಂಡಿದ್ದು ಸಾರ್ವಜನಿಕರು

     ತಮ್ಮ ಸಹಕಾರ ನೀಡಬೇಕೆಂದು ಈ ಮೂಲಕ ಕೋರಿದೆ.


    ವರದಿ ಉಸ್ಮಾನ್ ಖಾನ್

    ರೌಡಿ ಚಟುವಟಿಕೆಗಳನ್ನು ಮಟ್ಟಹಾಕಲು ರೌಡಿ ನಿಗ್ರಹ ಪಡೆ ರಚನೆ

    ಶಿಕ್ಷಕರಿಲ್ಲದೆ ಅತಂತ್ರವಾದ ಮಕ್ಕಳ ಭವಿಷ್ಯ - ಮಾಂಬಳ್ಳಿ ಸರ್ಕಾರಿ ಉರ್ದು ಶಾಲೆಗೆ ತಕ್ಷಣ ಶಿಕ್ಷಕರ ನೇಮಕಕ್ಕೆ ಆಗ್ರಹ

    ಶಿಕ್ಷಕರಿಲ್ಲದೆ ಅತಂತ್ರವಾದ ಮಕ್ಕಳ ಭವಿಷ್ಯ - ಮಾಂಬಳ್ಳಿ ಸರ್ಕಾರಿ ಉರ್ದು ಶಾಲೆಗೆ ತಕ್ಷಣ ಶಿಕ್ಷಕರ ನೇಮಕಕ್ಕೆ ಆಗ್ರಹ

    ರೌಡಿಸಂ ಗೆ ಕಡಿವಾಣ ವಿಶೇಷ ರೌಡಿ ನಿಗ್ರಹ ಪಡೆ ರಚನೆ ತೇಜಸ್ವಿ ನಾಗಲಿಂಗಸ್ವಾಮಿ :- ಸ್ವಾಗತ

     ನೂತನ ಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ರವರು  ರೋಡಿ ಚಟುವಟಿಗಳನ್ನು ಮಟ್ಟ ಹಾಕಲು ರೌಡಿ ನಿಗ್ರಹ ಪಡೆ ರಚನೆಗೆ ಸ್ವಾಗತಿಸಿದಕನ್ನಡ ಕ್ರಾಂತಿದಳ ರಾಜ್ಯಾಧ್ಯಕ್ಷ ತೇಜಸ್ವಿ ನಾಗಲಿಂಗಸ್ವಾಮಿ ಸ್ವಾಗತಿಸಿದರೆ


    ನೂತನ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ರಾಜ್ಯದಲ್ಲಿ ನಡೆಯುತ್ತಿರುವ ರೌಡಿ ಚಟುವಟಿಕೆಗಳನ್ನು ಮಟ್ಟಹಾಕಲು ರೌಡಿ ನಿಗ್ರಹ ಪಡೆ ರಚನೆ ಮಾಡಿರುವುದನ್ನು ಕನ್ನಡ ಕ್ರಾಂತಿದಳ ರಾಜ್ಯಾಧ್ಯಕ್ಷ ತೇಜಸ್ವಿ ನಾಗಲಿಂಗಸ್ವಾಮಿ ಸ್ವಾಗತಿಸಿದರೆ


    ನಾನು ಕೂಡ ಅನೇಕ ವರ್ಷಗಳಿಂದ ರೌಡಿ ಚಟುವಟಿಕೆ ವಿರುದ್ಧ ಹೋರಾಟಗಳನ್ನು ನಡೆಸುತ್ತ ಬಂದಿದ್ದೇನೆ ಮತ್ತು ಅನೇಕ ಬಾರಿ ರಾಜ್ಯ ಸರ್ಕಾರಕ್ಕೆ ಮತ್ತು ಪೋಲಿಸ್ ಇಲಾಖೆಗೆ ರೌಡಿ ನಿಗ್ರಹ ಪಡೆ ಸ್ಥಾಪಿಸುವಂತೆ ಮನವಿ ಕೂಡಾ ಮಾಡಿದ್ದೆ

    ಈಗ ರೌಡಿ ನಿಗ್ರಹ ಪಡೆ ರಚನೆ ಆಗಿರುವುದು ಸಂತಸ ತಂದಿದೆ ಎಂದು ತೇಜಸ್ವಿ ನಾಗಲಿಂಗಸ್ವಾಮಿ ತಿಳಿಸಿದ್ದಾರೆ


    ಈ ರೌಡಿ ನಿಗ್ರಹ ಪಡೆ ರಚನೆ ಇಂದ ಜನ ಸಾಮಾನ್ಯರಿಗೆ ರೌಡಿ ಚಟುವಟಿಕೆ ಇದ್ದವರು ಬೆದರಿಕೆ ಹಾಕುವುದು ಮತ್ತು ಹಫ್ತಾ ವಸೂಲಿ ಮಾಡುವವರು ಮತ್ತು ಸಮಾಜದಲ್ಲಿ ಆತಂಕ ಉಂಟುಮಾಡುವವರ ಎದೆಯಲ್ಲಿ ನಡುಕ ಶುರುವಾಗುತ್ತದೆ ಎಂದಿದ್ದಾರೆ


    ಒಟ್ಟಾರೆ ಸರ್ಕಾರದ ಈ ನಿರ್ಧಾರದಿಂದ ರೌಡಿ ಚಟುವಟಿಕೆ ಮಟ್ಟಹಾಕಲು ಅನುಕೂಲ ಮತ್ತು ಸಮಾಜದಲ್ಲಿ ಶಾಂತಿ ನೆಲೆಸಲು ಸಾಧ್ಯವಾಗುತ್ತದೆ ಎಂದು ಕನ್ನಡ ಕ್ರಾಂತಿದಳ ರಾಜ್ಯಾಧ್ಯಕ್ಷ ತೇಜಸ್ವಿ ನಾಗಲಿಂಗಸ್ವಾಮಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಮತ್ತು ಈ ರೀತಿಯ ದಿಟ್ಟ ನಿರ್ಧಾರ ಕೈಗೊಂಡ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಗೆ ಅಭಿನಂದನೆಗಳೊಂದಿಗೆ ಧನ್ಯವಾದಗಳನ್ನು ಅರ್ಪಿಸಿದ್ದಾರೆ

    ಶಿಕ್ಷಕರಿಲ್ಲದೆ ಅತಂತ್ರವಾದ ಮಕ್ಕಳ ಭವಿಷ್ಯ - ಮಾಂಬಳ್ಳಿ ಸರ್ಕಾರಿ ಉರ್ದು ಶಾಲೆಗೆ ತಕ್ಷಣ ಶಿಕ್ಷಕರ ನೇಮಕಕ್ಕೆ ಆಗ್ರಹ

    ಶಿಕ್ಷಕರಿಲ್ಲದೆ ಅತಂತ್ರವಾದ ಮಕ್ಕಳ ಭವಿಷ್ಯ - ಮಾಂಬಳ್ಳಿ ಸರ್ಕಾರಿ ಉರ್ದು ಶಾಲೆಗೆ ತಕ್ಷಣ ಶಿಕ್ಷಕರ ನೇಮಕಕ್ಕೆ ಆಗ್ರಹ

    ಶಿಕ್ಷಕರಿಲ್ಲದೆ ಅತಂತ್ರವಾದ ಮಕ್ಕಳ ಭವಿಷ್ಯ - ಮಾಂಬಳ್ಳಿ ಸರ್ಕಾರಿ ಉರ್ದು ಶಾಲೆಗೆ ತಕ್ಷಣ ಶಿಕ್ಷಕರ ನೇಮಕಕ್ಕೆ ಆಗ್ರಹ

    ಶಿಕ್ಷಕರಿಲ್ಲದೆ ಅತಂತ್ರವಾದ ಮಕ್ಕಳ ಭವಿಷ್ಯ - ಮಾಂಬಳ್ಳಿ ಸರ್ಕಾರಿ ಉರ್ದು ಶಾಲೆಗೆ ತಕ್ಷಣ ಶಿಕ್ಷಕರ ನೇಮಕಕ್ಕೆ ಆಗ್ರಹ*

    ಯಳಂದೂರು: ತಾಲ್ಲೂಕಿನ ಮಾಂಬಳ್ಳಿ ಗ್ರಾಮದ ಸರ್ಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ಕೊರತೆ ಉಲ್ಬಣಿಸಿದ್ದು, ಇಲ್ಲಿನ 10 ಮಕ್ಕಳ ಶೈಕ್ಷಣಿಕ ಭವಿಷ್ಯ ಅತಂತ್ರವಾಗಿದೆ. ಸೂಕ್ತ ಶಿಕ್ಷಕರಿಲ್ಲದೆ ಮಕ್ಕಳು ಅಕ್ಷರ ಜ್ಞಾನದಿಂದ ವಂಚಿತರಾಗುವ ಆತಂಕ ಎದುರಾಗಿದ್ದು, ಕೂಡಲೇ ಸರ್ಕಾರ ಎಚ್ಚೆತ್ತುಕೊಂಡು ಶಾಶ್ವತ ಶಿಕ್ಷಕರನ್ನು ನೇಮಿಸಬೇಕೆಂದು ಪೋಷಕರು ಮತ್ತು ಗ್ರಾಮಸ್ಥರು ಆಗ್ರಹಿಸಿದ್ದಾರೆ.


    ಮಕ್ಕಳ ಭವಿಷ್ಯಕ್ಕೆ ಕುತ್ತು:

    ಈ ಶಾಲೆಯಲ್ಲಿ ಒಟ್ಟು 10 ಮಕ್ಕಳು ವ್ಯಾಸಂಗ ಮಾಡುತ್ತಿದ್ದಾರೆ. ಆದರೆ, ಶಾಲೆಗೆ ಅಗತ್ಯವಿರುವ ಪೂರ್ಣಕಾಲಿಕ ಶಿಕ್ಷಕರ ಕೊರತೆ ಪೋಷಕರ ನಿದ್ದೆಗೆಡಿಸಿದೆ. ಪ್ರಸ್ತುತ, ಶಾಲೆಯ ಮುಖ್ಯೋಪಾಧ್ಯಾಯರ (HM) ಉಸ್ತುವಾರಿಯನ್ನು ಪಕ್ಕದ ಕನ್ನಡ ಶಾಲೆಯ ಶಿಕ್ಷಕರು ನೋಡಿಕೊಳ್ಳುತ್ತಿದ್ದಾರೆ. ಒಬ್ಬರು ಅತಿಥಿ ಶಿಕ್ಷಕರು ಮಾತ್ರ ಕಾರ್ಯನಿರ್ವಹಿಸುತ್ತಿದ್ದು, ಇದು ಮಕ್ಕಳ ಕಲಿಕೆಗೆ ಸಾಕಾಗುತ್ತಿಲ್ಲ. ಸರ್ಕಾರಿ ಶಾಲೆಯಲ್ಲಿ ಮೂಲಭೂತ ಬೋಧನೆ ಸಿಗದಿರುವುದು ಸರ್ಕಾರದ ಶಿಕ್ಷಣ ನೀತಿಯನ್ನೇ ಪ್ರಶ್ನಿಸುವಂತಾಗಿದೆ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.


    ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಆಕ್ರೋಶ:

    ಈ ಕುರಿತು ಸಂಬಂಧಪಟ್ಟ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆಯಿಂದಾಗಿ ಬಡ ಮಕ್ಕಳ ಭವಿಷ್ಯ ಮಣ್ಣು ಪಾಲಾಗುತ್ತಿದೆ ಎಂದು ಗ್ರಾಮದ ಮುಖಂಡರು ಕಿಡಿಕಾರಿದ್ದಾರೆ. ಕೂಡಲೇ ಇಲಾಖೆಯ ಉನ್ನತ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ, ಶಾಲೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಕನಿಷ್ಠ ಇಬ್ಬರು ಶಾಶ್ವತ ಶಿಕ್ಷಕರನ್ನು ನೇಮಕ ಮಾಡಬೇಕೆಂದು ಒತ್ತಾಯಿಸಿದ್ದಾರೆ.


    ಉಗ್ರ ಹೋರಾಟದ ಎಚ್ಚರಿಕೆ:

    ಒಂದು ವೇಳೆ ಶಿಕ್ಷಣ ಇಲಾಖೆಯು ಇನ್ನು ತಡಮಾಡದೆ ಕೂಡಲೇ ಶಿಕ್ಷಕರನ್ನು ನಿಯೋಜಿಸದಿದ್ದರೆ, ಮುಂದಿನ ದಿನಗಳಲ್ಲಿ ಶಾಲೆಯ ಮುಂದೆ ವಿವಿಧ ಸಂಘಟನೆಗಳ ಸಹಯೋಗದೊಂದಿಗೆ ರಸ್ತೆಗಿಳಿದು ಉಗ್ರ ಹೋರಾಟ ನಡೆಸಲಾಗುವುದು ಎಂದು ಗ್ರಾಮಸ್ಥರು ಎಚ್ಚರಿಸಿದ್ದಾರೆ.

    ಬಳ್ಳಾವರ ಸರ್ಕಾರಿ ಶಾಲೆಗೆ ತರೀಕೆರೆ ರೋಟರಿ ಸಂಸ್ಥೆಯಿಂದ ‘ಗ್ರೀನ್ ಬೋರ್ಡ್’ ಕೊಡುಗೆ*

    ಬಳ್ಳಾವರ ಸರ್ಕಾರಿ ಶಾಲೆಗೆ ತರೀಕೆರೆ ರೋಟರಿ ಸಂಸ್ಥೆಯಿಂದ ‘ಗ್ರೀನ್ ಬೋರ್ಡ್’ ಕೊಡುಗೆ

    ದೊಡ್ಡಬೆಮ್ಮತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಭ್ರಮದ ಅಕ್ಷರಾಭ್ಯಾಸ: ಜ್ಞಾನದ ದೀವಿಗೆಯತ್ತ ಪುಟ್ಟ ಕಂದಮ್ಮಗಳ ಪದಾರ್ಪಣೆ

    ದೊಡ್ಡಬೆಮ್ಮತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಭ್ರಮದ ಅಕ್ಷರಾಭ್ಯಾಸ: ಜ್ಞಾನದ ದೀವಿಗೆಯತ್ತ ಪುಟ್ಟ ಕಂದಮ್ಮಗಳ ಪದಾರ್ಪಣೆ

    ಬಳ್ಳಾವರ ಸರ್ಕಾರಿ ಶಾಲೆಗೆ ತರೀಕೆರೆ ರೋಟರಿ ಸಂಸ್ಥೆಯಿಂದ ‘ಗ್ರೀನ್ ಬೋರ್ಡ್’ ಕೊಡುಗೆ*


    ​ರೋಟರಿ ಸಂಸ್ಥೆ ತರೀಕೆರೆ,  ಹಿರಿಯ ಪ್ರಾಥಮಿಕ ಶಾಲೆ, ಬಳ್ಳಾವರ ಇವರ ಸಹಯೋಗದೊಂದಿಗೆ ದಿನಾಂಕ 09/06/2026ರ ಮಂಗಳವಾರದಂದು ಶಾಲಾ ಆವರಣದಲ್ಲಿ ವಿದ್ಯಾರ್ಥಿಗಳಿಗೆ *ಗ್ರೀನ್ ಬೋರ್ಡ್ ವಿತರಣಾ ಕಾರ್ಯಕ್ರಮ* ವನ್ನು ಹಮ್ಮಿಕೊಳ್ಳಲಾಗಿತ್ತು.


    *​ಕಾರ್ಯಕ್ರಮದಲ್ಲಿ ತರೀಕೆರೆ ರೋಟರಿ ಸಂಸ್ಥೆಯ ಸದಸ್ಯರುಗಳಾದ  ರೊ. ಗಿರೀಶ್ ಸಿ. ಎಂ., ರೊ. ಕಲ್

    ಬಳ್ಳಾವರ ಸರ್ಕಾರಿ ಶಾಲೆಗೆ ತರೀಕೆರೆ ರೋಟರಿ ಸಂಸ್ಥೆಯಿಂದ ‘ಗ್ರೀನ್ ಬೋರ್ಡ್’ ಕೊಡುಗೆ*


    ​ರೋಟರಿ ಸಂಸ್ಥೆ ತರೀಕೆರೆ,  ಹಿರಿಯ ಪ್ರಾಥಮಿಕ ಶಾಲೆ, ಬಳ್ಳಾವರ ಇವರ ಸಹಯೋಗದೊಂದಿಗೆ ದಿನಾಂಕ 09/06/2026ರ ಮಂಗಳವಾರದಂದು ಶಾಲಾ ಆವರಣದಲ್ಲಿ ವಿದ್ಯಾರ್ಥಿಗಳಿಗೆ *ಗ್ರೀನ್ ಬೋರ್ಡ್ ವಿತರಣಾ ಕಾರ್ಯಕ್ರಮ* ವನ್ನು ಹಮ್ಮಿಕೊಳ್ಳಲಾಗಿತ್ತು.


    *​ಕಾರ್ಯಕ್ರಮದಲ್ಲಿ ತರೀಕೆರೆ ರೋಟರಿ ಸಂಸ್ಥೆಯ ಸದಸ್ಯರುಗಳಾದ  ರೊ. ಗಿರೀಶ್ ಸಿ. ಎಂ., ರೊ. ಕಲ್ಲೇಶ್ ಡಿ. ಕೆ. ಹಾಗೂ ರೊ. ಸುರೇಶ್ ಡಿ. ಸಿ. ಅವರು ಶಾಲೆಯ ಮಕ್ಕಳ ಶೈಕ್ಷಣಿಕ ಬಳಕೆಗೆ ಅತ್ಯಗತ್ಯವಾಗಿರುವ ಮೂರು ಗ್ರೀನ್ ಬೋರ್ಡ್‌ಗಳನ್ನು ಕೊಡುಗೆಯಾಗಿ ನೀಡಿದರು*.


    *​ಶಿಕ್ಷಣಕ್ಕೆ ಪೂರಕ ವಾತಾವರಣ ಮುಖ್ಯ*: *ರೊ. ರವಿಕುಮಾರ್ ಬಿ. ಪಿ*.


    ​ಗ್ರೀನ್ ಬೋರ್ಡ್ ವಿತರಿಸಿ ಮಾತನಾಡಿದ ತರೀಕೆರೆ ರೋಟರಿ ಕ್ಲಬ್ ನ ಅಧ್ಯಕ್ಷರಾದ ರೊ. ರವಿಕುಮಾರ್ ಬಿ.ಪಿ. ಅವರು,

    ​"ಶಿಕ್ಷಣವು ಪ್ರತಿಯೊಬ್ಬ ಮಗುವಿನ ಭವಿಷ್ಯವನ್ನು ರೂಪಿಸುವ ಅತ್ಯಂತ ಶಕ್ತಿಯುತ ಸಾಧನವಾಗಿದೆ. ಮಕ್ಕಳಿಗೆ ಉತ್ತಮ ಕಲಿಕಾ ವಾತಾವರಣವನ್ನು ನಿರ್ಮಿಸುವಲ್ಲಿ ಶಾಲೆಯ ಮೂಲಸೌಕರ್ಯಗಳು ಬಹಳ ಮುಖ್ಯ ಪಾತ್ರವಹಿಸುತ್ತವೆ. ಆ ನಿಟ್ಟಿನಲ್ಲಿ ನಮ್ಮ ತರೀಕೆರೆ ರೋಟರಿ ಸಂಸ್ಥೆಯ ವತಿಯಿಂದ ಈ ಮೂರು ಗ್ರೀನ್ ಬೋರ್ಡ್‌ಗಳನ್ನು ನಿಮ್ಮ ಶಾಲೆಗೆ ಕೊಡುಗೆಯಾಗಿ ನೀಡುತ್ತಿರುವುದು ನಮಗೆ ಅತ್ಯಂತ ಸಂತೋಷ ಮತ್ತು ಹೆಮ್ಮೆಯ ವಿಷಯವಾಗಿದೆ," ಎಂದು ಆಶಯ ವ್ಯಕ್ತಪಡಿಸಿದರು.


    *​ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಗಣ್ಯರು*:

    ​ಈ ಅರ್ಥಪೂರ್ಣ ಕಾರ್ಯಕ್ರಮದಲ್ಲಿ ರೋಟರಿ ಸಂಸ್ಥೆಯ ಪ್ರಮುಖ ಪದಾಧಿಕಾರಿಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

    ​ರೊ. ಪ್ರವೀಣ್ ಪಿ. – ಕಾರ್ಯದರ್ಶಿಗಳು, ರೋಟರಿ ಸಂಸ್ಥೆ ತರೀಕೆರೆ.


    ​ರೊ. ಪ್ರವೀಣ್ ನಹರ್ ಟಿ. ಎಂ. – ಸಹಾಯಕ ಗವರ್ನರ್, ವಲಯ-7.


    ​ರೊ. ಮಂಜುನಾಥ್ ಬಿ. ಕೆ. – ರೋಟರಿ ಸದಸ್ಯರು.


    ​ರೊ. ಗಿರೀಶ್ ಸಿ. ಎಂ. – ರೋಟರಿ ಸದಸ್ಯರು.


    *​ವಿದ್ಯಾರ್ಥಿಗಳ ಸಮ್ಮುಖದಲ್ಲಿ ಯಶಸ್ವಿ ಕಾರ್ಯಕ್ರಮ*:

    ​ಶಾಲೆಯ ಮುಖ್ಯ ಶಿಕ್ಷಕರಾದ ಶ್ರೀಮತಿ ಶಂಕರಮ್ಮ ಹಾಗೂ ಸಹ ಶಿಕ್ಷಕರಾದ ಶ್ರೀ ಸಂತೋಷ್ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಸುಮಾರು 75ಕ್ಕೂ ಹೆಚ್ಚು ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದ್ದರು.


    ​ಕಾರ್ಯಕ್ರಮದ ಆರಂಭದಲ್ಲಿ ಸಹ ಶಿಕ್ಷಕರಾದ ಶ್ರೀಮತಿ ಆಶಾ ಅವರು ಎಲ್ಲರನ್ನೂ ಆತ್ಮೀಯವಾಗಿ ಸ್ವಾಗತಿಸಿದರು. ಕಾರ್ಯಕ್ರಮದ ಕೊನೆಯಲ್ಲಿ ಶ್ರೀಮತಿ ಶ್ವೇತಾ ಅವರು ನೆರೆದಿದ್ದ ಗಣ್ಯರಿಗೆ ಹಾಗೂ ವಿದ್ಯಾರ್ಥಿಗಳಿಗೆ ವಂದನಾರ್ಪಣೆ ನೆರವೇರಿಸಿದರು. 

    ಧನ್ಯವಾದಗಳು 


    ದೊಡ್ಡಬೆಮ್ಮತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಭ್ರಮದ ಅಕ್ಷರಾಭ್ಯಾಸ: ಜ್ಞಾನದ ದೀವಿಗೆಯತ್ತ ಪುಟ್ಟ ಕಂದಮ್ಮಗಳ ಪದಾರ್ಪಣೆ

    ದೊಡ್ಡಬೆಮ್ಮತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಭ್ರಮದ ಅಕ್ಷರಾಭ್ಯಾಸ: ಜ್ಞಾನದ ದೀವಿಗೆಯತ್ತ ಪುಟ್ಟ ಕಂದಮ್ಮಗಳ ಪದಾರ್ಪಣೆ

    ದೊಡ್ಡಬೆಮ್ಮತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಭ್ರಮದ ಅಕ್ಷರಾಭ್ಯಾಸ: ಜ್ಞಾನದ ದೀವಿಗೆಯತ್ತ ಪುಟ್ಟ ಕಂದಮ್ಮಗಳ ಪದಾರ್ಪಣೆ

    ದೊಡ್ಡಬೆಮ್ಮತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಭ್ರಮದ ಅಕ್ಷರಾಭ್ಯಾಸ: ಜ್ಞಾನದ ದೀವಿಗೆಯತ್ತ ಪುಟ್ಟ ಕಂದಮ್ಮಗಳ ಪದಾರ್ಪಣೆ**


    **ಅರಕಲಗೂಡು:** ಅರಕಲಗೂಡು ತಾಲೂಕಿನ ಮಲ್ಲಿಪಟ್ಟಣ ಹೋಬಳಿ ವ್ಯಾಪ್ತಿಯಲ್ಲಿ ಬರುವ ದೊಡ್ಡಬೆಮ್ಮತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು, ವಿದ್ಯಾರ್ಥಿಗಳ ಪಾಲಿಗೆ ಜ್ಞಾನದ ದೇಗುಲವಾಗಿ ಕಾರ್ಯನಿರ್ವಹಿಸುತ್ತಿದೆ. ಇದೇ ಶಾಲೆಯಲ್ಲಿ ಇತ್ತೀಚೆಗೆ ಎಲ್‌ಕೆಜಿ ಮತ್ತು ಯುಕೆಜಿ ತರಗತಿಯ ಪುಟ

    ದೊಡ್ಡಬೆಮ್ಮತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಭ್ರಮದ ಅಕ್ಷರಾಭ್ಯಾಸ: ಜ್ಞಾನದ ದೀವಿಗೆಯತ್ತ ಪುಟ್ಟ ಕಂದಮ್ಮಗಳ ಪದಾರ್ಪಣೆ**


    **ಅರಕಲಗೂಡು:** ಅರಕಲಗೂಡು ತಾಲೂಕಿನ ಮಲ್ಲಿಪಟ್ಟಣ ಹೋಬಳಿ ವ್ಯಾಪ್ತಿಯಲ್ಲಿ ಬರುವ ದೊಡ್ಡಬೆಮ್ಮತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು, ವಿದ್ಯಾರ್ಥಿಗಳ ಪಾಲಿಗೆ ಜ್ಞಾನದ ದೇಗುಲವಾಗಿ ಕಾರ್ಯನಿರ್ವಹಿಸುತ್ತಿದೆ. ಇದೇ ಶಾಲೆಯಲ್ಲಿ ಇತ್ತೀಚೆಗೆ ಎಲ್‌ಕೆಜಿ ಮತ್ತು ಯುಕೆಜಿ ತರಗತಿಯ ಪುಟಾಣಿಗಳಿಗೆ ಅಕ್ಷರಾಭ್ಯಾಸ ಕಾರ್ಯಕ್ರಮವನ್ನು ಅತ್ಯಂತ ವೈಭವದಿಂದ ಆಚರಿಸಲಾಯಿತು.

    ಈ ಶಾಲೆಯು ಅರಕಲಗೂಡು ಕ್ಷೇತ್ರದ ಶಾಸಕರ ದೂರದೃಷ್ಟಿಯ ಫಲವಾಗಿ ಸುದೀರ್ಘ ಕಾಲದ ಹಿಂದೆ ಆರಂಭವಾದ 'ಮಕ್ಕಳ ಮನೆ' ಯೋಜನೆಯ ಭಾಗವಾಗಿದೆ. ಗ್ರಾಮೀಣ ಭಾಗದ ಬಡ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ದೊರೆಯಬೇಕೆಂಬ ಶಾಸಕರ ಆಶಯ ಮತ್ತು ಅವರ ವಿಶೇಷ ಮುತುವರ್ಜಿಯಿಂದ ಈ ಶಾಲೆ ಇಂದಿಗೂ ನೂರಾರು ಮಕ್ಕಳ ಪಾಲಿಗೆ ಭರವಸೆಯ ಬೆಳಕಾಗಿ ನಿಂತಿದೆ. ಅಕ್ಷರಾಭ್ಯಾಸದ ಈ ಕಾರ್ಯಕ್ರಮವು ಶಾಸಕರ ಆಶಯದಂತೆ ಶಾಲೆಯು ನಡೆಸಿಕೊಂಡು ಬರುತ್ತಿರುವ ಶಿಕ್ಷಣ ಪರ ಕಾರ್ಯಚಟುವಟಿಕೆಗಳ ಪ್ರತಿಬಿಂಬವಾಗಿದೆ.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಕುಮಾರಸ್ವಾಮಿ ಅವರು ವಹಿಸಿದ್ದರು. ಅಕ್ಷರಾಭ್ಯಾಸ ಎಂಬುದು ಮಗುವಿನ ಜೀವನದ ಶೈಕ್ಷಣಿಕ ಪಯಣದ ಮೊದಲ ಮೈಲಿಗಲ್ಲು ಎಂಬುದನ್ನು ಅವರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಪ್ರತಿಪಾದಿಸಿದರು.

    ಈ ಕಾರ್ಯಕ್ರಮದ ಅತ್ಯಂತ ವಿಶೇಷ ಹಾಗೂ ಭಾವುಕ ಕ್ಷಣವೆಂದರೆ ಪೋಷಕರ ಪಾಲ್ಗೊಳ್ಳುವಿಕೆ. ತಾಯಂದಿರು ತಮ್ಮ ಮುದ್ದು ಮಕ್ಕಳನ್ನು ಮಡಿಲಲ್ಲಿ ಕೂರಿಸಿಕೊಂಡು, ಅವರ ಕೈಹಿಡಿದು ತಟ್ಟೆಯಲ್ಲಿ ಅಕ್ಕಿಯ ಮೇಲೆ ಅಕ್ಷರಗಳನ್ನು ಬರೆಯುವಂತೆ ಪ್ರೇರೇಪಿಸುತ್ತಿದ್ದ ದೃಶ್ಯವು ನೆರೆದಿದ್ದವರ ಕಣ್ಣಲ್ಲಿ ಆನಂದಬಾಷ್ಪವನ್ನು ತರಿಸಿತು. ತಂದೆಯಂದಿರೂ ಸಹ ಅಷ್ಟೇ ಉತ್ಸಾಹದಿಂದ ಭಾಗವಹಿಸಿ, ತಮ್ಮ ಮಕ್ಕಳ ಭವಿಷ್ಯದ ಮೊದಲ ಹೆಜ್ಜೆಗೆ ಬೆಂಬಲವಾಗಿ ನಿಂತರು. ಪೋಷಕರು ಮತ್ತು ಮಕ್ಕಳ ನಡುವಿನ ಈ ಆತ್ಮೀಯ ಬಾಂಧವ್ಯವು ಅಕ್ಷರ ಕಲಿಕೆಯ ಈ ಕಾರ್ಯಕ್ರಮಕ್ಕೆ ವಿಶೇಷ ಮೆರುಗು ನೀಡಿತ್ತು.

    ಶಾಲೆಯ ಮುಖ್ಯ ಶಿಕ್ಷಕರಾದ ರಂಗಸ್ವಾಮಿ ಡಿ.ಜಿ. ಅವರು ಮಾತನಾಡಿ, "ಮಕ್ಕಳ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಪೋಷಕರು ಮತ್ತು ಶಿಕ್ಷಕರ ನಡುವಿನ ಸಮನ್ವಯ ಬಹಳ ಮುಖ್ಯ. ಶಾಸಕರ ಆಶಯದಂತೆ ನಮ್ಮ ಶಾಲೆಯು ಕೇವಲ ಅಕ್ಷರ ಜ್ಞಾನವಷ್ಟೇ ಅಲ್ಲದೆ, ಉತ್ತಮ ನೈತಿಕ ಮೌಲ್ಯಗಳನ್ನು ಹಾಗೂ ಸಂಸ್ಕಾರವನ್ನೂ ಕಲಿಸುವ ಕೇಂದ್ರವಾಗಿ ರೂಪುಗೊಂಡಿದೆ. ಈ ಶಾಲೆಯ ಬೆಳವಣಿಗೆಗೆ ಶಾಸಕರು ನೀಡುತ್ತಿರುವ ನಿರಂತರ ಬೆಂಬಲ ನಮಗೆ ಸ್ಪೂರ್ತಿಯಾಗಿದೆ" ಎಂದು ಕೃತಜ್ಞತೆ ಸಲ್ಲಿಸಿದರು.

    ಕಾರ್ಯಕ್ರಮದಲ್ಲಿ ಎಸ್.ಡಿ.ಎಮ್.ಸಿ ಉಪಾಧ್ಯಕ್ಷರಾದ ಸವಿತಾ ಅವರು ಉಪಸ್ಥಿತರಿದ್ದು, ಮಕ್ಕಳ ಕಲಿಕೆಗೆ ಪೋಷಕರ ಪ್ರೋತ್ಸಾಹದ ಅಗತ್ಯವನ್ನು ಒತ್ತಿ ಹೇಳಿದರು. ಅಲ್ಲದೆ, ಎಸ್.ಡಿ.ಎಮ್.ಸಿ ಸದಸ್ಯರಾದ ಶಂಕರ್ ಮುದಗನೂರು, ಮೆಡಿಕಲ್ ಸ್ವಾಮಿ, ಚಂದ್ರ, ದಿವ್ಯ ಮತ್ತು ರಾಜು ಸಿ.ವಿ. ಅವರು ಸಮಾರಂಭದಲ್ಲಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

    ಶಾಲೆಯ ಸಹ ಶಿಕ್ಷಕರಾದ ಮಹೇಶ ಡಿ.ಎಸ್., ಮುನಾಫ್, ಕುಮಾರಸ್ವಾಮಿ, ಪೃಥ್ವಿ, ಇಂಪನ ಮತ್ತು ರೇಣುಕ ಅವರು ಮಕ್ಕಳಿಗೆ ಅಕ್ಷರ ಬರೆಯುವ ಸರಳ ವಿಧಾನಗಳನ್ನು ತಿಳಿಸಿಕೊಟ್ಟು, ಆಟ-ಪಾಠಗಳ ಮೂಲಕ ಮಕ್ಕಳಲ್ಲಿ ಕಲಿಕಾಸಕ್ತಿಯನ್ನು ಮೂಡಿಸಿದರು. ಇಡೀ ದಿನ ಶಾಲೆಯ ಆವರಣವು ಮಕ್ಕಳ ನಗು ಮತ್ತು ಪೋಷಕರ ಸಂತೋಷದಿಂದ ಕಂಗೊಳಿಸುತ್ತಿತ್ತು. ಸಮಾರಂಭದ ಕೊನೆಯಲ್ಲಿ ಸಿಹಿತಿಂಡಿ ಹಂಚುವ ಮೂಲಕ ಸಂಭ್ರಮವನ್ನು ಇಮ್ಮಡಿಗೊಳಿಸಲಾಯಿತು.

    ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ವತಿಯಿಂದ ಜಿಲ್ಲಾಮಟ್ಟದ ಸಭೆ

    ದೊಡ್ಡಬೆಮ್ಮತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಭ್ರಮದ ಅಕ್ಷರಾಭ್ಯಾಸ: ಜ್ಞಾನದ ದೀವಿಗೆಯತ್ತ ಪುಟ್ಟ ಕಂದಮ್ಮಗಳ ಪದಾರ್ಪಣೆ

    ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ವತಿಯಿಂದ ಜಿಲ್ಲಾಮಟ್ಟದ ಸಭೆ

           ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ವತಿಯಿಂದ ಜಿಲ್ಲಾಮಟ್ಟದ ಸಭೆ


    ಈ ಸಭೆಯ ಕುರಿತು ಜಿಲ್ಲಾ ಮಟ್ಟದ ಹಾಗೂ ತಾಲ್ಲೂಕುಗಳಾದ ಅಜ್ಜಂಪುರ, ತರೀಕೆರೆ, ಕಡೂರು

    , ಚಿಕ್ಕಮಗಳೂರು ತಾಲ್ಲೂಕುಗಳ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಸಭೆ ಇಂದು ತರೀಕೆರೆಯ ಪ್ರವಾಸಿ ಮಂದಿರದಲ್ಲಿ ಜಿಲ್ಲಾಧ್ಯಕ್ಷರಾದ ಹೆಚ್ ಗುರುಮೂರ್ತಿ ಅವರ ಅದ್ಯಕ್ಷತೆಯಲ್ಲಿ ನಡೆಯಿತು.

    ಜಿಲ್ಲೆಯ ಈ ನಾಲ್ಕು ತಾಲ್ಲೂಕಿನ ಹಲವಾರು ಸಮಸ್ಯೆಗಳ ಬಗ್ಗೆ ಚರ್ಚಿಸಲ

           ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ವತಿಯಿಂದ ಜಿಲ್ಲಾಮಟ್ಟದ ಸಭೆ


    ಈ ಸಭೆಯ ಕುರಿತು ಜಿಲ್ಲಾ ಮಟ್ಟದ ಹಾಗೂ ತಾಲ್ಲೂಕುಗಳಾದ ಅಜ್ಜಂಪುರ, ತರೀಕೆರೆ, ಕಡೂರು

    , ಚಿಕ್ಕಮಗಳೂರು ತಾಲ್ಲೂಕುಗಳ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಸಭೆ ಇಂದು ತರೀಕೆರೆಯ ಪ್ರವಾಸಿ ಮಂದಿರದಲ್ಲಿ ಜಿಲ್ಲಾಧ್ಯಕ್ಷರಾದ ಹೆಚ್ ಗುರುಮೂರ್ತಿ ಅವರ ಅದ್ಯಕ್ಷತೆಯಲ್ಲಿ ನಡೆಯಿತು.

    ಜಿಲ್ಲೆಯ ಈ ನಾಲ್ಕು ತಾಲ್ಲೂಕಿನ ಹಲವಾರು ಸಮಸ್ಯೆಗಳ ಬಗ್ಗೆ ಚರ್ಚಿಸಲಾಯಿತು. ಹಾಗೂ ಸರ್ಕಾರಿ 

    ಕಛೇರಿಗಳಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ಬಗ್ಗೆ ಮತ್ತು ಜನಸಾಮಾನ್ಯರ ಮೇಲೆ ಅಧಿಕಾರಿಗಳ

     ದೌರ್ಜನ್ಯದ ಬಗ್ಗೆ ಪಡಿತರ ವಿತರಣೆ ಬಗ್ಗೆ ಕಳಪೆ ಕಾಮಗರಿಗಳ ಬಗ್ಗೆ ಮತ್ತು ಇನ್ನಿತರ ವಿಷಯಗಳ

     ಬಗ್ಗೆ ಹಾಗೂ ಸಂಘಟನೆಯ ಬೆಳವಣಿಗೆ ಹಾಗೂ ಕಾರ್ಯಾವೈಖರಿಯ ಬಗ್ಗೆ ಸುದೀರ್ಘವಾಗಿ ಚರ್ಚಿಸಲಾಯಿತು.


    ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಹೆಚ್ ಗುರುಮೂರ್ತಿ  ಅವರು ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷರಾದ 

    ದರ್ಶನ್ ಎಂ ಅವರು ಚಿಕ್ಕಮಗಳೂರು ಜಿಲ್ಲಾ ತಾಲ್ಲೂಕು ಅಧ್ಯಕರಾದ ಅನಿಲ್ ಕೆ ಪಿ ಅವರು ಕುಮಾರ

     ಅವರು 

    ಅಜ್ಜಂಪುರ ತಾಲ್ಲೂಕು ಅಧ್ಯಕ್ಷರಾದ ದೇವರಾಜ್ ಅವರು  ತರೀಕೆರೆ ಅಧ್ಯಕ್ಷರಾದ ನಿಶ್ಚಲ್ ಅವರು ಉಪಾಧ್ಯಕ್ಷರಾದ ರಾಕೇಶ್ ಪ್ರಧಾನ ಕಾರ್ಯದರ್ಶಿಗಳಾದ ಶರತ್ ಅವರು ಕಾರ್ಯದರ್ಶಿಗಳಾದ ಅಕಿಲ್

     ಅವರು ಮತ್ತು ಕಡೂರು ತಾಲ್ಲೂಕು ಅಧ್ಯಕ್ಷರಾದ ವಾಸು ಕೆ ಅವರು ಉಪಸ್ಥಿತರಿದ್ದರು. 

    ರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ 14 ಬಂಗಾರದ 24 ಬಳ್ಳಿ

    ಹಿಂದೂಗಳ ಪವಿತ್ರ ಕ್ಷೇತ್ರ ಧರ್ಮಸ್ಥಳದ ಘನತೆಗೆ ಧಕ್ಕೆ ಮತ್ತು ಕಳಂಕ ತರುತ್ತಿರುವವರನ್ನು ತಕ್ಷಣ ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಪ್ರತಿಭಟನೆ

    ಹಿಂದೂಗಳ ಪವಿತ್ರ ಕ್ಷೇತ್ರ ಧರ್ಮಸ್ಥಳದ ಘನತೆಗೆ ಧಕ್ಕೆ ಮತ್ತು ಕಳಂಕ ತರುತ್ತಿರುವವರನ್ನು ತಕ್ಷಣ ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಪ್ರತಿಭಟನೆ

    ಶಿವಮೊಗ್ಗ ನಗರದ ನೆಹರು ಕ್ರೀಡಾಂಗಣದಲ್ಲಿ 3ನೇ ರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾವಳಿ 

    ರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ 14 ಬಂಗಾರದ ಪದಕಗಳು 24 ಬಳ್ಳಿ 

    ಪದಕಗಳು ಹಾಗೂ 37 ಕಂಚಿನ ಪದಕಗಳು ಬೆಳೆಸಿದ್ದ ನ್ಯಾಷನಲ್ ಪಬ್ಲಿಕ್ ಸ್ಕೂಲ್, ಶಿವಮೊಗ್ಗ 


     ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ 3ನೇ ರಾಷ್ಟ್ರೀಯ ಮಟ್ಟದ ಕರಾಟೆ

    ಪಂದ್ಯಾವಳಿ ಯಶಸ್ವಿಯಾಗಿ ನಡೆಯಿತು. ಈ ಪಂದ್ಯಾವಳಿಯಲ್ಲಿ ಶಿವಮೊಗ್ಗ ಜಿಲ್ಲೆಯ 

    ನ್ಯಾಷನಲ್ ಪಬ್ಲಿಕ್

    ಶಿವಮೊಗ್ಗ ನಗರದ ನೆಹರು ಕ್ರೀಡಾಂಗಣದಲ್ಲಿ 3ನೇ ರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾವಳಿ 

    ರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ 14 ಬಂಗಾರದ ಪದಕಗಳು 24 ಬಳ್ಳಿ 

    ಪದಕಗಳು ಹಾಗೂ 37 ಕಂಚಿನ ಪದಕಗಳು ಬೆಳೆಸಿದ್ದ ನ್ಯಾಷನಲ್ ಪಬ್ಲಿಕ್ ಸ್ಕೂಲ್, ಶಿವಮೊಗ್ಗ 


     ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ 3ನೇ ರಾಷ್ಟ್ರೀಯ ಮಟ್ಟದ ಕರಾಟೆ

    ಪಂದ್ಯಾವಳಿ ಯಶಸ್ವಿಯಾಗಿ ನಡೆಯಿತು. ಈ ಪಂದ್ಯಾವಳಿಯಲ್ಲಿ ಶಿವಮೊಗ್ಗ ಜಿಲ್ಲೆಯ 

    ನ್ಯಾಷನಲ್ ಪಬ್ಲಿಕ್ ಸ್ಕೂಲ್ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಗಮನಾರ್ಹ ಸಾಧನೆ ಮೆರೆದಿದ್ದಾರೆ.


    ವಿದ್ಯಾರ್ಥಿಗಳು ವಿವಿಧ ವಿಭಾಗಗಳಲ್ಲಿ ಸ್ಪರ್ಧಿಸಿ ಒಟ್ಟು 14 ಬಂಗಾರದ ಪದಕಗಳು, 24 ಬೆಳ್ಳಿ ಪದಕಗಳು ಹಾಗೂ 37 ಕಂಚಿನ ಪದಕಗಳನ್ನು ಗಳಿಸಿದ್ದು, ಜೊತೆಗೆ ಸಮಗ್ರ ಪ್ರಶಸ್ತಿಯನ್ನು ಕೂಡ ತಮ್ಮದಾಗಿಸಿಕೊಂಡಿದ್ದಾರೆ.


    ಈ ಅತ್ಯುತ್ತಮ ಸಾಧನೆಗಾಗಿ ಶಾಲೆಯ ಪ್ರಾಂಶುಪಾಲರಾದ ನವೀನಾ ಎಂ. ಪೈಸ್, ಶಾಲಾ ಮ್ಯಾನೇಜ್ಮೆಂಟ್, ಶಿಕ್ಷಕ ವೃಂದ ಹಾಗೂ ಪೋಷಕರು ವಿದ್ಯಾರ್ಥಿಗಳಿಗೆ ಹಾರ್ದಿಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.


    ಈ ಸಂದರ್ಭದಲ್ಲಿ ಕರಾಟೆ ತರಬೇತುದಾರರಾದ ಸೆನ್ಸೈ ಮಂಜುನಾಥ್ ಹಾಗೂ ಸಹ ತರಬೇತಿದಾರರು ವಿದ್ಯಾರ್ಥಿಗಳ ಶಿಸ್ತು, ಪರಿಶ್ರಮ ಮತ್ತು ಸಾಧನೆಯನ್ನು ಶ್ಲಾಘಿಸಿ ಅಭಿನಂದನೆಗಳನ್ನು ಸಲ್ಲಿಸಿದರು.

    ಹಿಂದೂಗಳ ಪವಿತ್ರ ಕ್ಷೇತ್ರ ಧರ್ಮಸ್ಥಳದ ಘನತೆಗೆ ಧಕ್ಕೆ ಮತ್ತು ಕಳಂಕ ತರುತ್ತಿರುವವರನ್ನು ತಕ್ಷಣ ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಪ್ರತಿಭಟನೆ

    ಹಿಂದೂಗಳ ಪವಿತ್ರ ಕ್ಷೇತ್ರ ಧರ್ಮಸ್ಥಳದ ಘನತೆಗೆ ಧಕ್ಕೆ ಮತ್ತು ಕಳಂಕ ತರುತ್ತಿರುವವರನ್ನು ತಕ್ಷಣ ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಪ್ರತಿಭಟನೆ

    ಹಿಂದೂಗಳ ಪವಿತ್ರ ಕ್ಷೇತ್ರ ಧರ್ಮಸ್ಥಳದ ಘನತೆಗೆ ಧಕ್ಕೆ ಮತ್ತು ಕಳಂಕ ತರುತ್ತಿರುವವರನ್ನು ತಕ್ಷಣ ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಪ್ರತಿಭಟನೆ


    ಸೊರಬ: ಹಿಂದೂಗಳ ಪವಿತ್ರ ಕ್ಷೇತ್ರ ಧರ್ಮಸ್ಥಳದ ಘನತೆಗೆ ಧಕ್ಕೆ ಮತ್ತು ಕಳಂಕ ತರುತ್ತಿರುವವರನ್ನು ತಕ್ಷಣ ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಬಿಜೆಪಿ ಸೊರಬ ಮಂಡಲ ವತಿಯಿಂದ ಹಿಂದೂಪರ ಸಂಘಟನೆಗಳು ಹಾಗೂ ಭಕ್ತಾದಿಗಳ ನೇತೃತ್ವದಲ್ಲಿ ಶಿವಮೊಗ್ಗ ಜಿಲ್ಲೆ ಸೊರಬ ಪಟ್ಟಣದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.

    ಸೊರಬ ಪಟ್ಟಣದ ಶ್ರೀ ರಂಗನಾಥ ಸ್ವಾಮಿ ದೇವಸ್ಥಾನದಿಂದ ಮೆರವಣಿಗೆಯಲ್ಲಿ ತೆರಳಿ ಖಾಸಗ


    ಸೊರಬ: ಹಿಂದೂಗಳ ಪವಿತ್ರ ಕ್ಷೇತ್ರ ಧರ್ಮಸ್ಥಳದ ಘನತೆಗೆ ಧಕ್ಕೆ ಮತ್ತು ಕಳಂಕ ತರುತ್ತಿರುವವರನ್ನು ತಕ್ಷಣ ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಬಿಜೆಪಿ ಸೊರಬ ಮಂಡಲ ವತಿಯಿಂದ ಹಿಂದೂಪರ ಸಂಘಟನೆಗಳು ಹಾಗೂ ಭಕ್ತಾದಿಗಳ ನೇತೃತ್ವದಲ್ಲಿ ಶಿವಮೊಗ್ಗ ಜಿಲ್ಲೆ ಸೊರಬ ಪಟ್ಟಣದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.

    ಸೊರಬ ಪಟ್ಟಣದ ಶ್ರೀ ರಂಗನಾಥ ಸ್ವಾಮಿ ದೇವಸ್ಥಾನದಿಂದ ಮೆರವಣಿಗೆಯಲ್ಲಿ ತೆರಳಿ ಖಾಸಗಿ ಬಸ್ ನಿಲ್ದಾಣದ ಆವರಣದಲ್ಲಿ ಬಹಿರಂಗ ಸಭೆ ನಡೆಸಲಾಯಿತು.  ಸಭೆಯನ್ನುದ್ದೇಶಿಸಿ ಬಿಜೆಪಿ ಮುಖಂಡ ಹಾಗೂ ಸಂಚಾಲಕ ಡಾಕ್ಟರ್ ಜ್ಞಾನೇಶ್ ಹೆಚ್.ಈ ಮಾತನಾಡಿ ಇತ್ತೀಚಿನ ದಿನಗಳಲ್ಲಿ ಪಟ್ಟಬದ್ಧ ಹಿತಾಸಕ್ತಿಗಳು ಹಾಗೂ ಹಿಂದೂ ವಿರೋಧಿ ಶಕ್ತಿಗಳು ಸಂಘಟಿತವಾಗಿ ಧರ್ಮಸ್ಥಳ ಕ್ಷೇತ್ರದ ಬಗ್ಗೆ ಅಪಪ್ರಚಾರ ನಡೆಸುತ್ತಿದ್ದು, ಧರ್ಮಸ್ಥಳದ ಗೌರವ ಹಾಗೂ ಘನತೆಗೆ ಧಕ್ಕೆ ತರುವಂತ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಇದು ಕೋಟ್ಯಂತರ ಕನ್ನಡಿಗರ ಭಾವನೆಗಳಿಗೆ ನೋವುಂಟು ಮಾಡುವುದರೊಂದಿಗೆ ಸಮಾಜದ ಶಾಂತಿ-ಸೌಹಾರ್ದತೆಗೂ ಧಕ್ಕೆ ತರುತ್ತಿದೆ. ಹಿಂದೂ ಪರಂಪರೆಯ ನಾವೆಲ್ಲರೂ ಸ್ವಾಭಿಮಾನಿಗಳಾಗಿದ್ದೇವೆ. ಅಂದು ಸೋಮನಾಥ, ವಿಶ್ವನಾಥ ಇಂದು ಮಂಜುನಾಥನ ಅಸ್ವಿತ್ವವನ್ನೇ ಪ್ರಶ್ನಿಸಲು ಮುಂದಾಗಿದ್ದಾರೆ. ಘಜ್ನಿ ಸಂತತಿಯವರು ಅಂದೂ, ಇಂತಹ ಸಂತತಿಗೆ ನಾವೆಲ್ಲರೂ ವಿಚಲಿತರಾಗಬೇಕಿಲ್ಲ ಎಂದರು.

    ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ರಾಜು ಎಂ ತಲ್ಲೂರು ಮಾತನಾಡಿ, ಇಂದು ನಾವು ಧರ್ಮದ ಉಳಿವಿಗಾಗಿ ಹೋರಾಟ ನಡೆಸುವ ಹೋರಾಟ ಹಿಂದೂ ವಿರೋಧಿಗಳಿಗೆ ಇದು ಎಚ್ಚರಿಕೆಯ ಘಂಟೆ. ಧರ್ಮಸ್ಥಳ ನಮಗೆ ಕಲಿಸಿದ್ದು ಧರ್ಮ, ಆಸ್ತಿಕತೆ. ಪ್ರತಿ ಭಕ್ತ ಹಸಿವನ್ನು ತೀರಿಸುವ ಕ್ಷೇತ್ರ ಧರ್ಮಸ್ಥಳ. ಇಂತಹ ಕ್ಷೇತ್ರದ ಬಗ್ಗೆ ಅಪಪ್ರಚಾರ ಮಾಡುತ್ತಿರುವುದು ಅತಿದೊಡ್ಡ ಷಡ್ಯಂತ್ರವಾಗಿದೆ. ಹಿಂದೂಗಳ ವಿರುದ್ಧ ಇದೇ ರೀತಿ ಮುಂದುವರೆದರೆ ದೇಶಾದ್ಯಂತ ಹೋರಾಟ ನಡೆಸಬೇಕಾಗುತ್ತದೆ. ರಾಜ್ಯ ಸರ್ಕಾರವು ಈ ಷಡ್ಯಂತ್ರಕ್ಕೆ ಒಳಗಾಗದೇ ನಮ್ಮ ಹಿಂದುತ್ವವನ್ನು ಉಳಿಸಲು ಮುಂದಾಗಬೇಕು ಎಂದು ಎಚ್ಚರಿಸಿದರು.

    ವಿಧಾನ ಪರಿಷತ್ ಸದಸ್ಯ ಧನಂಜಯ ಸರ್ಜಿ ಮಾತನಾಡಿ ಈ ಷಡ್ಯಂತ್ರದ ಪಿತೂರಿ ಮಾಡಿರುವ ಸಮಾಜ ಘಾತುಕರ ವಿರುದ್ಧ ಹಾಗೂ ರಾಷ್ಟçವಿರೋಧಿ ಚಟುವಟಿಕೆ ನಡೆಸುತ್ತಿರುವವರ ವಿರುದ್ಧ ಕಾನೂನು ರೀತ್ಯ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

    ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹರಿಕೃಷ್ಣ, ಮಂಡಲ ಅಧ್ಯಕ್ಷ ಪ್ರಕಾಶ್ ಅಗಸನಹಳ್ಳಿ ಮಾತನಾಡಿದರು.

    ಪ್ರಮುಖರಾದ ದೇವೇಂದ್ರಪ್ಪ ಚನ್ನಾಪುರ, ಪ್ರಕಾಶ್ ತಲಕಾಲಕೊಪ್ಪ, ಪಾಣಿರಾಜಪ್ಪ, ವಿಜೇಂದ್ರ ತಲಗುಂದ, ಸುರೇಶ್ ಉದ್ರಿ, ಡಿ. ಶಿವಯೋಗಿ, ಉಮೇಶ್ ಉಡುಗಣಿ, ಗೀತಾ ಮಲ್ಲಿಕಾರ್ಜುನ, ಜಾನಕಪ್ಪ ಒಡೆಯರ್, ಹೊಳಿಯಮ್ಮ ಸೇರಿದಂತೆ ಮುಖಂಡರು, ಕಾರ್ಯಕರ್ತರು, ಭಕ್ತಾದಿಗಳು, ಹಿಂದೂಪರ ಸಂಘಟನೆಯವರು ಪಾಲ್ಗೊಂಡಿದ್ದರು.



    ನಮ್ಮ ತಂಡ

    ವಿಜಯಪುರ ಜಿಲ್ಲಾ ವರದಿಗಾರರು

    Established in 2005, arakshakavaninews has been the go-to source for the latest news and trends in the newspaper and magazine industry. Our journey began with a small team of journalists who shared a passion for storytelling and a desire to inform and engage readers. Over the years, we have grown and expanded our team, but our commitment to delivering high-quality content has never wavered.

    Our Values

    At arakshakavaninews, we value integrity, accuracy, and creativity. We are committed to providing our readers with truthful and unbiased information, and we strive to be a trusted source of news and information for our community. We believe that great content is a result of hard work, dedication, and a willingness to take risks and try new things.

    Our Team

    Our Team

    Our team is made up of talented journalists, editors, and designers who are passionate about their work. We are dedicated to delivering the best possible content to our readers, and we take pride in the quality of our work. We believe that our team is our greatest asset, and we are committed to investing in their professional development and growth.

    ನಮ್ಮ ತಂಡ

    Our Philosophy

    Sustainability Efforts

    Diversity in Media

    At arakshakavaninews, we believe in the transformative power of news. Our philosophy revolves around transparency, integrity, and the pursuit of truth.

    Diversity in Media

    Sustainability Efforts

    Diversity in Media

    We celebrate diversity at arakshakavaninews. Our newsroom is a melting pot of ideas and perspectives, ensuring a well-rounded representation of news.

    Sustainability Efforts

    Sustainability Efforts

    Sustainability Efforts

    As a responsible news organization, arakshakavaninews is committed to sustainability. We are continuously looking for ways to minimize our environmental impact.

    Behind the Pages: A Look at the People and Stories Behind the Headlines

      My Blog

      ತರೀಕೆರೆ ರಾಜ್ಯ ಮಟ್ಟದ ಜಂಗಿ ಬಯಲು ಕುಸ್ತಿ ಸ್ಪರ್ಧೆ

      ತರೀಕೆರೆ : ಪುರಸಭಾ ಸದಸ್ಯ ಲೋಕಾಯುಕ್ತ ಬಲೆಗೆ.

      ತರೀಕೆರೆ : ಪುರಸಭಾ ಸದಸ್ಯ ಲೋಕಾಯುಕ್ತ ಬಲೆಗೆ.

      ತರೀಕೆರೆ ರಾಜ್ಯಮಟ್ಟದ ಜಂಗಿ ಬಯಲು ಕುಸ್ತಿ ಸ್ಪರ್ಧೆ

      What's something exciting your business offers? Say it here.

      Close the deal

      Give customers a reason to do business with you.

      Video

      Grab interest

      Say something interesting about your business here.

      Generate excitement

      What's something exciting your business offers? Say it here.

      Video

      Grab interest

      Say something interesting about your business here.

      Generate excitement

      What's something exciting your business offers? Say it here.

      Contact Us

      What are you thinking about?

      Have a story idea for us? Would you like to write for us? 

      Send us a message and let us know what you are thinking about.

      Message us on WhatsApp

      arakshakavaninews

      Bhovi Colony, 3rd cross, Kodi camp, Tarikere taluk, Chikkamagaluru Dist., Bhovi colony/Lingadahalli main road, Tarikere, KA 577228

      +91 9880958680

      Hours

      Mon

      12:00 am – 12:00 am

      Tue

      12:00 am – 12:00 am

      Wed

      12:00 am – 12:00 am

      Thu

      12:00 am – 12:00 am

      Fri

      12:00 am – 12:00 am

      Sat

      12:00 am – 12:00 am

      Sun

      12:00 am – 12:00 am

      Social

      Subscribe

      Sign up to get each issue delivered straight to your inbox.


      Copyright © 2026 arakshakavaninews - All Rights Reserved.

      Powered by

      This website uses cookies.

      We use cookies to analyze website traffic and optimize your website experience. By accepting our use of cookies, your data will be aggregated with all other user data.

      Accept